ಏರಿದ ತರಕಾರಿ ಬೆಲೆ, ಮೊಟ್ಟೆಯ ದರ ಕೊಂಚ ಇಳಿಕೆ
Recommended Video

ಬೆಂಗಳೂರು, ಏಪ್ರಿಲ್ 05: ಬೇಸಿಗೆಯಲ್ಲಿ ನೀರಿನ ಅಭಾವ ಒಂದೆಡೆಯಾದರೆ, ಹಲವೆಡೆ ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ತರಕಾರಿಗಳ ಬೆಳೆಗಳು ಹಾಳಾಗಿವೆ. ಹಾಗಾಗಿ ಸಾಕಷ್ಟು ತರಕಾರಿಗಳ ಬೆಲೆ ಏರಿಕೆಯಾಗಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ಹೀಗಾಗಿ ಬೀನ್ಸ್, ಟೊಮೇಟೋ ಮತ್ತಿತರೆ ತರಕಾರಿಗಳ ದರದಲ್ಲಿ ಏರಿಕೆಯಾಗಿದೆ. ಮಾರ್ಚ್ ನಲ್ಲಿ ಬೀನ್ಸ್ 25ರೂ ಇದ್ದಿದ್ದು, ಇದೀಗ ಕೆಜಿಗೆ 44ರೂ. ತಲುಪಿದೆ. 10ರೂ. ಇದ್ದ ಟೊಮೇಟೊ ದರ 20ರೂ.ಗೆ ಏರಿಕೆಯಾಗಿದೆ. ಸೌತೆಕಾಯಿ ದರ ಒಂದಕ್ಕೆ 10ರೂ. ತಲುಪಿದೆ. ಬೆಂಡೆಕಾಯಿ 38ರೂ.ಇದೆ. ಕೊತ್ತಂಬರಿ ಸೊಪ್ಪು ಸೇರಿದಂತೆ ಇತರೆ ಸೊಪ್ಪುಗಳ ದರವೂ ಏರಿಕೆಯಾಗಿದೆ.
ಮೊಟ್ಟೆಗಳ ದರ ಇಳಿಕೆ: ಕೆಲ ತಿಂಗಳ ಹಿಂದೆ 6ರೂ.ವರೆಗೆ ಏರಿಕೆಯಾಗಿದ್ದ ಮೊಟ್ಟೆಯ ದರ ಇದೀಗ ಕಡಿಮೆಯಾಗಿದೆ. ಚಿಲ್ಲರೆ ಮೊಟ್ಟೆಯೊಂದರ ಬೆಲೆ 4.30ರಿಂದ 5 ರೂಗೆ ಇಳಿದಿದೆ. ಸರ್ಕಾರದ ವತಿಯಿಂದ ಅಂಗನವಾಡಿ ಮಕ್ಕಳಿಗೆ ವಾರಕ್ಕೆ ಎರಡು ದಿನ ಬೇಯಿಸಿದ ಮೊಟ್ಟೆ ನೀಡಲಾಗುತ್ತದೆ.

ಶಾಲೆಗಳಿಗೆ ನೀಡುವಂತೆ ಬೇಸಿಗೆ ರಜೆಯನ್ನು ಅಂಗನವಾಡಿಗಳಿಗೆ ನೀಡುವುದಿಲ್ಲವಾದರೂ ಈ ಅವಧಿಯಲ್ಲಿ ಹೆಚ್ಚಿನ ಮಕ್ಕಳು ಅಲ್ಲಿಗೆ ಬರುವುದಿಲ್ಲ ಇವೆಲ್ಲ ಕಾರಣಗಳಿಂದ ಮೊಟ್ಟೆಯ ದರ ಕಡಿಮೆಯಗಿದೆ.
ಬೇಸಿಗೆಯಲ್ಲಿ ಕೋಳಿಗಳು ಜೋಳ ಮತ್ತಿತರೆ ಆಹಾರ ಪದಾರ್ಥಗಳನ್ನು ಸೇವಿಸುವುದು ಕಡಿಮೆ. ಈ ಋತುವಿನಲ್ಲಿ ಹೆಚ್ಚಾಗಿ ನೀರು ಕುಡಿಯುತ್ತವೆ. ರಾಜ್ಯದಲ್ಲಿ ನಿತ್ಯ 1.20 ಕೋಟಿ ಮೊಟ್ಟೆ ಉತ್ಪಾದನೆಯಾಗುತ್ತದೆ. ಬೇಸಿಗೆಯಲ್ಲಿ ಉತ್ಪಾದನಾ ಪ್ರಮಾಣದಲ್ಲಿ ಶೇ.10-15ರಷ್ಟು ಇಳಿಕೆಯಾಗುತ್ತಿದೆ ಎಂದು ಎನ್ಇಸಿಸಿ ಬೆಂಗಳೂರು ವಲಯದ ಅಧ್ಯಕ್ಷ ಬಿ.ಆರ್. ಸಾಯಿನಾಥ್ ಮಾಹಿತಿ ನೀಡಿದ್ದಾರೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications