ಹಾಪ್ಕಾಮ್ಸ್ನಲ್ಲಿ ಬಾಯಲ್ಲಿ ನೀರೂರಿಸುವ ದ್ರಾಕ್ಷಿ-ಕಲ್ಲಂಗಡಿ ಮೇಳ
ಬೆಂಗಳೂರು, ಫೆಬ್ರವರಿ 18: ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘ(ಹಾಪ್ಕಾಮ್ಸ್) ಲಾಲ್ಬಾಗ್ನಲ್ಲಿರುವ ಹಾಪ್ಕಾಮ್ಸ್ ಕೇಂದ್ರ ಕಚೇರಿಯಲ್ಲಿ ದ್ರಾಕ್ಷಿ-ಕಲ್ಲಂಗಡಿ ಮೇಳವನ್ನು ಆಯೋಜಿಸಿದೆ.
ದ್ರಾಕ್ಷಿ ಹಾಗೂ ಕಲ್ಲಂಗಡಿ ಬೆಳಗಾರರನ್ನು ಪ್ರೋತ್ಸಾಹಿಸುವ , ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಉತ್ತಮ ಗುಣಮಟ್ಟದ ಹಣ್ಣು ಒದಗಿಸಲು ಮೇಳ ಏರ್ಪಡಿಸಿದ್ದೇವೆ ಎಂದು ಹಾಪ್ಕಾಮ್ಸ್ ಅಧ್ಯಕ್ಷ ಎಎಸ್ ಚಂದ್ರಶೇಖರ್ ತಿಳಿಸಿದ್ದಾರೆ.
ಈ ಮೇಳದ ಅವಧಿಯಲ್ಲಿ ನಗರದಲ್ಲಿರುವ 200 ಕ್ಕೂ ಅಧಿಕ ಹಾಪ್ಕಾಮ್ಸ್ ಮಳಿಗೆಗಳಲ್ಲಿ ಗ್ರಾಹಕರು ಹಣ್ಣುಗಳನ್ನು ಖರದೀದಿಸಬಹುದು.

ಶರದ್ ಸೀಡ್ಲೆಸ್, ಕೃಷ್ಣ ಶರದ್, ಥಾಮ್ಸನ್ , ಜಂಬೂ ಸೇರಿದಂತೆ ಅಂದಾಜು ತಳಿಯ ದ್ರಾಕ್ಷಿ, ಐದು ಬಗೆಯ ಕಲ್ಲಂಗಡಿ ಜೊತೆಗೆ ಖರ್ಬೂಜ, ಕಿತ್ತಳೆ, ಚಕ್ಕೋತ, ಒಣದ್ರಾಕ್ಷಿ ಮತ್ತಿತರ ಡ್ರೈಫ್ರೂಟ್ಸ್ಗಳು ಶೇ.10 ರಿಯಾಯಿತಿ ದರದಲ್ಲಿ ದೊರೆಯುತ್ತವೆ.
ಬೆಳಗಾವಿ, ಬಿಜಾಪುರ, ಬಾಗಲಕೋಟೆ ಮತ್ತು ಚಿಕ್ಕಬಳ್ಳಾಪುರಗಳಲ್ಲಿ ಒಟ್ಟು 26,600 ಹೆಕ್ಟೇರ್ ಪ್ರದೇಶದಲ್ಲಿ ದ್ರಾಕ್ಷಿ , ಕಲ್ಲಂಗಡಿ ಬೆಳೆಯಲಾಗಿದೆ. ಆ ಭಾಗಗಳಲ್ಲಿ ರೈತರಿಗೆ ಮೇಳದ ಲಾಭ ಪಡೆಯುವಂತೆ ಕೋರಲಾಗಿದೆ. ಈ ಬಾರಿ 500 ಟನ್ ದ್ರಾಕ್ಷಿ ಹಾಗೂ 1500 ಕಲ್ಲಂಗಡಿ ಮಾರಾಟ ಮಾಡುವ ಗುರಿಯನ್ನು ಹೊಂದಿದ್ದಾರೆ.
ತೋಟಗಾರಿಕೆ ಸಚಿವ ನಾರಾಯಣ ಗೌಡ ಅವರು ಫೆ.19ರಂದು ಮೇಳ ಉದ್ಘಾಟಿಸಲಿದ್ದಾರೆ. ಸಚಿವ ವಿ. ಸೋಮಣ್ಣ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಆಗಮಿಸಲಿದ್ದಾರೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications