ಹಾಪ್ಕಾಮ್ಸ್ನಲ್ಲಿ ಬಾಯಲ್ಲಿ ನೀರೂರಿಸುವ ದ್ರಾಕ್ಷಿ-ಕಲ್ಲಂಗಡಿ ಮೇಳ
ಬೆಂಗಳೂರು, ಫೆಬ್ರವರಿ 18: ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘ(ಹಾಪ್ಕಾಮ್ಸ್) ಲಾಲ್ಬಾಗ್ನಲ್ಲಿರುವ ಹಾಪ್ಕಾಮ್ಸ್ ಕೇಂದ್ರ ಕಚೇರಿಯಲ್ಲಿ ದ್ರಾಕ್ಷಿ-ಕಲ್ಲಂಗಡಿ ಮೇಳವನ್ನು ಆಯೋಜಿಸಿದೆ.
ದ್ರಾಕ್ಷಿ ಹಾಗೂ ಕಲ್ಲಂಗಡಿ ಬೆಳಗಾರರನ್ನು ಪ್ರೋತ್ಸಾಹಿಸುವ , ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಉತ್ತಮ ಗುಣಮಟ್ಟದ ಹಣ್ಣು ಒದಗಿಸಲು ಮೇಳ ಏರ್ಪಡಿಸಿದ್ದೇವೆ ಎಂದು ಹಾಪ್ಕಾಮ್ಸ್ ಅಧ್ಯಕ್ಷ ಎಎಸ್ ಚಂದ್ರಶೇಖರ್ ತಿಳಿಸಿದ್ದಾರೆ.
ಈ ಮೇಳದ ಅವಧಿಯಲ್ಲಿ ನಗರದಲ್ಲಿರುವ 200 ಕ್ಕೂ ಅಧಿಕ ಹಾಪ್ಕಾಮ್ಸ್ ಮಳಿಗೆಗಳಲ್ಲಿ ಗ್ರಾಹಕರು ಹಣ್ಣುಗಳನ್ನು ಖರದೀದಿಸಬಹುದು.

ಶರದ್ ಸೀಡ್ಲೆಸ್, ಕೃಷ್ಣ ಶರದ್, ಥಾಮ್ಸನ್ , ಜಂಬೂ ಸೇರಿದಂತೆ ಅಂದಾಜು ತಳಿಯ ದ್ರಾಕ್ಷಿ, ಐದು ಬಗೆಯ ಕಲ್ಲಂಗಡಿ ಜೊತೆಗೆ ಖರ್ಬೂಜ, ಕಿತ್ತಳೆ, ಚಕ್ಕೋತ, ಒಣದ್ರಾಕ್ಷಿ ಮತ್ತಿತರ ಡ್ರೈಫ್ರೂಟ್ಸ್ಗಳು ಶೇ.10 ರಿಯಾಯಿತಿ ದರದಲ್ಲಿ ದೊರೆಯುತ್ತವೆ.
ಬೆಳಗಾವಿ, ಬಿಜಾಪುರ, ಬಾಗಲಕೋಟೆ ಮತ್ತು ಚಿಕ್ಕಬಳ್ಳಾಪುರಗಳಲ್ಲಿ ಒಟ್ಟು 26,600 ಹೆಕ್ಟೇರ್ ಪ್ರದೇಶದಲ್ಲಿ ದ್ರಾಕ್ಷಿ , ಕಲ್ಲಂಗಡಿ ಬೆಳೆಯಲಾಗಿದೆ. ಆ ಭಾಗಗಳಲ್ಲಿ ರೈತರಿಗೆ ಮೇಳದ ಲಾಭ ಪಡೆಯುವಂತೆ ಕೋರಲಾಗಿದೆ. ಈ ಬಾರಿ 500 ಟನ್ ದ್ರಾಕ್ಷಿ ಹಾಗೂ 1500 ಕಲ್ಲಂಗಡಿ ಮಾರಾಟ ಮಾಡುವ ಗುರಿಯನ್ನು ಹೊಂದಿದ್ದಾರೆ.
ತೋಟಗಾರಿಕೆ ಸಚಿವ ನಾರಾಯಣ ಗೌಡ ಅವರು ಫೆ.19ರಂದು ಮೇಳ ಉದ್ಘಾಟಿಸಲಿದ್ದಾರೆ. ಸಚಿವ ವಿ. ಸೋಮಣ್ಣ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಆಗಮಿಸಲಿದ್ದಾರೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications