ಡಿಜಿಟಲ್ ಸ್ಪರ್ಷದೊಂದಿಗೆ ಹಾಪ್ಕಾಮ್ಸ್ ಮಾವು-ಹಲಸು ಮೇಳ ಆರಂಭ
ಬೆಂಗಳೂರು, ಏಪ್ರಿಲ್ 28: ಇಂದಿನಿಂದ ಈ ಬಾರಿಯ ಹಾಪ್ಕಾಮ್ಸ್ ಮಾವು-ಹಲಸು ಮೇಳ ಆರಂಭವಾಗಿದೆ. ಜುಲೈವರಗೆ ಈ ಮೇಳ ನಡೆಯಲಿದೆ.
ಇಂದು ಸಂಜೆ 4 ಗಂಟೆಗೆ ಹಡ್ಸನ್ ವೃತ್ತದಲ್ಲಿರುವ ಹಾಪ್ಕಾಮ್ಸ್ ಶೀಥಲೀಕರಣ ಘಟಕದಲ್ಲಿ ಮಾವು ಮತ್ತು ಹಲಸು ಮೇಳಕ್ಕೆ ತೋಟಗಾರಿಕೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಚಾಲನೆ ನೀಡಿದರು.
ಮೇಳದ ಪ್ರಯುಕ್ತ ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಹಣ್ಣುಗಳನ್ನು ಮಾರಲಾಗುತ್ತದೆ. ಶೇಕಡಾ 10ರ ರಿಯಾಯಿತಿಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ರಾಮನಗರದ ಎಲ್ಲಾ ಹಾಪ್ಕಾಮ್ಸ್ ಮಳಿಗೆಗಳಲ್ಲಿ ಮಾವು ಮತ್ತು ಹಲಸು ದೊರೆಯಲಿದೆ.

10-15 ಬಗೆಯ ಮಾವು
ಮೇಳದಲ್ಲಿ ಬಾದಾಮಿ, ಆಲ್ಫೋನ್ಸೋ, ಮಲಗೋವ, ಕಾಲಪಾಡ್, ರಸಪುರಿ, ಮಲ್ಲಿಕಾ, ಸಿಂಧೂರಾ, ದಶೇರಿ, ಬಂಗನಪಲ್ಲಿ, ಕೇಸರ್, ಸಕ್ಕರೆಗುತ್ತಿ, ತೋತಾಪುರಿ ಸೇರಿದಂತೆ ಸುಮಾರು 10-15 ತಳಿಗಳ ಮಾವಿನ ಹಣ್ಣುಗಳ ಮಾರಾಟ ನಡೆಯಲಿದೆ.
ಇನ್ನು ಸಕ್ಕರಾಯಪಟ್ಟಣ, ಚಂದ್ರ, ತೂಬಿಗೆರೆ, ಜಾನಗೆರೆ, ಬೈರಸಂದ್ರ ಹಾಗೂ ಗಮ್ ಲೆಸ್ ಹಲಸು ತಳಿಗಳ ಮಾರಾಟವೂ ನಡೆಯಲಿದೆ.
ಮೇಳದಲ್ಲಿ ಸಂಪೂರ್ಣ ನೈಸರ್ಗಿಕವಾಗಿ ಹಣ್ಣಾದ ಮಾವುಗಳಿಗೆ ಮಾತ್ರ ಮಾರಲು ಅವಕಾಶ ನೀಡಲಾಗಿದೆ. ಇನ್ನು ರೈತರಿಂದ ನೇರವಾಗಿ ಖರೀದಿಸಿ ಹಣ್ಣುಗಳನ್ನು ಇಲ್ಲಿ ಮಾರಲಾಗುತ್ತದೆ. ಈ ಬಾರಿಯ ಮೇಳದಲ್ಲಿ 1000 ಮೆಟ್ರಿಕ್ ಟನ್ ಮಾವು ಹಾಗೂ 250 ಮೆಟ್ರಿಕ್ ಟನ್ ಹಲಸು ಮಾರಾಟದ ಗುರಿ ಹಾಕಿಕೊಳ್ಳಲಾಗಿದೆ.

ಮೇಳಕ್ಕೆ ಡಿಜಿಟಲ್ ಸ್ಪರ್ಷ
ಈ ಬಾರಿಯ ಹಾಪ್ಕಾಮ್ಸ್ ಮಾವು ಮತ್ತು ಹಲಸಿನ ಮೇಳಕ್ಕೆ ಡಿಜಿಟಲ್ ಸ್ಪರ್ಷ ನೀಡಲಾಗಿದೆ. ಫ್ಲಿಪ್ಕಾರ್ಟ್ ಪೇಮೆಂಟ್ ಆ್ಯಪ್ 'ಫೋನ್ಪೇ' ಜತೆ ಹಾಪ್ಕಾಮ್ಸ್ ಒಪ್ಪಂದ ಮಾಡಿಕೊಂಡಿದೆ. ಇದರಿಂದಾಗಿ ಮೊಟ್ಟ ಮೊದಲ ಬಾರಿಗೆ ಆ್ಯಪ್ ಮೂಲಕ ಪೇಮೆಂಟ್ ಮಾಡುವವರು ರೂ. 50 ರಿಯಾಯಿತಿಯನ್ನೂ ಪಡೆದುಕೊಳ್ಳಬಹುದು.
-
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ












Click it and Unblock the Notifications