ಫೆ.12ರಿಂದ ಹಾಪ್ಕಾಮ್ಸ್ನಲ್ಲಿ ದ್ರಾಕ್ಷಿ, ಕಲ್ಲಂಗಡಿ ಮೇಳ
ಬೆಂಗಳೂರು, ಫೆ. 11 : ದ್ರಾಕ್ಷಿ ಮತ್ತು ಕಲ್ಲಂಗಡಿ ಹಣ್ಣು ಪ್ರಿಯರಿಗೆ ಸಿಹಿ ಸುದ್ದಿ. ಹಾಪ್ಕಾಮ್ಸ್ ಫೆ.12ರಿಂದ ದ್ರಾಕ್ಷಿ ಹಾಗೂ ಕಲ್ಲಂಗಡಿ ಮೇಳವನ್ನು ಆಯೋಜಿಸಿದೆ. ನಗರದ ಎಲ್ಲಾ ಮಳಿಗೆಗಳಲ್ಲಿ ವಿವಿಧ ಬಗೆಯ ಹಣ್ಣುಗಳು ಲಭ್ಯವಿರಲಿವೆ.
ದ್ರಾಕ್ಷಿ ಹಾಗೂ ಕಲ್ಲಂಗಡಿ ಮೇಳ ಫೆ.12ರಂದು ಆರಂಭಗೊಳ್ಳಲಿದ್ದು ಬೆಂಗಳೂರಿನ ಹಾಪ್ಕಾಮ್ಸ್ ಮಳಿಗೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಕಲ್ಲಂಗಡಿ ಮತ್ತು ದ್ರಾಕ್ಷಿ ಹಣ್ಣುಗಳು ದೊರೆಯಲಿವೆ. ಶೇ.10ರ ರಿಯಾಯಿತಿ ದರದಲ್ಲಿ ದ್ರಾಕ್ಷಿ ಮತ್ತು ಕಲ್ಲಂಗಡಿ ಹಣ್ಣು ಮಾರಾಟವಾಗಲಿದೆ. [ಲಾಲ್ ಬಾಗ್ ಕೆಂಪುಕೋಟೆ ವಿಶೇಷತೆಗಳೇನು?]

ಕೇವಲ ಹಾಪ್ಕಾಮ್ಸ್ಗಳಲ್ಲಿ ಮಾತ್ರವಲ್ಲದೇ ಅಧಿಕ ಜನಸಂಚಾರ ಇರುವ ಕಡೆ ಮತ್ತು ಸಾಫ್ಟ್ವೇರ್ ಕಂಪನಿಗಳು, ವಿವಿಧ ಕಾರ್ಖನೆಗಳ ಮುಂಭಾಗದಲ್ಲಿ ಸಂಚಾರಿ ವಾಹನಗಳ ಮೂಲಕ ಹಣ್ಣುಗಳನ್ನು ಮಾರಾಟ ಮಾಡಲು ಹಾಪ್ಕಾಮ್ಸ್ ಸಿದ್ಧತೆ ನಡೆಸಿದೆ. [ಕೊಪ್ಪಳ ರೈತರ ಬಾಯಲ್ಲಿ ಪಪ್ಪಾಯಿ ಜಪ!]
ಈ ಮೇಳಕ್ಕಾಗಿಯೇ ಥಾಮ್ಸನ್ ಸೀಡ್ಲೆಸ್, ಶರದ್, ಕೃಷ್ಣ ಶರದ್, ಫ್ಲೇಂ, ಗ್ಲೋಬ್ ಮುಂತಾದ ತಳಿಯ ದ್ರಾಕ್ಷಿ ವಿಜಯಪುರ, ಬಾಗಲಕೋಟೆ, ಬೆಳಗಾವಿ ಮುಂತಾದ ಜಿಲ್ಲೆಗಳಿಂದ ಬೆಂಗಳೂರಿಗೆ ಆಮಿಸುತ್ತಿದೆ. ದ್ರಾಕ್ಷಿ ಮತ್ತು ಕಲ್ಲಂಗಡಿಯ ಜೊತೆಗೆ ಒಣ ದ್ರಾಕ್ಷಿಯೂ ಹಾಪ್ಕಾಮ್ಸ್ನಲ್ಲಿ ದೊರೆಯಲಿದೆ.
ಮಧ್ಯವರ್ತಿಗಳ ಹಾವಳಿ ಇಲ್ಲದೇ ರೈತರು ಮತ್ತು ಜನರ ನಡುವೆ ಮಾರಾಟಕ್ಕೆ ವೇದಿಕೆ ಕಲ್ಪಿಸಲು ಈ ಮೇಳವನ್ನು ಆಯೋಜಿಸಲಾಗಿದೆ. ಮೇಳದಲ್ಲಿ ಸುಮಾರು 800 ಟನ್ ದ್ರಾಕ್ಷಿ ಹಾಗೂ 1 ಸಾವಿರ ಟನ್ ಕಲ್ಲಂಗಡಿ ಹಣ್ಣಿನ ಮಾರಾಟವಾಗಬಹುದು ಎಂದು ಅಂದಾಜಿಸಲಾಗಿದೆ.
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್












Click it and Unblock the Notifications