ಫೆಬ್ರವರಿ 6ರಿಂದ ನಿಮ್ಮ ಮನೆಬಾಗಿಲಿಗೆ ಹಾಪ್ಕಾಮ್ಸ್ ಹಣ್ಣು, ತರಕಾರಿ
ಹಣ್ಣು ಅಥವಾ ತರಕಾರಿ ಖರೀದಿಸುವವರು ಹಾಪ್ ಕಾಮ್ಸ್ ನಿಂದ ಇನ್ನು ಮುಂದೆ ಆನ್ಲೈನ್ ಮೂಲಕ ಆರ್ಡರ್ ನೀಡಬಹುದಾಗಿದೆ.
ಬೆಂಗಳೂರು, ಫೆ 4: ತೋಟಗಾರಿಕೆ ಇಲಾಖೆ ಇದೇ ಬರುವ ಸೋಮವಾರದಿಂದ (ಫೆ 6) ಹೊಸ ಪ್ರಯತ್ನಕ್ಕೆ ಮುಂದಾಗಲಿದೆ. ಇಲಾಖೆಯ ಹಾಪ್ ಕಾಮ್ಸ್ (ತೋಟಗಾರಿಕೆ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘ), ಆನ್ಲೈನ್ ಮೂಲಕ ಗ್ರಾಹಕರಿಗೆ ತನ್ನ ಸೇವೆಯನ್ನು ಆರಂಭಿಸಲಿದೆ.
ಐನೂರು ಮತ್ತು ಅದಕ್ಕಿಂತ ಮೇಲ್ಪಟ್ಟು ಹಣ್ಣು ಅಥವಾ ತರಕಾರಿ ಖರೀದಿಸುವವರು ಹಾಪ್ ಕಾಮ್ಸ್ ನಿಂದ ಇನ್ನು ಮುಂದೆ ಆನ್ಲೈನ್ ಮೂಲಕ ಆರ್ಡರ್ ನೀಡಬಹುದಾಗಿದೆ. 24 ಗಂಟೆಯೊಳಗೆ ಆರ್ಡರ್ ಮಾಡಿದ ಹಣ್ಣುಹಂಪಲುಗಳು ಮನೆಬಾಗಿಲಿಗೆ ತಲುಪಲಿದೆ.

ಈ ಸಂಬಂಧ ಖಾಸಗಿ ಸಂಸ್ಥೆಯ ಜೊತೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಸೋಮವಾರ ಒಡಂಬಡಿಕೆಗೆ ಸಹಿಹಾಕಲಿದ್ದಾರೆ. ಗ್ರಾಹಕರು ಆರ್ಡರ್ ಮಾಡಿರುವ ಹಣ್ಣು ಮತ್ತು ತರಕಾರಿಗಳನ್ನು ಮನೆಬಾಗಿಲಿಗೆ ತಲುಪಿಸುವ ಹೊಣೆಯನ್ನು ಖಾಸಗಿ ಸಂಸ್ಥೆ ವಹಿಸಿಕೊಳ್ಳಲಿದೆ.
ದೈನಂದಿನ ಹಣ್ಣು ಮತ್ತು ತರಕಾರಿ ಬೆಲೆಗಳನ್ನು ಎಸ್ಎಂಎಸ್ ಮೂಲಕ (97319-79899) ಪಡೆದುಕೊಳ್ಳಬಹುದಾದ ಸೇವೆಯನ್ನು ಹಾಪ್ ಕಾಮ್ಸ್ ಈಗಾಗಲೇ ಆರಂಭಿಸಿದೆ.
ಜೊತೆಗೆ ತನ್ನ ವೆಬ್ ಸೈಟ್ ನಲ್ಲಿ 160ಕ್ಕೂ ಹೆಚ್ಚು ಹಣ್ಣು, ತರಕಾರಿಗಳ ಬೆಲೆಗಳನ್ನು ತನ್ನ ಅಂತರ್ಜಾಲದಲ್ಲಿ ದಿನಾ ಅಪ್ಡೇಟ್ ಮಾಡುತ್ತಿದ್ದೇವೆ ಎಂದು ಹಾಪ್ ಕಾಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಬಡಾವಣೆಗಳಲ್ಲಿ ಹಾಪ್ ಕಾಮ್ಸ್ ಮಳಿಗೆಗಳು ಇರುವುದರಿಂದ, ಗ್ರಾಹಕರಿಗೆ ಉತ್ತಮ ಮತ್ತು ಆಧುನಿಕ ಸ್ಪರ್ಷ ನೀಡುವ ಸೇವೆಯನ್ನು ಯಾವುದೇ ತೊಂದರೆಯಿಲ್ಲದೇ ನೀಡಲಿದ್ದೇವೆ ಎನ್ನುವುದು ಇಲಾಖೆಯ ಅಧಿಕಾರಿಗಳ ಭರವಸೆಯ ಮಾತು.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications