ಹಾಪ್ ಕಾಮ್ಸ್ ನಲ್ಲಿ 10 ದಿನಗಳ ಕಾಲ ತರಕಾರಿ ಮೇಳ
ಬೆಂಗಳೂರು, ಡಿ. 17: ಬೆಲೆ ಕುಸಿತಗೊಂಡು ಕಂಗಾಲಾಗಿರುವ ರೈತರ ನೆರವಿಗೆ ಹಾಪ್ಕಾಮ್ಸ್ ಮತ್ತೊಮ್ಮೆ ಸಿದ್ಧಗೊಂಡಿದೆ. ಡಿ.17ರಿಂದ 10 ದಿನಗಳವರೆಗೆ ತೋಟೋತ್ಪನ್ನಗಳ ಮೇಳವನ್ನು ಎಲ್ಲಾ ಹಾಪ್ಕಾಮ್ಸ್ ಮಳಿಗೆಗಳಲ್ಲಿ ಲಭ್ಯವಿರುತ್ತದೆ. ಬಾಳೆ, ಕಿತ್ತಲೆ, ಸಪೋಟ ಹಾಗೂ ತರಕಾರಿ ಬೆಲೆ ಕುಸಿತಗೊಂಡಿದೆ. ಹೀಗಾಗಿ ಮುಂದಿನ ಹತ್ತು ದಿನಗಳ ಕಾಲ ರಿಯಾಯಿತಿ ದರದಲ್ಲಿ ಮಾರಾಟ ಜಾರಿಯಲ್ಲಿರುತ್ತದೆ ಎಂದು ಹಾಪ್ ಕಾಮ್ಸ್ ನಿರ್ದೇಶಕ ಬೆಳ್ಳೂರು ಕೃಷ್ಣ ಹೇಳಿದ್ದಾರೆ.
ಪ್ರತಿ ಹಣ್ಣು ಮತ್ತು ತರಕಾರಿಗಳ ಮೇಲೆ ಶೇ. 10 ರಷ್ಟು ರಿಯಾಯಿತಿ ಪ್ರಕಟಿಸಿದೆ. ನಗರದ ಲಾಲ್ಬಾಗ್ನಲ್ಲಿರುವ ಕೇಂದ್ರ ಕಚೇರಿಯ ಮಳಿಗೆ ಹಡ್ಸನ್ ಸರ್ಕಲ್, ಲಾಲ್ಬಾಗ್, ಕಬ್ಬನ್ ಪಾರ್ಕ್, ದೇವನಹಳ್ಳಿ ಹೈವೇ, ಸ್ಯಾಂಕಿ ಟ್ಯಾಂಕ್, ಮಲ್ಲೇಶ್ವರ, ನಾಗರಬಾವಿ ಸರ್ಕಲ್, ಚಂದ್ರಾ ಲೇಔಟ್, ಕೆಂಗೇರಿ ಸೆಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ ಹೈವೆ, ಜಾನಪದ ಲೋಕದ ಆಯ್ದ ಮಳಿಗೆಗಳಲ್ಲಿ ಮಾರಾಟ ಮೇಳ ನಡೆಯಲಿದೆ. [ಮುಂಜಾನೆ ತರಕಾರಿಕೊಳ್ಳಲು ಹಾಪ್ಕಾಮ್ಸ್ಗೆ ಹೋಗಿ]

ಬಾಳೆಹಣ್ಣು, ಕಿತ್ತಳೆ, ದಾಳಿಂಬೆ, ಸಪೋಟ ಅಲ್ಲದೆ, ಕಡ್ಲೆಕಾಯಿ, ಟೊಮೊಟೊ, ಅವರೇಕಾಯಿ, ಅವರೇಬೇಳೆ, ಗೆಣಸು ಸೇರಿದಂತೆ, ಹಲವು ತರಕಾರಿಗಳನ್ನು ನೇರವಾಗಿ ಬೆಳೆಗಾರರಿಂದಲೇ ಖರೀದಿಸಿ ಮಾರಾಟ ಮಾಡಲಾಗುತ್ತದೆ ಎಂದು ಹಾಮ್ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕ ಡಾ. ಬೆಳ್ಳೂರು ಕೃಷ್ಣ ಅವರು ತಿಳಿಸಿದ್ದಾರೆ.
ಸುಮಾರು 100 ಟನ್ನಷ್ಟು ಬೆಳೆ ಮಾರಾಟವಾಗುವ ನಿರೀಕ್ಷೆ ಇದೆ. ರೈತರ ತೋಟಗಳಿಂದಲೇ ನೇರವಾಗಿ ಖರೀದಿ ಮಾಡಿ ಉತ್ತಮ ಬೆಲೆ ಒದಗಿಸಿಕೊಡಲಾಗುವುದು ಎಂದು ಅವರು ತಿಳಿಸಿದರು.
ಹಾಪ್ಕಾಮ್ಸ್ ಅಧ್ಯಕ್ಷ ಜಿ.ಆರ್. ಶ್ರೀನಿವಾಸನ್ ಮಾತನಾಡಿ, ರೈತರು ಬೆಳೆ ನಷ್ಟದಿಂದ ಕಂಗಾಲಾಗಿದ್ದಾರೆ. ಅವರಿಗೆ ಧೈರ್ಯ ತುಂಬಲು ಈ ಮಾರಾಟ ಮೇಳವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ತಮಿಳುನಾಡಿನಲ್ಲಿ ಮಳೆಯ ಕಾರಣದಿಂದ ಆಗಿರುವ ಅನಾಹುತವನ್ನು ನೆಪವಾಗಿಟ್ಟುಕೊಂಡು ಮಧ್ಯವರ್ತಿಗಳು ಬೆಲೆಯನ್ನು ಹೆಚ್ಚಿಸಿ ಶೋಷಣೆ ಮಾಡುವುದನ್ನು ತಪ್ಪಿಸಲಾಗುವುದು ಎಂದು ಹೇಳಿದರು. ನಗರದ 239ಕ್ಕೂ ಅಧಿಕ ಮಳಿಗೆಗಳಲ್ಲದೆ ಹೆದ್ದಾರಿಗಳಲ್ಲೂ ತರಕಾರಿ ಮೇಳ ಜಾರಿಯಲ್ಲಿರುತ್ತದೆ. ಬೆಂಗಳೂರು-ಮೈಸೂರು ಹೆದ್ದಾರಿ, ತುಮಕೂರು ಹೆದ್ದಾರಿ, ಹೈದರಾಬಾದ್ ಹೆದ್ದಾರಿಗಳಲ್ಲಿ ಮೇಳ ನಡೆಯಲಿದೆ. (ಒನ್ ಇಂಡಿಯಾ ಸುದ್ದಿ)
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications