ಮಳೆಗೆ ನೆಲ ಕಚ್ಚಿದ ಬೆಳೆ : ಆರ್ಥಿಕ ಸಂಕಷ್ಟದಲ್ಲಿ ರೈತರು
ಬಳ್ಳಾರಿ, ಮೇ. 27 : ಹಗರಿಬೊಮ್ಮನಹಳ್ಳಿ ಮತ್ತು ಹೊಸಪೇಟೆ ತಾಲೂಕಿನಾದ್ಯಂತ ಬೀಸಿದ ಬಿರುಗಾಳಿ ಮತ್ತು ಮಳೆಗೆ ವಿದ್ಯುತ್ ಪೋಲ್ ಗಳು, ಮೊಬೈಲ್ ಟವರ್ ಗಳು ಬಾಗಿವೆ. ಅಷ್ಟೇ ಅಲ್ಲ, ಬಾಳೆ ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳು ನೆಲಕಚ್ಚಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಹಗರಿಬೊಮ್ಮಹಳ್ಳಿ ತಾಲೂಕಿನ ತಂಬ್ರಹಳ್ಳಿ ಹೋಬಳಿಯಲ್ಲಿ ಬೀಸಿದ ಭಾರಿ ಬಿರುಗಾಳಿ, ಮಳೆಗೆ ಬಿಜಾಪುರದ ಕೂಡ್ಗಿ ವಿದ್ಯುತ್ ಸಂಗ್ರಹ ಘಟಕದಿಂದ ತುಮಕೂರಿನ ಮಧುಗಿರಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ಸರಬರಾಜು ಮಾಡುವ 750 ಕೆ.ವಿ. ಸಾಮರ್ಥ್ಯದ ವಿದ್ಯುತ್ ಪೂರೈಸುವ ನೂರಾರು ಅಡಿ ಎತ್ತರದ ನಾಲ್ಕಾರು ಗೋಪುರಗಳು ಗುರುವಾರ ರಾತ್ರಿ ನೆಲಕ್ಕುರುಳಿವೆ.
ಜೆಸ್ಕಾಂನ 25 ಕೆ.ವಿ. ಶಕ್ತಿಯುಳ್ಳ ವಿದ್ಯುತ್ ಪರಿವರ್ತಕಗಳು ನಾಶವಾಗಿವೆ. 50 - 60 ಕಂಬಗಳು ನೆಲಕಚ್ಚಿವೆ. ತಂತಿಗಳು ಹರಿದು ಬಿದ್ದ ಪರಿಣಾಮ ವಿದ್ಯುತ್ ಕಂಬಗಳ ಜೊತೆಗೆ ಅನೇಕ ಕಡೆ ನೂರಾರು ಮರ ಗಿಡಗಳು ನೆಲಕ್ಕುರುಳಿ ಕೃಷಿ ಬೆಳೆಗಳು ನಷ್ಟವಾಗಿವೆ.

ಸುಮಾರು 8-10 ಲಕ್ಷ ರೂಪಾಯಿ ಬೆಲೆಯ ಬೆಳೆ ಹಾಳಾಗಿದೆ ಎಂದು ರೈತರು ತಿಳಿಸಿದ್ದಾರೆ.
ಹೊಸಪೇಟೆ ತಾಲೂಕಿನಾದ್ಯಂತ 300 ಎಕರೆಗೂ ಹೆಚ್ಚಿನ ಪ್ರದೇಶದಲ್ಲಿ ಬಾಳೆ, ದ್ರಾಕ್ಷಿ, ದಾಳಿಂಬೆ ಸೇರಿ ವಿವಿಧ ತೋಟಗಾರಿಕೆ ಬೆಳೆಗಳು ನೆಲಕಚ್ಚಿ, ರೈತರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.
-
PM Kisan 22ನೇ ಕಂತಿನ ಹಣ ಬಿಡುಗಡೆಗೆ ದಿನಾಂಕ ಫಿಕ್ಸ್, ಇಲ್ಲಿದೆ ಸಂಪೂರ್ಣ ಮಾಹಿತಿ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications