ಮಳೆಗೆ ನೆಲ ಕಚ್ಚಿದ ಬೆಳೆ : ಆರ್ಥಿಕ ಸಂಕಷ್ಟದಲ್ಲಿ ರೈತರು
ಬಳ್ಳಾರಿ, ಮೇ. 27 : ಹಗರಿಬೊಮ್ಮನಹಳ್ಳಿ ಮತ್ತು ಹೊಸಪೇಟೆ ತಾಲೂಕಿನಾದ್ಯಂತ ಬೀಸಿದ ಬಿರುಗಾಳಿ ಮತ್ತು ಮಳೆಗೆ ವಿದ್ಯುತ್ ಪೋಲ್ ಗಳು, ಮೊಬೈಲ್ ಟವರ್ ಗಳು ಬಾಗಿವೆ. ಅಷ್ಟೇ ಅಲ್ಲ, ಬಾಳೆ ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳು ನೆಲಕಚ್ಚಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಹಗರಿಬೊಮ್ಮಹಳ್ಳಿ ತಾಲೂಕಿನ ತಂಬ್ರಹಳ್ಳಿ ಹೋಬಳಿಯಲ್ಲಿ ಬೀಸಿದ ಭಾರಿ ಬಿರುಗಾಳಿ, ಮಳೆಗೆ ಬಿಜಾಪುರದ ಕೂಡ್ಗಿ ವಿದ್ಯುತ್ ಸಂಗ್ರಹ ಘಟಕದಿಂದ ತುಮಕೂರಿನ ಮಧುಗಿರಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ಸರಬರಾಜು ಮಾಡುವ 750 ಕೆ.ವಿ. ಸಾಮರ್ಥ್ಯದ ವಿದ್ಯುತ್ ಪೂರೈಸುವ ನೂರಾರು ಅಡಿ ಎತ್ತರದ ನಾಲ್ಕಾರು ಗೋಪುರಗಳು ಗುರುವಾರ ರಾತ್ರಿ ನೆಲಕ್ಕುರುಳಿವೆ.
ಜೆಸ್ಕಾಂನ 25 ಕೆ.ವಿ. ಶಕ್ತಿಯುಳ್ಳ ವಿದ್ಯುತ್ ಪರಿವರ್ತಕಗಳು ನಾಶವಾಗಿವೆ. 50 - 60 ಕಂಬಗಳು ನೆಲಕಚ್ಚಿವೆ. ತಂತಿಗಳು ಹರಿದು ಬಿದ್ದ ಪರಿಣಾಮ ವಿದ್ಯುತ್ ಕಂಬಗಳ ಜೊತೆಗೆ ಅನೇಕ ಕಡೆ ನೂರಾರು ಮರ ಗಿಡಗಳು ನೆಲಕ್ಕುರುಳಿ ಕೃಷಿ ಬೆಳೆಗಳು ನಷ್ಟವಾಗಿವೆ.

ಸುಮಾರು 8-10 ಲಕ್ಷ ರೂಪಾಯಿ ಬೆಲೆಯ ಬೆಳೆ ಹಾಳಾಗಿದೆ ಎಂದು ರೈತರು ತಿಳಿಸಿದ್ದಾರೆ.
ಹೊಸಪೇಟೆ ತಾಲೂಕಿನಾದ್ಯಂತ 300 ಎಕರೆಗೂ ಹೆಚ್ಚಿನ ಪ್ರದೇಶದಲ್ಲಿ ಬಾಳೆ, ದ್ರಾಕ್ಷಿ, ದಾಳಿಂಬೆ ಸೇರಿ ವಿವಿಧ ತೋಟಗಾರಿಕೆ ಬೆಳೆಗಳು ನೆಲಕಚ್ಚಿ, ರೈತರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications