ಲಾಲ್ ಬಾಗ್ 'ಗುಲಾಬಿ' ಸಂಸತ್ ಎದುರು ಸೆಲ್ಫಿ ನಿಷೇಧ
ಬೆಂಗಳೂರು, ಆಗಸ್ಟ್, 13: ಸ್ನೇಹಿತರೊಂದಿಗೆ, ಕುಟುಂಬದೊಂದಿಗೆ, ಪ್ರೇಯಸಿಯೊಂದಿಗೆ ಲಾಲ್ ಬಾಗ್ ಗೆ ತೆರಳಿ ಗುಲಾಬಿ ಸಂಸತ್ ಭವನದ ಎದುರು ಸೆಲ್ಫಿ ತೆಗೆದುಕೊಳ್ಳಬೇಕು ಎಂಬ ಆಸೆ ಇದ್ದರೆ ಬಿಟ್ಟುಬಿಡಿ. ಲಾಲ್ ಬಾಗ್ ನಲ್ಲಿ ಬೆಂಗಳೂರಿಗರ ಜನಾಕರ್ಷಣೆ ಕೇಂದ್ರವಾಗಿ ನಿಂತಿರುವ ಗುಲಾಬಿ ಸಂಸತ್ ಭವನದ ಎದುರು ಸೆಲ್ಫಿ ತೆಗೆದುಕೊಳ್ಳುವಂತೆ ಇಲ್ಲ.
ವಾರಂತ್ಯದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು ಜನಸಂದಣಿ ನಿಯಂತ್ರಣಕ್ಕೆ ಕ್ರಮ ತೆಗೆದುಕೊಂಡಿರುವ ತೋಟಗಾರಿಕಾ ಇಲಾಖೆ ಸಂಸತ್ ಭವನದ ಎದುರು ಸೆಲ್ಫಿ ತೆಗೆದುಕೊಳ್ಳುವುದನ್ನು ನಿಷೇಧಿಸಿದೆ. ಜನರ ನಿಯಂತ್ರಣ ಮತ್ತು ಎಲ್ಲರಿಗೂ ಹೂವಿನ ಸಂಸತ್ ಭವನದ ಸೌಂದರ್ಯ ಆಸ್ವಾದನೆ ಮಾಡಲು ಅನಕೂಲವಾಗಲಿ ಎಂಬ ಕಾರಣದಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತೋಟಗಾರಿಕಾ ಇಲಾಖೆ ನಿರ್ದೇಶಕ ಎಚ್.ಎಸ್.ಶಿವಕುಮಾರ್ ತಿಳಿಸಿದ್ದಾರೆ.[ಲಾಲ್ ಬಾಗ್ ಸಂಸತ್ ಭವನದಲ್ಲಿ 'ಗುಲಾಬಿ' ಅಧಿವೇಶನ]

ಪ್ರದರ್ಶನ ಆಗಸ್ಟ್ 15 ರವರೆಗೆ ನಡೆಯಲಿದೆ. ಎಲ್ಲಾ ದಿನಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯ ತನಕ ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಬಹುದಾಗಿದೆ. ಸಾಮಾನ್ಯ ದಿನಗಳಲ್ಲಿ ವಯಸ್ಕರಿಗೆ 50, ಮಕ್ಕಳಿಗೆ 20 ರೂ. ಪ್ರವೇಶ ಶುಲ್ಕವಿದೆ. ರಜಾ ದಿನಗಳಲ್ಲಿ ವಯಸ್ಕರು 60, ಮಕ್ಕಳು 20 ರೂ. ಶುಲ್ಕ ಪಾವತಿ ಮಾಡಬೇಕು.[ಗುಲಾಬಿ ಲೋಕದ ಚಿತ್ರಗಳು]
ಪ್ರವಾಸೋದ್ಯಮ ಇಲಾಖೆ ಬುಧವಾರ ರಾಷ್ಟ್ರೀಯ ಸ್ಮಾರಕಗಳ ಬಳಿ ಭದ್ರತೆಯ ದೃಷ್ಟಿಯಿಂದ ಸೆಲ್ಫಿ ತೆಗೆದುಕೊಳ್ಳುವುದನ್ನು ನಿರ್ಬಂಧ ಮಾಡಿ ಆದೇಶ ಹೊರಡಿಸಿತ್ತು. ಪ್ರವಾಸಿಗರ ಸೋಗಿನಲ್ಲಿ ಉಗ್ರರು ದಾಳಿ ನಡೆಸುವ ಸಾಧ್ಯತೆ ಇರುವುದರಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಪ್ರವಾಸೋದ್ಯಮ ಸಚಿವಾಲಯ ತನ್ನ ಪತ್ರದಲ್ಲಿ ತಿಳಿಸಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications