ಧಾರವಾಡ; ಮೇ 14 ರಿಂದ ಮಾವು ಪ್ರದರ್ಶನ, ಮಾರಾಟ ಮೇಳ
ಧಾರವಾಡ, ಮೇ 14: ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟು, ಈ ಬಾರಿಯ ಸುಡು ಬೇಸಿಗೆಯ ಪರಿಣಾಮ ನಿರೀಕ್ಷೆ ಮಾಡಿದಷ್ಟು ಮಾವಿನ ಬೆಳೆ ಬಂದಿಲ್ಲ. ಮಾರುಕಟ್ಟೆಯಲ್ಲಿ ಸದ್ದು ಮಾಡಬೇಕಿದ್ದ ಹಣ್ಣುಗಳ ರಾಜ ಅಷ್ಟಾಗಿ ಕಂಡುಬರುತ್ತಿಲ್ಲ.
ವಿವಿಧ ಬಗೆಯ ಮಾವಿನ ಹಣ್ಣು ಸವಿಯುವ ಉತ್ಸಾಹದಲ್ಲಿರುವ ಜನರಿಗೆ ಸಿಹಿಸುದ್ದಿಯೊಂದಿದೆ. ಧಾರವಾಡ ಜಿಲ್ಲೆಯಲ್ಲಿ 3 ದಿನಗಳ ಮಾವು ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜನೆ ಮಾಡಲಾಗಿದೆ. ರೈತರಿಂದ ನೇರವಾಗಿ ಗ್ರಾಹಕರಿಗೆ ಮಾವು ತಲುಪಲಿದೆ.

2024-25ನೇ ಸಾಲಿನಲ್ಲಿ ಧಾರವಾಡ ಜಿಲ್ಲೆಯ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಮೇ 14ರಿಂದ 16ರ ವರೆಗೆ ಮಾವು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಮೇಳದಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಲಾಗಿದೆ.
ರೈತರಿಗೆ ಮಳಿಗೆಗಳ ಹಂಚಿಕೆ: ಮಾವು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಜಿಲ್ಲೆಯ ರೈತರು ಭಾಗವಹಿಸಲಿದ್ದಾರೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತೋಟಗಾರಿಕೆ ಇಲಾಖೆಯ ಉಪನಿರ್ದೆಶಕರು ತಿಳಿಸಿದ್ದಾರೆ.
ಪ್ರತಿ ವರ್ಷವೂ ಸಹ ವಿವಿಧ ಜಿಲ್ಲೆಗಳಲ್ಲಿ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮವು ತೋಟಗಾರಿಕೆ ಇಲಾಖೆಯ ಸಹಕಾರದೊಂದಿಗೆ ಮಾವು ಮತ್ತು ಹಲಸು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜನೆ ಮಾಡುತ್ತದೆ. ಲಕ್ಷಾಂತರ ರೂಪಾಯಿ ವಹಿವಾಟಿಗೆ ಈ ಮೇಳಗಳು ಸಾಕ್ಷಿಯಾಗುತ್ತವೆ.
ಧಾರವಾಡದಲ್ಲಿ ನಡೆಯುವ ಮಾವು ಮೇಳಕ್ಕೆ ಈಗಾಗಲೇ ಆಸಕ್ತ ಮಾವು ಬೆಳೆಗಾರ ರೈತರಿಂದ ಅರ್ಜಿಯನ್ನು ಪಡೆದು ಮಳಿಗೆ ಹಂಚಿಕೆ ಮಾಡಲಾಗಿದೆ. ಜಿಲ್ಲೆಯ ವಿವಿಧ ತಾಲೂಕುಗಳ ರೈತರು, ಅಕ್ಕಪಕ್ಕದ ಜಿಲ್ಲೆಗಳ ರೈತರು ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕೊಪ್ಪಳ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಹೆಚ್ಚಾಗಿ ಮಾವು ಬೆಳೆಯಲಾಗುತ್ತದೆ. ಇಲ್ಲಿನ ಮಾವುಗಳಿಗೆ ದೇಶ, ವಿದೇಶದಲ್ಲಿ ಹೆಚ್ಚಿನ ಬೇಡಿಕೆ ಇದೆ. ಕೊಪ್ಪಳದ ಕೇಸರ್ ಮತ್ತು ಧಾರವಾಡದ ಆಲ್ಫ್ಯಾನ್ಸೋ ಸಾಕಷ್ಟು ಪ್ರಸಿದ್ಧಿಯನ್ನು ಪಡೆದಿದೆ.
ಧಾರವಾಡದಲ್ಲಿ ಬೆಳೆಯುವ ಎರಡು ವರ್ಷಗಳಿಂದ ಸೌದಿ ರಾಷ್ಟ್ರಗಳಿಗೆ ಹೆಚ್ಚಾಗಿ ರಫ್ತಾಗುತ್ತಿದ್ದವು. ಆದರೆ ಈ ಬಾರಿ ಅಮೆರಿಕಾದಿಂದಲೂ ಬೇಡಿಕೆ ಬಂದಿದೆ. ಅಮೆರಿಕಾದ ಕೆಲವು ನಗರಗಳಿಂದ ಬೇಡಿಕೆ ಬಂದಿದ್ದು, ಈ ಬಾರಿ ಮಾವು ಅಲ್ಲಿಗೆ ರಫ್ತಾಗಲಿದೆ.
ಮಾವು ಪ್ರದರ್ಶನ ಮತ್ತು ಮಾರಾಟ ಮೇಳ ರೈತರು, ಗ್ರಾಹಕರ ಪಾಲಿನ ಸೇತುವೆಯಾಗಿ ಕಾರ್ಯ ನಿರ್ವಹಣೆ ಮಾಡಲಿದೆ. ರೈತರು ತಾವು ಬೆಳೆದ ವಿಶಿಷ್ಟ ತಳಿಗಳ ಮಾವುಗಳನ್ನು ನೇರವಾಗಿ ಗ್ರಾಹಕರಿಗೆ ಮೇಳದಲ್ಲಿ ಮಾರಾಟ ಮಾಡಬಹುದಾಗಿದೆ.
ತೋಟಗಾರಿಕಾ ಇಲಾಖೆ ಆಯೋಜನೆ ಮಾಡುವ ಮಾವು ಪ್ರದರ್ಶನ ಮತ್ತು ಮಾರಾಟ ಮೇಳ ಗ್ರಾಹಕರಿಗೆ ಮಾತ್ರವಲ್ಲ ರೈತರಿಗೆ ಸಹ ಅನುಕೂಲವಾಗಲಿದೆ. ವಿವಿಧ ಜಿಲ್ಲೆಗಳ ರೈತರು ಮೇಳಕ್ಕೆ ಆಗಮಿಸಿ, ಮಾವಿನ ಬೆಳೆ, ಬೇಸಾಯ ಪದ್ಧತಿ, ತಳಿಗಳ ಕುರಿತು ರೈತರಿಂದ ನೇರವಾಗಿ ಮಾಹಿತಿ ಪಡೆಯಲಿದ್ದಾರೆ.
ಮಾವು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಮಾವಿನ ಹಣ್ಣುಗಳು ಮಾತ್ರವಲ್ಲ ವಿವಿಧ ಕಂಪನಿಗಳ ಉತ್ಪನ್ನಗಳನ್ನು ಪ್ರದರ್ಶನಕ್ಕೆ ಇಡಲಾಗುತ್ತದೆ. ಆದ್ದರಿಂದ ಗ್ರಾಹಕರು ಮತ್ತು ರೈತರು ಮಾವಿನ ಮೌಲ್ಯ ವರ್ಧನೆ ಬಗ್ಗೆ ಹೆಚ್ಚಿನ ವಿವಿರಗಳನ್ನು ಪಡೆಯಬಹುದಾಗಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications