ಮಾರ್ಚ್ 5ರಿಂದ ಬೆಂಗಳೂರಿನಲ್ಲಿ ತೋಟಗಾರಿಕಾ ಮೇಳ
ಬೆಂಗಳೂರು, ಮಾರ್ಚ್ 03: ಬೆಂಗಳೂರಿನ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯಲ್ಲಿ ಮೂರು ದಿನಗಳ ತೋಟಗಾರಿಕೆ ಮೇಳ 2024 ಆಯೋಜನೆ ಮಾಡಲಾಗಿದೆ.
ಈ ಬಾರಿಯ ತೋಟಗಾರಿಕೆ ಮೇಳವನ್ನು 'ಸುಸ್ಥಿರ ಅಭಿವೃದ್ಧಿಗಾಗಿ ನವೀನ ಪೀಳಿಗೆಯ ತೋಟಗಾರಿಕೆ ತಂತ್ರಜ್ಞಾನಗಳು' ಎಂಬ ಶೀರ್ಷಿಕೆಯಡಿ ಆಯೋಜನೆ ಮಾಡಲಾಗಿದೆ. ಮಾರ್ಚ್ 5, 6 ಮತ್ತು 7ರಂದು ತೋಟಗಾರಿಕೆ ಮೇಳ ನಡೆಯಲಿದೆ.

ಕರ್ನಾಟಕ ಮಾತ್ರವಲ್ಲ ಬೇರೆ ರಾಜ್ಯಗಳಿಂದಲೂ ಸಹ ರೈತರು, ಆಸಕ್ತರು ಆಗಮಿಸುತ್ತಾರೆ. ಆದ್ದರಿಂದ 50 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಐಸಿಎಆರ್ ಉಪ ಪ್ರಧಾನ ವ್ಯವಸ್ಥಾಪಕ (ತೋಟಗಾರಿಕೆ ವಿಜ್ಞಾನ) ಸಂಜಯ್ ಕುಮಾರ್ ಸಿಂಗ್ ಹೇಳಿದ್ದಾರೆ.
ಸ್ಟಾರ್ಟ್ ಅಪ್ಗಳಿಗೆ ಆದ್ಯತೆ: ತೋಟಗಾರಿಕೆ ಕ್ಷೇತ್ರದಲ್ಲಿ ಯುವ ರೈತರು ಹಾಗೂ ತಂತ್ರಜ್ಞರಿಗೆ ಪ್ರೋತ್ಸಾಹ ನೀಡಲು ಈ ಬಾರಿ ಸ್ಟಾರ್ಟಪ್ಗಳಿಗೆ ಒತ್ತು ನೀಡಲಾಗಿದೆ. ಬೀಜ ಸಂಸ್ಕರಣಾ ಘಟಕ, ಇನ್ಕ್ಯುಬೇಷನ್ ಸೆಂಟರ್ಗಳ ಬಗ್ಗೆಯೂ ಆಸಕ್ತರಿಗೆ ಮೇಳದಲ್ಲಿ ಮಾಹಿತಿ ನೀಡುವ ವ್ಯವಸ್ಥೆ ಮಾಡಲಾಗಿದೆ.
ಈ ಬಾರಿಯ ಮೇಳದ ಪ್ರಮುಖ ಆಕರ್ಷಣೆ ಮಿಲೆಟ್ ಜ್ಯೂಸ್. ಈಗಾಗಲೇ ಡ್ರ್ಯಾಗನ್ ಪ್ರೂಟ್ ತಳಿಯನ್ನು ಅಭಿವೃದ್ಧಿಪಡಿಸಿ ರೈತರಿಗೆ ವಿತರಿಸುತ್ತಿದೆ. ಇದೀಗ ಈ ಹಣ್ಣಿಗೆ ಕೆಲವು ಸಿರಿಧಾನ್ಯಗಳನ್ನು ಮಿಶ್ರಣ ಮಾಡಿ ಮಿಲೆಟ್ ಜ್ಯೂಸ್ ತಯಾರಿಸುವ ತಂತ್ರಜ್ಞಾನ ಅಭಿವೃದ್ಧಿಪಡಿಸಲಾಗಿದೆ. ವಿಶಿಷ್ಟ ರುಚಿ ಮತ್ತು ಅನುಭವ ನೀಡುವ ಈ ಜ್ಯೂಸ್ ಮೇಳದ ಆಕರ್ಷಣೆಯಾಗಿದೆ.
ಈ ಬಾರಿಯ ತೋಟಗಾರಿಕೆ ಮೇಳದಲ್ಲಿ 300ಕ್ಕೂ ಅಧಿಕ ಮಳಿಗೆಗಳು ಇರಲಿವೆ. ಹೊಸ ತಳಿಗಳು, ಹೊಸ ಆವಿಷ್ಕಾರಗಳ ಕುರಿತು ರೈತರಿಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಲಾಗುತ್ತದೆ. ಈರುಳ್ಳಿ ನಾಟಿ ಮಾಡುವ ಯಂತ್ರ, ಅಧಿಕ ಇಳುವರಿಯ ಆರ್ಕಾ ನಿಹಿರ ಮೆಣಸಿನಕಾಯಿ ಹಾಗೂ ಆರ್ಕಾ ಬೃಂಗರಾಜ ಸೊರಗು ರೋಗ ನಿರೋಧಕ ತಳಿಗಳನ್ನು ಮೇಳದಲ್ಲಿ ಕಾಣಬಹುದು.
ಸ್ಮಾರ್ಟ್ ನೀರಾವರಿ, ಸಸ್ಯ ಆರೋಗ್ಯ ಕ್ಲಿನಿಕ್, ಸಸಿಗಳನ್ನು ಖರೀದಿ ಮಾಡಲು ಮಾಲ್ ಮಾದರಿಯ ನರ್ಸರಿ ವ್ಯವಸ್ಥೆಯನ್ನು ಮೇಳದಲ್ಲಿ ಮಾಡಲಾಗಿದೆ. ಮೇಳದಲ್ಲಿ ಪಾಳ್ಗೊಳ್ಳಲು ಆನ್ಲೈನ್ ಮೂಲಕ ನೋಂದಣಿ ವ್ಯವಸ್ಥೆ ಮಾಡಲಾಗಿದೆ. 150ಕ್ಕೂ ಮಳಿಗೆಗಳು ಈಗಾಗಲೇ ನೋಂದಣಿ ಮಾಡಿಕೊಂಡಿವೆ.
ತೋಟಗಾರಿಕೆ ಮೇಳದ ಕುರಿತು ರೈತರಿಗೆ ಮಾಹಿತಿ ನೀಡಲು ಮತ್ತು ಸಹಾಯಕ್ಕಾಗಿ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಸಹಾಯವಾಣಿ ಸಂಖ್ಯೆ 9403891704 ಆಗಿದೆ.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications