ಬರ ಪರಿಹಾರ ಬಂದಿಲ್ಲವೇ?; ರೈತರು ಒಮ್ಮೆ ಖಾತೆ ಹೀಗೆ ಚೆಕ್ ಮಾಡಿ
ಬೆಂಗಳೂರು, ಮೇ 16: ಕಳೆದ ವರ್ಷ ನೈಋತ್ಯ ಮುಂಗಾರು ಮಳೆ ಕೈ ಕೊಟ್ಟ ಪರಿಣಾಮ ಕರ್ನಾಟಕದಲ್ಲಿ ಬರ ಆವರಿಸಿದೆ. 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ ಎಸ್.ಡಿ.ಆರ್.ಎಫ್/ ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಅರ್ಹತೆಯ ಅನುಗುಣವಾಗಿ ಪರಿಹಾರವನ್ನು ರೈತರಿಗೆ ನೀಡಲಾಗುತ್ತಿದೆ.
ಈಗಾಗಲೇ ಮೊದಲ ಹಂತದಲ್ಲಿ ಅರ್ಹ ರೈತರಿಗೆ ಗರಿಷ್ಟ ರೂ. 2000 ವರೆಗೆ ಅರ್ಹತೆಯಂತೆ ಪಾವತಿಸಿರುವ ಬೆಳೆಹಾನಿ ಪರಿಹಾರ ಮೊತ್ತವನ್ನು ಪರಿಗಣನೆಗೆ ತೆಗೆದುಕೊಂಡು ಅರ್ಹತೆಯಂತೆ ಇನ್ನುಳಿದ ಬಾಕಿ ಬೆಳೆಹಾನಿ ಪರಿಹಾರ ಮೊತ್ತವನ್ನು ಪಾವತಿಸಲು ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶಿಸಿದೆ.

ಅದರಂತೆ ಬೆಳ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರದ ಮೇಲೆ FRUITS ID ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಬರ ಪರಿಹಾರದ ಹಣ ನೇರವಾಗಿ ರೈತರ ಖಾತೆಗಳಿಗೆ ಜಮೆಯಾಗುತ್ತಿದೆ.
ಪರಿಹಾರ ಬಂದಿಲ್ಲ ಎಂಬ ದೂರು: ಹಲವು ರೈತರು ಬರ ಪರಿಹಾರ ಹಣ ಜಮಾ ಆಗಿಲ್ಲ ಎಂದು ವಿಚಾರಿಸುತ್ತಿದ್ದಾರೆ. ಆದ್ದರಿಂದ ಸ್ಪಷ್ಟನೆಯನ್ನು ನೀಡಲಾಗಿದ್ದು, ಏಕೆ ಪರಿಹಾರ ಬಂದಿಲ್ಲ ಎಂದು ವಿವರಣೆಯನ್ನು ನೀಡಲಾಗಿದೆ.
ಒಂದು ವೇಳೆ ನಿಮ್ಮ ಹಸರು ಆಧಾರ್ ಮತ್ತು FRUITS ಐಡಿಗೆ ಹೊಂದಿಕೆ ಆಗದೇ ಇರುವುದು. ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಆಗದೇ ಇರುವುದು. ನಿಮ್ಮ ಬ್ಯಾಂಕ್ನ ಐ.ಎಫ್.ಎಸ್.ಸಿ ಕೋಡ್ ಸರಿಯಿರದೇ ಇರುವುದು. ನಿಮ್ಮ ಬ್ಯಾಂಕ್ ಖಾತೆ ನಿಷ್ಕ್ರಿಯ ಆಗಿರುವುದು ಮತ್ತು ಇತರೆ ಕಾರಣಗಳಿಗೆ ಪರಿಹಾರ ಜಮೆ ಆಗಿರುವುದಿಲ್ಲ ಎಂದು ತಿಳಿಸಲಾಗಿದೆ.
ಈ ಸಮಸ್ಯೆಗಳಿಗೆ ರೈತರು ಪರಿಹಾರ ಕಂಡುಕೊಳ್ಳಬಹುದಾಗಿರುತ್ತದೆ. ಅದಕ್ಕಾಗಿ ರೈತರು ಬ್ಯಾಂಕ್ ಖಾತೆಗೆ ಹೋಗಿ ಖಾತೆಯನ್ನು ರಿ-ಓಪನ್ ಮಾಡಿಸಬೇಕು. FRUITS ತಂತ್ರಾಂಶದಲ್ಲಿ ಹೆಸರು ಅಪ್ಡೇಟ್ ಮಾಡಬೇಕು. ರೈತರು ಬ್ಯಾಂಕ್ಗೆ ಹೋಗಿ ಎನ್ಪಿಸಿಐ ಮಾಡಿಸಬೇಕು. ಅಕೌಂಟ್ ಬ್ಲಾಕ್ ಅಥವ ಕ್ಲೋಸ್ ಆಗಿದ್ದರೆ ರಿ-ಓಪನ್ ಮಾಡಿಸಬೇಕು. ರೈತರು ಬ್ಯಾಂಕ್ ಖಾತೆಗೆ ಹೋಗಿ ಐಎಫ್ಎಸ್ಸಿ ಅಪ್ಡೇಟ್ ಮಾಡಿಸಿ, N.P.C.I ಮಾಡಿಸಬೇಕು.
ರೈತರಿಗೆ ಮೂಲ ಮಾಹಿತಿಗಳು
* ರೈತರು ಮೊದಲು ಜಮೀನಿನ ಪಹಣಿಗೆ ತಮ್ಮ FRUITS ID ಸಂಖ್ಯೆ ಇದೆಯೋ?, ಇಲ್ಲವೋ? ಎಂಬುದನ್ನು ಪರಿಶೀಲಿಸಿಕೊಳ್ಳಬೇಕು.
* ತಮ್ಮ ಬ್ಯಾಂಕ್ ಖಾತೆಗೆ N.P.C.I ಲಿಂಕ್ ಆಗಿದೆಯೇ?, ಇಲ್ಲವೇ? ಎಂಬುದನ್ನು ಪರಿಶೀಲಿಸಿಕೊಳ್ಳಬೇಕು.
* N.P.C.I ಲಿಂಕ್ ಇದ್ದಲ್ಲಿ FID (FRUITS ID)ಯಲ್ಲಿ ಇರತಕ್ಕಂತಹ ಬ್ಯಾಂಕ್ ಖಾತೆ, ಖಾತೆ ಸಂಖ್ಯೆಗೂ N.P.C.I ಲಿಂಕ್ ಇರುವ ಸಂಖ್ಯೆಯೂ ಒಂದೇ ಆಗಿರತಕ್ಕದ್ದು.
* N.P.C.I ಲಿಂಕ್ ಹಾಗೂ FRUITS ID ಯಲ್ಲಿ ಇರುವ ಬ್ಯಾಂಕ್ ಖಾತೆ ಸಂಖ್ಯೆ ಬೇರೆ ಬೇರೆ ಇದ್ದಲ್ಲಿ FID ಯಲ್ಲಿ ಇರುವ ಬ್ಯಾಂಕ್ ಖಾತೆ ಸಂಖ್ಯೆಯನ್ನು ಕೃಷಿ ಇಲಖೆಯ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಬದಲಾವಣೆ ಮಾಡಿಸಿಕೊಳ್ಳುವುದು.
* ಆಧಾರ್ ಕಾರ್ಡ್ನಲ್ಲಿ ಇರುವ ಹೆಸರೂ ಬ್ಯಾಂಕ್ ಖಾತೆಯಲ್ಲಿ ಇರುವ ಹೆಸರೂ ಒಂದೇ ಆಗಿರಬೇಕು.
* ಅಕೌಂಟ್ ಇನ್-ವ್ಯಾಲಿಡ್, ಕ್ಲೋಸ್, ಬ್ಲಾಕ್, ಆಧಾರ್ ನಾಟ್ ಸೀಡಿಂಗ್ ಹಾಗೂ ಇತರೆ ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಳ್ಳುತ್ತಿದ್ದು, ಪರಿಶೀಲಿಸಿಕೊಂಡು ಚಾಲ್ತಿ ಮಾಡಿಸಿಕೊಳ್ಳುವುದು.
* ಆಧಾರ್ ಕಾರ್ಡ್ನಲ್ಲಿ ಇರುವ ಹೆಸರಿಗೂ ಪಹಣಿ ಪತ್ರಿಕೆಯಲ್ಲಿ ಇರುವ ಹೆಸರೂ ಒಂದೇ ಆಗಿರಬೇಕು.
* ರೈತರು https://parihara.karnataka.gov.in/service92/ ಈ ವೆಬ್ಸೈಟ್ನಲ್ಲಿ
ಹೋಗಿ ಪರಿಶೀಲಿಸಿಕೊಳ್ಳಬಹುದು.
* ಸರ್ಕಾರದಿಂದ ಇನ್ನು ಹಂತಹಂತವಾಗಿ ಪರಿಹಾರದ ಹಣವನ್ನು ಜಮೆ ಮಾಡಲಾಗುತ್ತಿರುತ್ತದೆ.
ಬರ ಪರಿಹಾರದ ಕುರಿತು ಯಾವುದೇ ಮಾಹಿತಿಯು ತಮಗೆ ಅರ್ಥವಾಗದೇ, ಗೊಂದಲಗಳು ಇದ್ದಲ್ಲಿ ಕೂಡಲೇ ಸಮೀಪದ ಕೃಷಿ ಇಲಾಖೆ ಅಥವಾ ತಾಲ್ಲೂಕು ಕಛೇರಿಯ ಸಹಾಯವಾಣಿ ಕೇಂದ್ರವನ್ನು ಸಂಪರ್ಕಿಸಲು ಕೋರಿದೆ.
-
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Karnataka Weather: ರಾಜ್ಯದಲ್ಲಿ ಏರುತ್ತಿದೆ ಬಿಸಿಲಿನ ಝಳ; ಬೆಂಗಳೂರಿನ ತಾಪಮಾನ 34 ಡಿಗ್ರಿಗೆ ಏರಿಕೆ -
Bengaluru-Hyderabad ಬುಲೆಟ್ ಟ್ರೈನ್: ಕೇವಲ 2 ಗಂಟೆ ಪ್ರಯಾಣ, 626 ಕಿಮೀ ಉದ್ದದ ಹಾದಿಯಲ್ಲಿ 12 ನಿಲ್ದಾಣಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
ಮಾರ್ಚ್ 3ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಫ್ಯಾಷನ್, ಟ್ರಾವೆಲ್ನಂತೆ ಕೃಷಿ ಇನ್ಫ್ಲುಯೆನ್ಸರ್ಗಳು ಯಾಕಿಲ್ಲಾ? ಚರ್ಚೆ ಹುಟ್ಟುಹಾಕಿದ ಶ್ರೀಪಡ್ರೆ ಪೋಸ್ಟ್ -
ಒಂದೇ ವರ್ಷದಲ್ಲಿ 800 ಕೋಟಿ ರೂ ಮೌಲ್ಯದ ಕಂಪನಿ ಕಟ್ಟಿದ 23ರ ಹರೆಯದ ಅಂಜಲಿ ಸರ್ದಾನಾ -
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು












Click it and Unblock the Notifications