ಹವಾಮಾನ ಬದಲಾವಣೆ; ಆಲೂಗಡ್ಡೆ ಬೆಳೆಯ ರಕ್ಷಣೆ ಹೇಗೆ?
ಬೆಂಗಳೂರು, ಅಕ್ಟೋಬರ್ 21: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ರೈತರು ಆಲೂಗಡ್ಡೆ ಬೆಳೆಯನ್ನು ಬೆಳೆಯುತ್ತಾರೆ. ತುಂತುರು ಮಳೆ ಹಾಗೂ ಮೋಡ ಕವಿದ ವಾತಾವರಣ ಇರುವುದರಿಂದ ಬೆಳೆಗೆ ಅಂಗಮಾರಿ ಸೇರಿದಂತೆ ವಿವಿಧ ರೋಗ ತಗಲುವ ಸಾಧ್ಯತೆ ಇದೆ.
ರೈತರು ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು. ಆಲೂಗಡ್ಡೆಗೆ ಬರುವ ರೋಗಗಳಲ್ಲಿ ಕೊನೆಯ ಅಂಗಮಾರಿ ರೋಗ ಅತ್ಯಂತ ಅಪಾಯಕಾರಿಯಾಗಿದೆ ಎಂದು ತಜ್ಞರು ಹೇಳಿದ್ದಾರೆ.
ಆಲೂಗಡ್ಡೆ ಬೆಳೆಯುವ ರೈತರು ರೋಗದ ಲಕ್ಷಣಗಳನ್ನು ಮೊದಲು ಪತ್ತೆ ಹಚ್ಚಬೇಕು. ರೋಗ ಬಂದಿದ್ದರೆ ನೀರಿನಿಂದ ಆವೃತವಾದ ಕಂದು ಮಿಶ್ರಿತ ಕಪ್ಪು ಬಣ್ಣದ ಚುಕ್ಕೆಗಳು ಎಲೆ, ಕಾಂಡ ಮತ್ತು ಗಡ್ಡೆಗಳ ಮೇಲೆ ಕಂಡು ಬರುತ್ತದೆ.
ಎಲೆಯ ಮೇಲಿನ ಚುಕ್ಕೆಗಳು ಕಂದು ಬಣ್ಣದಿಂದ ಕೂಡಿರುತ್ತದೆ ನಂತರ ಕಪ್ಪು ಬಣ್ಣಕ್ಕೆ ತಿರುಗುತ್ತವೆ. ಎಲೆಯ ಕೆಳಗಡೆ ಅರಳೆಯಂತಹ ಬಿಳಿ ಬಣ್ಣದ ಶಿಲೀಂದ್ರದ ಬೆಳವಣಿಗೆ ಕಂಡು ಬರುತ್ತದೆ.

ಎಲೆಯನ್ನು ಆವರಿಸುತ್ತದೆ
ಅಂಗಮಾರಿ ರೋಗ ಹೆಚ್ಚು ಆದ್ರತೆಯುಳ್ಳ ಹವಾಗುಣ ಮತ್ತು ಮೋಡ ಕವಿದ ವಾತಾವರಣ ಇದ್ದಲ್ಲಿ ಚುಕ್ಕೆಗಳು ಒಂದುಗೂಡಿ ಪೂರ್ತಿ ಎಲೆಯನ್ನು ಆವರಿಸುತ್ತದೆ. ಗಿಡದ ಕಾಂಡಕ್ಕೂ ಸಹ ಹಬ್ಬಿ ನಂತರ ಗಿಡವು ಒಣಗುತ್ತದೆ. ಅಲ್ಲದೆ ರೋಗಾಣು ಮಣ್ಣಿನಲ್ಲಿರುವ ಗಡ್ಡೆಗಳಿಗೆ ತಗುಲಿ ಗಡ್ಡೆಗಳು ಕಂದು ಬಣ್ಣಕ್ಕೆ ತಿರುಗಿ ಕೊಳೆಯಲು ಆರಂಭವಾಗುತ್ತದೆ. ರೋಗದಿಂದ ಬಳಲುತ್ತಿರುವ ಗಿಡ ಕೆಲವೇ ದಿನಗಳಲ್ಲಿ ಒಣಗುತ್ತದೆ.

ರೋಗದ ಹತೋಟಿ ಹೇಗೆ?
ಮೋಡ ಕವಿದ ವಾತಾವರಣ, ತುಂತುರು ಮಳೆ ಹವಾಮಾನದಲ್ಲಿ ಈ ರೋಗ ಹೆಚ್ಚು ಉಲ್ಬಣವಾಗುತ್ತದೆ. ರೈತರು ವಾತಾವರಣ ಬದಲಾಗುತ್ತಿರುವುದನ್ನು ಗಮನಿಸಬೇಕು. ರೋಗ ರಹಿತ ಶಿಫಾರಿತ ಗಡ್ಡೆಗಳನ್ನೇ ಬಿತ್ತನೆಗಾಗಿ ಆಯ್ದು ಕೊಳ್ಳಬೇಕು. ಕತ್ತರಿಸಿದ ಬೀಜದ ಗಡ್ಡೆಯನ್ನು 2 ಗ್ರಾಂ ಮ್ಯಾಂಕೋಜೆಬ್ ಒಂದು ಲೀಟರ್ ನೀರಿನಲ್ಲಿ ಕರಗಿಸಿ ತಯಾರಿಸಿದ ದ್ರಾವಣದಲ್ಲಿ 5 ನಿಮಿಷ ಅದ್ದಿ ಉಪಚರಿಸಿ ಬಿತ್ತನೆ ಮಾಡಬೇಕು.

ಔಷಧಿಗಳ ಮೂಲಕ ನಿಯಂತ್ರಣ
ಅಂಗಮಾರಿ ರೋಗದ ಪ್ರಾರಂಭಿಕ ಹಂತದಲ್ಲಿ 2.0 ಗ್ರಾಂ ಮ್ಯಾಂಕೋಜೆಬ್ ಅಥವಾ 3.0 ಗ್ರಾಂ ತಾಮ್ರದ ಆಕ್ಸಿಕ್ಲೊರೈಡ್ ಅಥವಾ 2.0 ಗ್ರಾಂ ಮೆಟಲಾಕ್ಷಿಲ್ + ಮ್ಯಾಂಕೋಜೆಬ್ ನ್ನು ಪ್ರತಿ ಲೀಟರ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು. ನಂತರದ ಹಂತಗಳಲ್ಲಿ/ ರೋಗದ ತೀವ್ರತೆ ಹೆಚ್ಚಾಗಿದ್ದಾಗ 2.0 ಗ್ರಾಂ ಫೊಸ್ಟೈಲ್-ಎಲ್ ಅಥವಾ 1.0 ಗ್ರಾಂ ಡೈಮಿಥೋಮಾರ್ಪ ಜೊತೆಗೆ 2.0 ಗ್ರಾಂ ಮೆಟಿರಾಮ ಅನ್ನು ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು.

3 ಹಂತದ ಸಿಂಪರಣೆ
ಮೂರನೆಯ ಹಂತದಲ್ಲಿ ಸಿಂಪರಣೆಯಾಗಿ 2.0 ಗ್ರಾಂ ಸೈಮಾಕ್ಸಾನಿಲ್ + ಮ್ಯಾಂಕೋಜೆಬ್ ಅಥವಾ 3.0 ಗ್ರಾಂ ಫೆನಾಮಿಡೊನ್ + ಮ್ಯಾಂಕೋಜೆಬ್ ಅನ್ನು ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು. 4ನೇಯ ಸಿಂಪರಣೆಯಾಗಿ 1.0 ಮಿ.ಲೀ. ಅಜೋಕ್ಸಿಸ್ಟ್ರೋಬಿನ್ ಅಥವಾ 2.0 ಗ್ರಾಂ ಪೈರಾಕ್ಲೋಸ್ಟ್ರೊಬಿನ್ + ಮೆಟಿರಾಮ ಅಥವಾ 1.0 ಮಿ.ಲೀ. ಫ್ಯಾಮೊಕ್ಸಾಡೋನ್ + ಸೈಮಾಕ್ಸಾನಿಲ್ ನ್ನು ಪ್ರತಿ ಲೀಟರ್ ನೀರಿನಲ್ಲಿ ಬೆರಸಿ ಸಿಂಪಡಿಸಬೇಕು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications