ಹವಾಮಾನ ಬದಲಾವಣೆ; ಆಲೂಗಡ್ಡೆ ಬೆಳೆಯ ರಕ್ಷಣೆ ಹೇಗೆ?
ಬೆಂಗಳೂರು, ಅಕ್ಟೋಬರ್ 21: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ರೈತರು ಆಲೂಗಡ್ಡೆ ಬೆಳೆಯನ್ನು ಬೆಳೆಯುತ್ತಾರೆ. ತುಂತುರು ಮಳೆ ಹಾಗೂ ಮೋಡ ಕವಿದ ವಾತಾವರಣ ಇರುವುದರಿಂದ ಬೆಳೆಗೆ ಅಂಗಮಾರಿ ಸೇರಿದಂತೆ ವಿವಿಧ ರೋಗ ತಗಲುವ ಸಾಧ್ಯತೆ ಇದೆ.
ರೈತರು ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು. ಆಲೂಗಡ್ಡೆಗೆ ಬರುವ ರೋಗಗಳಲ್ಲಿ ಕೊನೆಯ ಅಂಗಮಾರಿ ರೋಗ ಅತ್ಯಂತ ಅಪಾಯಕಾರಿಯಾಗಿದೆ ಎಂದು ತಜ್ಞರು ಹೇಳಿದ್ದಾರೆ.
ಆಲೂಗಡ್ಡೆ ಬೆಳೆಯುವ ರೈತರು ರೋಗದ ಲಕ್ಷಣಗಳನ್ನು ಮೊದಲು ಪತ್ತೆ ಹಚ್ಚಬೇಕು. ರೋಗ ಬಂದಿದ್ದರೆ ನೀರಿನಿಂದ ಆವೃತವಾದ ಕಂದು ಮಿಶ್ರಿತ ಕಪ್ಪು ಬಣ್ಣದ ಚುಕ್ಕೆಗಳು ಎಲೆ, ಕಾಂಡ ಮತ್ತು ಗಡ್ಡೆಗಳ ಮೇಲೆ ಕಂಡು ಬರುತ್ತದೆ.
ಎಲೆಯ ಮೇಲಿನ ಚುಕ್ಕೆಗಳು ಕಂದು ಬಣ್ಣದಿಂದ ಕೂಡಿರುತ್ತದೆ ನಂತರ ಕಪ್ಪು ಬಣ್ಣಕ್ಕೆ ತಿರುಗುತ್ತವೆ. ಎಲೆಯ ಕೆಳಗಡೆ ಅರಳೆಯಂತಹ ಬಿಳಿ ಬಣ್ಣದ ಶಿಲೀಂದ್ರದ ಬೆಳವಣಿಗೆ ಕಂಡು ಬರುತ್ತದೆ.

ಎಲೆಯನ್ನು ಆವರಿಸುತ್ತದೆ
ಅಂಗಮಾರಿ ರೋಗ ಹೆಚ್ಚು ಆದ್ರತೆಯುಳ್ಳ ಹವಾಗುಣ ಮತ್ತು ಮೋಡ ಕವಿದ ವಾತಾವರಣ ಇದ್ದಲ್ಲಿ ಚುಕ್ಕೆಗಳು ಒಂದುಗೂಡಿ ಪೂರ್ತಿ ಎಲೆಯನ್ನು ಆವರಿಸುತ್ತದೆ. ಗಿಡದ ಕಾಂಡಕ್ಕೂ ಸಹ ಹಬ್ಬಿ ನಂತರ ಗಿಡವು ಒಣಗುತ್ತದೆ. ಅಲ್ಲದೆ ರೋಗಾಣು ಮಣ್ಣಿನಲ್ಲಿರುವ ಗಡ್ಡೆಗಳಿಗೆ ತಗುಲಿ ಗಡ್ಡೆಗಳು ಕಂದು ಬಣ್ಣಕ್ಕೆ ತಿರುಗಿ ಕೊಳೆಯಲು ಆರಂಭವಾಗುತ್ತದೆ. ರೋಗದಿಂದ ಬಳಲುತ್ತಿರುವ ಗಿಡ ಕೆಲವೇ ದಿನಗಳಲ್ಲಿ ಒಣಗುತ್ತದೆ.

ರೋಗದ ಹತೋಟಿ ಹೇಗೆ?
ಮೋಡ ಕವಿದ ವಾತಾವರಣ, ತುಂತುರು ಮಳೆ ಹವಾಮಾನದಲ್ಲಿ ಈ ರೋಗ ಹೆಚ್ಚು ಉಲ್ಬಣವಾಗುತ್ತದೆ. ರೈತರು ವಾತಾವರಣ ಬದಲಾಗುತ್ತಿರುವುದನ್ನು ಗಮನಿಸಬೇಕು. ರೋಗ ರಹಿತ ಶಿಫಾರಿತ ಗಡ್ಡೆಗಳನ್ನೇ ಬಿತ್ತನೆಗಾಗಿ ಆಯ್ದು ಕೊಳ್ಳಬೇಕು. ಕತ್ತರಿಸಿದ ಬೀಜದ ಗಡ್ಡೆಯನ್ನು 2 ಗ್ರಾಂ ಮ್ಯಾಂಕೋಜೆಬ್ ಒಂದು ಲೀಟರ್ ನೀರಿನಲ್ಲಿ ಕರಗಿಸಿ ತಯಾರಿಸಿದ ದ್ರಾವಣದಲ್ಲಿ 5 ನಿಮಿಷ ಅದ್ದಿ ಉಪಚರಿಸಿ ಬಿತ್ತನೆ ಮಾಡಬೇಕು.

ಔಷಧಿಗಳ ಮೂಲಕ ನಿಯಂತ್ರಣ
ಅಂಗಮಾರಿ ರೋಗದ ಪ್ರಾರಂಭಿಕ ಹಂತದಲ್ಲಿ 2.0 ಗ್ರಾಂ ಮ್ಯಾಂಕೋಜೆಬ್ ಅಥವಾ 3.0 ಗ್ರಾಂ ತಾಮ್ರದ ಆಕ್ಸಿಕ್ಲೊರೈಡ್ ಅಥವಾ 2.0 ಗ್ರಾಂ ಮೆಟಲಾಕ್ಷಿಲ್ + ಮ್ಯಾಂಕೋಜೆಬ್ ನ್ನು ಪ್ರತಿ ಲೀಟರ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು. ನಂತರದ ಹಂತಗಳಲ್ಲಿ/ ರೋಗದ ತೀವ್ರತೆ ಹೆಚ್ಚಾಗಿದ್ದಾಗ 2.0 ಗ್ರಾಂ ಫೊಸ್ಟೈಲ್-ಎಲ್ ಅಥವಾ 1.0 ಗ್ರಾಂ ಡೈಮಿಥೋಮಾರ್ಪ ಜೊತೆಗೆ 2.0 ಗ್ರಾಂ ಮೆಟಿರಾಮ ಅನ್ನು ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು.

3 ಹಂತದ ಸಿಂಪರಣೆ
ಮೂರನೆಯ ಹಂತದಲ್ಲಿ ಸಿಂಪರಣೆಯಾಗಿ 2.0 ಗ್ರಾಂ ಸೈಮಾಕ್ಸಾನಿಲ್ + ಮ್ಯಾಂಕೋಜೆಬ್ ಅಥವಾ 3.0 ಗ್ರಾಂ ಫೆನಾಮಿಡೊನ್ + ಮ್ಯಾಂಕೋಜೆಬ್ ಅನ್ನು ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು. 4ನೇಯ ಸಿಂಪರಣೆಯಾಗಿ 1.0 ಮಿ.ಲೀ. ಅಜೋಕ್ಸಿಸ್ಟ್ರೋಬಿನ್ ಅಥವಾ 2.0 ಗ್ರಾಂ ಪೈರಾಕ್ಲೋಸ್ಟ್ರೊಬಿನ್ + ಮೆಟಿರಾಮ ಅಥವಾ 1.0 ಮಿ.ಲೀ. ಫ್ಯಾಮೊಕ್ಸಾಡೋನ್ + ಸೈಮಾಕ್ಸಾನಿಲ್ ನ್ನು ಪ್ರತಿ ಲೀಟರ್ ನೀರಿನಲ್ಲಿ ಬೆರಸಿ ಸಿಂಪಡಿಸಬೇಕು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications