ಬೆಳೆ ವೈಫಲ್ಯಯಿಂದ ಆತ್ಮಹತ್ಯೆಗೆ ಶರಣಾದ ಹುಣಸೂರಿನ ರೈತ ಮಹಿಳೆ
ಮೈಸೂರು, ಮಾರ್ಚ್ 13: ಬೆಳೆ ವೈಫಲ್ಯದ ಹಿನ್ನೆಲೆಯಲ್ಲಿ ರೈತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮುತ್ತುರಾಯನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಹಿಳೆಯನ್ನು ಪುಟ್ಟಲಕ್ಷ್ಮಮ್ಮ ಎಂದು ಗುರುತಿಸಲಾಗಿದೆ. ತಮ್ಮ ಜಮೀನಿನಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುಟ್ಟಲಕ್ಷ್ಮಮ್ಮ ಅವರು ಎರಡು ಎಕರೆ ಜಮೀನು ಹೊಂದಿದ್ದು, ಬ್ಯಾಂಕಿನಲ್ಲಿ 5 ಲಕ್ಷ ರೂಪಾಯಿಗಳಷ್ಟು ಸಾಲ ಪಡೆದಿದ್ದರು. ಅದಲ್ಲದೆ ತಮ್ಮ ಚಿನ್ನಾಭರಣಗಳನ್ನು ಕೂಡ ಗಿರವಿ ಇಟ್ಟು ರಾಗಿ, ಹೊಗೆಸೊಪ್ಪು ಬೆಳೆದಿದ್ದರು.

ಆದರೆ ಬೆಳೆಯು ಸಂಪೂರ್ಣ ಕೈಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.












Click it and Unblock the Notifications