ಸಾಲ ಮನ್ನಾದ ಹಣೆ ಬರಹ ಇನ್ನೊಂದು ತಿಂಗಳಲ್ಲಿ ಗೊತ್ತಾಗುತ್ತೆ - ಎಚ್ಡಿಕೆ
ಉಡುಪಿ, ಜೂನ್ 26: "ಸಿದ್ಧರಾಮಯ್ಯ ರಾಜ್ಯದ ರೈತರಿಗೆ ಕೊಟ್ಟ ಬಳುವಳಿ ಏನು ಎಂಬುದನ್ನು ಅವರ ಕಾಲದಲ್ಲಿ ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಇತಿಹಾಸ ಹೇಳುತ್ತದೆ," ಹೀಗಂಥ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪತ್ನಿ, ಮಗನೊಂದಿಗೆ ಭಾನುವಾರ ಸಂಜೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡುತಿದ್ದರು.

"ಸಿದ್ದರಾಮಯ್ಯ ಮಾಡಿದ 50,000ರೂ. ಸಾಲಮನ್ನಾದ ಹಣೆಬರಹ ಇನ್ನೊಂದು ತಿಂಗಳಲ್ಲಿ ಗೊತ್ತಾಗುತ್ತದೆ," ಎಂದು ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ಹೇಳಿದರು.
ರಾಷ್ಟ್ರಪತಿಗಳು ಇತ್ತೀಚೆಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದಾಗ ಬಾರದ ಸಿದ್ಧರಾಮಯ್ಯರ ನಡೆಯನ್ನು ತೀವ್ರವಾಗಿ ಟೀಕಿಸಿದ ಕುಮಾರಸ್ವಾಮಿ, ಪೇಜಾವರ ಶ್ರೀಗಳು ಖುದ್ದಾಗಿ ನೀಡಿದ ಆಹ್ವಾನವನ್ನು ತಿರಸ್ಕರಿಸಿ ಉಡುಪಿಗೆ ಬಾರದಿರುವುದನ್ನು ಉದ್ದಟತನವೆಂದು ಬಣ್ಣಿಸಿದ್ದಾರೆ.
ನಷ್ಟವಿರುವುದು ಸಿದ್ಧರಾಮಯ್ಯರಿಗೆ ಹಾಗೂ ಪಕ್ಷಕ್ಕೆ. ಸಿಎಂರ ಈ ಉದ್ಧಟತನದಿಂದಲೇ ರಾಜ್ಯಕ್ಕೆ ಇಂಥ ಕೆಟ್ಟ ಸ್ಥಿತಿ ಬಂದಿದೆ. ಇದರಿಂದ ಮಠಕ್ಕಾಗಲೀ, ಪೇಜಾವರ ಶ್ರೀಗಳಿಗಾಗಲೀ ನಷ್ಟವಿಲ್ಲ ಎಂದರು.

ಮೀರಾ ಕುಮಾರ್ ಗೆ ಬೆಂಬಲ
ಕಾಂಗ್ರೆಸ್ ನಾಯಕ ಗುಲಾಂ ನಬಿ ಆಝಾದ್ ತನಗೆ ಹಾಗೂ ತಂದೆ ಎಚ್.ಡಿ.ದೇವೇಗೌಡರಿಗೆ ದೂರವಾಣಿ ಕರೆ ಮಾಡಿ ಮಾತನಾಡಿ ಮೀರಾ ಕುಮಾರ್ ಅವರಿಗೆ ಬೆಂಬಲವನ್ನು ಯಾಚಿಸಿದ್ದರು. ಹೀಗಾಗಿ 17 ಪಕ್ಷಗಳ ಅಭ್ಯರ್ಥಿಯಾಗಿರುವ ಅವರಿಗೆ ಪಕ್ಷದ ಬೆಂಬಲ ನೀಡಲು ನಿರ್ಧರಿಸಿದ್ದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಮೀರಾ ಕುಮಾರ್ ಅವರು ಹಲವು ಹುದ್ದೆಗಳಲ್ಲಿ ಅತ್ಯುತ್ತಮ ಕಾರ್ಯಗಳನ್ನು ಮಾಡಿದ್ದು, ಅಲ್ಲದೇ ಬಾಬು ಜಗಜೀವನ್ರಾಂ ಅವರ ಮಗಳಾಗಿ ಅವರ ಕೊಡುಗೆಯ ಹಿನ್ನೆಲೆಯಲ್ಲಿ ಹಾಗೂ 17 ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿರುವ ಅವರಿಗೆ ಬೆಂಬಲ ನೀಡಲಿದ್ದೇವೆ ಎಂದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications