ಉಪೇಂದ್ರ ಬಗ್ಗೆ ಯಾವುದೇ ಕಾಮೆಂಟ್ಸ್ ಮಾಡೋಲ್ಲ : ಎಸ್ಆರ್ ಹಿರೇಮಠ
ಧಾರವಾಡ, ಡಿಸೆಂಬರ್ 11: 'ರೈತರ ಜಮೀನಿನಲ್ಲಿ ನಟ ಉಪೇಂದ್ರ ರೆಸಾರ್ಟ್ ಕಟ್ಟಿರುವುದು ಸರಿಯಲ್ಲ, ರಾಜಕೀಯ ವ್ಯವಸ್ಥೆಯನ್ನು
ಬದಲಾವಣೆ ಮಾಡುತ್ತೇನೆ' ಎಂದು ಹೊರಟಿರುವ ನಟ ಉಪೇಂದ್ರ ಅವರು, ಮೊದಲು ರೈತರ ಜಮೀನನ್ನು ಹಿಂತಿರುಗಿಸಿ ಬದಲಾವಣೆ ತಮ್ಮಿಂದಲೇ ಆಗಲು ನಾಂದಿ ಹಾಡಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಆಗ್ರಹಿಸಿದ್ದಾರೆ.
ಧಾರವಾಡದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಕೋರ್ಟಿನಲ್ಲಿ ತೀರ್ಪು ಆಗುವ ಮುನ್ನವೇ ಉಪೇಂದ್ರ ಅವರು ರೈತರಿಗೆ ಜಮೀನು ವಾಪಸ್ ಕೊಟ್ಟು ಸುಧಾರಣೆ ತನ್ನಿಂದಲೇ ಆಗಲಿ ಅನ್ನೋದನ್ನು ತೋರಿಸಿಕೊಡಬೇಕಿದೆ. ಇನ್ನು ನನಗೆ ಅವರ ಮೇಲೆ ವೈಯಕ್ತಿಕ
ದ್ವೇಷ ಇಲ್ಲ, ಅಲ್ಲದೆ ಅವರ ಮುಂದಿನ ರಾಜಕೀಯ ಜೀವನವನ್ನು ಅವರು ಸುಧಾರಿಸಿಕೊಳ್ಳಲಿ ಎಂದು ನಾನು ಸಲಹೆ ನೀಡಿದ್ದೆ.

ಆದರೆ, ಉಪೇಂದ್ರರಿಗೆ ಆ ವಿಚಾರ ಮನವರಿಕೆ ಆಗಿಲ್ಲ. ಇನ್ನು ಅವರೊಬ್ಬ ಯುವಕರು, ಪಕ್ಷ ಸ್ಥಾಪಿಸಿದ್ದು ಸ್ವಾಗತಾರ್ಹ, ಆದ್ರೆ, ಅವರು ನನ್ನ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ ಇರೋದು ನನಗೆ ಸರಿ ಅನ್ನಿಸುತ್ತಿಲ್ಲ. ಹೀಗಾಗಿ ಇನ್ನೂ ಮುಂದೆ ಉಪೇಂದ್ರ ಬಗ್ಗೆ ನಾನು ಯಾವುದೇ ಕಾಮೆಂಟ್ಸ್ ಮಾಡೋಲ್ಲ ಎಂದರು.
ಇದಕ್ಕೂ ಮುನ್ನ, ಈ ಬಗ್ಗೆ ಪ್ರತಿಕ್ರಿಯಿಸಿದ್ದ ಉಪೇಂದ್ರ, 'ನಾನು ನಮ್ಮಣ್ಣ ಸೇರಿ ಜಮೀನು ತೆಗೆದುಕೊಂಡಿದ್ದೇವೆ. ಕೃಷಿಗೆಂದು ತೆಗೆದುಕೊಂಡ ಸ್ಥಳದಲ್ಲಿ ಕೃಷಿ ಮಾಡುತ್ತಿದ್ದೇವೆ. ರೆಸಾರ್ಟ್ ಹಿಂದೆ ಈ ಕೃಷಿ ಭೂಮಿಯಿದೆ. ಕೆ.ಎಸ್.ಡಿಯಿಂದ ನೆರವು ಪಡೆದು ರೆಸಾರ್ಟ್ ಮಾಡಿದ್ದೇವೆ. ಕೋರ್ಟ್ ನಿರ್ಧಾರ ತೆಗೆದುಕೊಂಡಿದೆ. ಹಿರೇಮಠ ಅವರು ಕೋರ್ಟ್ ನಿರ್ಧಾರವನ್ನೇ ಪ್ರಶ್ನೆ ಮಾಡುತ್ತಿದ್ದಾರೆ' ಎಂದು ಉಪೇಂದ್ರ ಅವರು ಹಿರೇಮಠ್ ಅವರನ್ನು ಪ್ರಶ್ನಿಸಿದ್ದರು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications