ಉಪೇಂದ್ರ ಬಗ್ಗೆ ಯಾವುದೇ ಕಾಮೆಂಟ್ಸ್ ಮಾಡೋಲ್ಲ : ಎಸ್ಆರ್ ಹಿರೇಮಠ
ಧಾರವಾಡ, ಡಿಸೆಂಬರ್ 11: 'ರೈತರ ಜಮೀನಿನಲ್ಲಿ ನಟ ಉಪೇಂದ್ರ ರೆಸಾರ್ಟ್ ಕಟ್ಟಿರುವುದು ಸರಿಯಲ್ಲ, ರಾಜಕೀಯ ವ್ಯವಸ್ಥೆಯನ್ನು
ಬದಲಾವಣೆ ಮಾಡುತ್ತೇನೆ' ಎಂದು ಹೊರಟಿರುವ ನಟ ಉಪೇಂದ್ರ ಅವರು, ಮೊದಲು ರೈತರ ಜಮೀನನ್ನು ಹಿಂತಿರುಗಿಸಿ ಬದಲಾವಣೆ ತಮ್ಮಿಂದಲೇ ಆಗಲು ನಾಂದಿ ಹಾಡಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಆಗ್ರಹಿಸಿದ್ದಾರೆ.
ಧಾರವಾಡದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಕೋರ್ಟಿನಲ್ಲಿ ತೀರ್ಪು ಆಗುವ ಮುನ್ನವೇ ಉಪೇಂದ್ರ ಅವರು ರೈತರಿಗೆ ಜಮೀನು ವಾಪಸ್ ಕೊಟ್ಟು ಸುಧಾರಣೆ ತನ್ನಿಂದಲೇ ಆಗಲಿ ಅನ್ನೋದನ್ನು ತೋರಿಸಿಕೊಡಬೇಕಿದೆ. ಇನ್ನು ನನಗೆ ಅವರ ಮೇಲೆ ವೈಯಕ್ತಿಕ
ದ್ವೇಷ ಇಲ್ಲ, ಅಲ್ಲದೆ ಅವರ ಮುಂದಿನ ರಾಜಕೀಯ ಜೀವನವನ್ನು ಅವರು ಸುಧಾರಿಸಿಕೊಳ್ಳಲಿ ಎಂದು ನಾನು ಸಲಹೆ ನೀಡಿದ್ದೆ.

ಆದರೆ, ಉಪೇಂದ್ರರಿಗೆ ಆ ವಿಚಾರ ಮನವರಿಕೆ ಆಗಿಲ್ಲ. ಇನ್ನು ಅವರೊಬ್ಬ ಯುವಕರು, ಪಕ್ಷ ಸ್ಥಾಪಿಸಿದ್ದು ಸ್ವಾಗತಾರ್ಹ, ಆದ್ರೆ, ಅವರು ನನ್ನ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ ಇರೋದು ನನಗೆ ಸರಿ ಅನ್ನಿಸುತ್ತಿಲ್ಲ. ಹೀಗಾಗಿ ಇನ್ನೂ ಮುಂದೆ ಉಪೇಂದ್ರ ಬಗ್ಗೆ ನಾನು ಯಾವುದೇ ಕಾಮೆಂಟ್ಸ್ ಮಾಡೋಲ್ಲ ಎಂದರು.
ಇದಕ್ಕೂ ಮುನ್ನ, ಈ ಬಗ್ಗೆ ಪ್ರತಿಕ್ರಿಯಿಸಿದ್ದ ಉಪೇಂದ್ರ, 'ನಾನು ನಮ್ಮಣ್ಣ ಸೇರಿ ಜಮೀನು ತೆಗೆದುಕೊಂಡಿದ್ದೇವೆ. ಕೃಷಿಗೆಂದು ತೆಗೆದುಕೊಂಡ ಸ್ಥಳದಲ್ಲಿ ಕೃಷಿ ಮಾಡುತ್ತಿದ್ದೇವೆ. ರೆಸಾರ್ಟ್ ಹಿಂದೆ ಈ ಕೃಷಿ ಭೂಮಿಯಿದೆ. ಕೆ.ಎಸ್.ಡಿಯಿಂದ ನೆರವು ಪಡೆದು ರೆಸಾರ್ಟ್ ಮಾಡಿದ್ದೇವೆ. ಕೋರ್ಟ್ ನಿರ್ಧಾರ ತೆಗೆದುಕೊಂಡಿದೆ. ಹಿರೇಮಠ ಅವರು ಕೋರ್ಟ್ ನಿರ್ಧಾರವನ್ನೇ ಪ್ರಶ್ನೆ ಮಾಡುತ್ತಿದ್ದಾರೆ' ಎಂದು ಉಪೇಂದ್ರ ಅವರು ಹಿರೇಮಠ್ ಅವರನ್ನು ಪ್ರಶ್ನಿಸಿದ್ದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications