ಭಾರತಕ್ಕೆ ಭೂತಾನ್ ದೇಶದಿಂದ ಅಡಿಕೆ ಆಮದು: ಆತಂಕ ಬೇಡ ಎಂದ ಆರಗ ಜ್ಞಾನೇಂದ್ರ
ಬೆಂಗಳೂರು, ಸೆಪ್ಟೆಂಬರ್ 30: ನೆರೆಯ ದೇಶ ಭೂತಾನ್ನಿಂದ ಪ್ರತಿ ವರ್ಷ 17,000 ಸಾವಿರ ಟನ್ ಹಸಿರು ಅಡಿಕೆ ಆಮದು ಮಾಡಿ ಕೊಳ್ಳಲು ಕೇಂದ್ರ ಸರ್ಕಾರ ಇತ್ತೀಚೆಗೆ ಅವಕಾಶ ನೀಡಿದೆ. ಇದರಿಂದ ದೇಶಿಯ ಅಡಿಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರಾಜ್ಯದ ಅಡಿಕೆ ಬೆಳೆಗಾರರಿಗೆ ಅಭಯ ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕದ ರಾಜ್ಯದ ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಆರಗ ಜ್ಞಾನೇಂದ್ರ ಅವರು, ''ಪ್ರಸ್ತುತ ಭಾರತದ ದೇಶದಿಂದ ಭೂತಾನ್ ದೇಶಕ್ಕೆ ಸಂಸ್ಕರಿತ ಅಡಿಕೆ ಉತ್ಪನ್ನಗಳು, ಆಮದು ಪ್ರಮಾಣಕ್ಕಿಂತ ಹೆಚ್ಚು ರಫ್ತು ಆಗುತ್ತಿದೆ. ಭೂತಾನ್ ನಿಂದ ಕೇವಲ ಹಸಿ ಅಡಿಕೆಯನ್ನು ಆಮದು ಮಾಡಿಕೊಳ್ಳಲು ಮಾತ್ರ ಕೇಂದ್ರ ಸರ್ಕಾರ ಅನುಮತಿಸಿದೆ'' ಎಂದು ಅವರು ಹೇಳಿದರು.
''ನೆರೆಯ ಭೂತಾನ್ ದೇಶವು, ಭಾರತದ ಪರಂಪರಾಗತ ಮಿತ್ರ ದೇಶವಾಗಿದೆ. ಉಭಯ ದೇಶಗಳ ನಡುವೆ ಉತ್ತಮ ವಾಣಿಜ್ಯ ವಹಿವಾಟು ನಡೆದುಕೊಂಡು ಬಂದಿದೆ. ಅಡಿಕೆ ಮಾರುಕಟ್ಟೆಯಲ್ಲಿ ಸ್ಥಿರತೆಯನ್ನು ಕಾಯ್ದು ಕೊಳ್ಳಲು ಕರ್ನಾಟಕ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಜೊತೆಗೆ ನಿರಂತರ ಸಂಪರ್ಕದಲ್ಲಿದೆ. ಭೂತಾನ್ ಅಡಿಕೆ ಆಮದು ವಿಚಾರವಾಗಿಯೂ ಕೇಂದ್ರದೊಂದಿಗೆ ಮಾತುಕತೆ ನಡೆಸಲಾಗಿದೆ. ಬೆಳೆಗಾರರಿಗೆ, ಯಾವುದೇ ಗೊಂದಲ ಆತಂಕ ಬೇಡ'' ಎಂದು ಸಚಿವರು ತಿಳಿಸಿದ್ದಾರೆ.

ದೆಹಲಿಗೆ ನಿಯೋಗ ಕರೆದೊಯತ್ತೇವೆ
ವಿದೇಶಿ ಹಸಿರು ಅಡಿಕೆಯಿಂದ ಕರ್ನಾಟಕದ ಅಡಿಕೆ ಉತ್ಪನ್ನದಲ್ಲಾಗಲಿ, ಮಾರುಕಟ್ಟೆಯಲ್ಲಾಗಲಿ ಯಾವುದೇ ಪರಿಣಾಮ ಬೀರದಂತೆ ನೋಡಿಕೊಳ್ಳುವ ಸಲುವಾಗಿ ಕೇಂದ್ರ ಮನವರಿಕೆ ಮಾಡಿಕೊಡಲಾಗುವುದು. ಈ ಸಂಬಂಧ ಲೋಕಸಭಾ ಸದಸ್ಯರ ನೇತೃತ್ವದಲ್ಲಿ ನಿಯೋಗ ಒಂದನ್ನು ದೆಹಲಿಗೆ ಕರೆದೊಯ್ಯಲಾಗುವುದು ಎಂದು ಅವರು ಭರವಸೆ ನೀಡಿದರು.
ಕೇಂದ್ರ ಸರ್ಕಾರ ಕಳೆದ ಬುಧವಾರ ವಾರ್ಷಿಕವಾಗಿ ಭೂತಾನ್ನಿಂದ ಕನಿಷ್ಠ ಆಮದು ಬೆಲೆ (ಎಂಐಪಿ) ಷರತ್ತು ಇಲ್ಲದೆಯೇ 17,000 ಟನ್ ಹಸಿರು ಅಡಿಕೆ ಆಮದು ಮಾಡಿಕೊಳ್ಳಬಹುದು ಎಂದು ಅನುಮತಿ ನೀಡಿದೆ. ಇದರ ಬೆನ್ನಲ್ಲೆ ವಿದೇಶಿ ವ್ಯಾಪಾರ ಮಹಾನಿರ್ದೇಶನಾಲಯದಿಂದ ನೋಂದಣಿ ಪ್ರಮಾಣ ಪತ್ರ ಪಡೆದವರು ಆಮದು ಮಾಡಿಕೊಳ್ಳಲು ಸಜ್ಜಾಗಲಿದ್ದಾರೆ. ಸರ್ಕಾರದ ಈ ನಿರ್ಧಾರದಿಂದ ಅಡಿಕೆ ಉತ್ಪಾದನೆಯಲ್ಲಿ ಮೊದಲ ಸ್ಥಾನದಲ್ಲಿರುವ ಕರ್ನಾಟಕದ ಬೆಳೆಗಾರರು, ಮಾರುಕಟ್ಟೆ ವ್ಯಾಪಾರಿಗಳು ಆತಂಕಗೊಂಡಿದ್ದರು ಎನ್ನಲಾಗಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications