ಚಿತ್ರದುರ್ಗ: ಅಡಿಕೆ ಬೆಳೆಗಾರರು ಗಮನಿಸಲೇಬೇಕಾದ ಪ್ರಮುಖ ಮಾಹಿತಿ
ಚಿತ್ರದುರ್ಗ, ಆಗಸ್ಟ್, 25: ಇತ್ತಿಚಿನ ದಿನಗಳಲ್ಲಿ ಚಿತ್ರದುರ್ಗ ಜಿಲ್ಲೆಯ ಅಡಿಕೆ ಬೆಳೆಗಾರರು ಹಾಗೂ ಮಧ್ಯವರ್ತಿಗಳ ನಡುವೆ ತುಂಬಾ ಮೊಸ, ವಂಚನೆ ನಡೆಯುತ್ತಿದೆ. ಇದನ್ನು ತಡೆಗಟ್ಟಲು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ಅಡಿಕೆ ಬೆಳೆಗಾರರಿಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಿದ್ದಾರೆ. ಮಾಹಿತಿ ಇಲ್ಲಿದೆ ತಿಳಿಯಿರಿ.
ಚಿತ್ರದುರ್ಗ ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ತಿಳಿಯಪಡಿವುದೇನೆಂದರೆ ಪ್ರಸಕ್ತ 2024ನೇ ಸಾಲಿನಲ್ಲಿ ಅಡಿಕೆ ಫಸಲು ಕೊಯ್ಲಿನ ಕಾಲ ಆರಂಭ ಆಗಿದೆ. ಅಡಿಕೆ ಬೆಳೆಗಾರರು ತಮ್ಮ ತೋಟಗಳಲ್ಲಿಯೇ ಅಡಿಕೆಯನ್ನು ಮಾರಾಟ ಮಾಡುತ್ತಿದ್ದಾರೆ. ಅಂದರೆ ತೋಟವನ್ನು ಕೇಣಿಗೆ ನೀಡುವುದು, ಹಸಿ ಅಡಿಕೆಯನ್ನೇ ಮಾರಾಟ ಮಾಡುವುದು. ಇಲ್ಲವೇ ಒಣ ಅಡಿಕೆ ತಯಾರಿಸಿ ಮಾರುವುದು ಇತ್ಯಾದಿ. ಇದೇ ರೀತಿಯಾಗಿ ಕಳೆದ ವರ್ಷಗಳಲ್ಲಿ ನಡೆದ ವಹಿವಾಟಿನಲ್ಲಿ ರೈತರಿಗೆ ವ್ಯಾಪಾರಸ್ಥರು ಸರಿಯಾಗಿ ಹಣವನ್ನು ಬಟವಾಡೆ ಮಾಡದೇ ಸತಾಯಿಸಿದ್ದಾರೆ.

ಈ ಬಗ್ಗೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ತನಿಖೆ ಕೂಡ ನಡೆಯುತ್ತಿದೆ. ಹಲವು ರೈತರು ವಂಚನೆಗೆ ಒಳಗಾಗಿರುತ್ತಾರೆ. ಈ ನಿಟ್ಟಿನಲ್ಲಿ ಕಳೆದ ಸಾಲಿನಲ್ಲಿ ಕೆಲವು ರೈತರಿಗೆ ಆಗಿರುವ ಕಹಿ ಅನುಭವದ ಹಿನ್ನೆಲೆ ಚಿತ್ರದುರ್ಗ ಜಿಲ್ಲೆಯ ಅಡಿಕೆ ಬೆಳೆಗಾರರಲ್ಲಿ ಕೋರುವುದೇನೆಂದರೆ, ಈ ಮೇಲ್ಕಂಡಂತೆ ಅಡಿಕೆ ಮಾರಾಟದ ಸಮಯದಲ್ಲಿ ಮುಂಗಡವಾಗಿ ಎಲ್ಲಾ ಹಣವನ್ನು ಪಡೆದು ಮಾರಾಟ ಮಾಡುವುದು ಉತ್ತಮ.
ರೈತರು ಬರೀ ನಂಬಿಕೆಗಳ ಮೇಲೆ ಇಲ್ಲವೇ ಚೀಟಿಗಳ ಮೇಲೆ ಬರೆದುಕೊಂಡು ವ್ಯವಹಾರ ನಡೆಸುತ್ತಿದ್ದು, ಈ ರೀತಿಯ ವಹಿವಾಟಿನಲ್ಲಿ ವ್ಯಾಪಾರಸ್ಥರು ರೈತರಿಗೆ ಹಣ ನೀಡದಿದ್ದಾಗ, ಕಾನೂನಿನ ಮೂಲಕ ರೈತರು ಹಣವನ್ನು ಪಡೆಯಲು ಸಾಧ್ಯ ಆಗುವುದಿಲ್ಲ.
ಆದ್ದರಿಂದ ರೈತರು ತಮ್ಮ ಅಡಿಕೆ ಮಾರುವ ಸಮಯದಲ್ಲಿ ಮುಂಗಡವಾಗಿ ಎಲ್ಲಾ ಹಣವನ್ನು ಪಡೆಯಲು ಸಾಧ್ಯ ಆಗದಿದ್ದರೆ, ವ್ಯಾಪಾರಸ್ಥರು ಅಥವಾ ಖೇಣಿದಾರರಿಂದ ಕಾನೂನಿನ ಅಡಿಯಲ್ಲಿ ಮಾನ್ಯತೆ ಪಡೆದಿರುವ Negotiable instrumentಗಳಾದ ಚೆಕ್ ಅಥವಾ ಪ್ರಾಮಿಸರಿ ನೋಟ್ ಅಥವಾ Bill of Exchangeನಂತಹ ಸೂಕ್ತ ಭದ್ರತೆ ಪಡೆದುಕೊಂಡು ವಂಚನೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಿ ತಮ್ಮ ಬೆಳೆಯನ್ನು ಮಾರಾಟ ಮಾಡಲು ಕೋರಿದೆ ಎಂದು ಪ್ರಕಟಣೆಯ ಮೂಲಕ ಎಸ್.ಪಿ.ರಂಜಿತ್ ಕುಮಾರ್ ಬಂಡಾರು ಮನವಿ ಮಾಡಿದ್ದಾರೆ.
ಒಟ್ಟಾರೆಯಾಗಿ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಅಡಿಕೆ ಬೆಳೆಗಾರರು ಆಗಾಗ ಮೋಸ ಹೋಗುತ್ತಲೇ ಇದ್ದಾರೆ. ಈ ಮೋಸದ ಜಾಲವನ್ನು ತಡೆಗಟ್ಟಲು ಜಿಲ್ಲಾ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಭಂಡಾರು ಅವರು ಅಡಿಕೆ ಬೆಳೆಗಾರರಿಗೆ ಪ್ರಕಟಣೆ ಮೂಲಕ ಜಾಗೃತಿ ಮೂಡಿಸುತ್ತಿರುವುದು ವಿಶೇಷವಾಗಿದೆ. ಈ ಪ್ರಕಟಣೆಯಂತೆ ರೈತರು ಸಹ ಎಚ್ಚೆತ್ತುಕೊಳ್ಳಬೇಕಾಗಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications