ಕುವೈತ್ಗೆ ರಫ್ತಾಗುತ್ತಿದೆ ಭಾರತದ ಹಸುವಿನ ಸಗಣಿ
ಜೈಪುರ, ಜೂನ್ 14: ಭಾರತದಲ್ಲಿ ಕೃಷಿ ವಲಯದಲ್ಲಿ ಪ್ರಾಣಿ ಉತ್ಪನ್ನಗಳ ಯಶಸ್ವಿ ಬಳಕೆ ಸಾವಿರಾರು ವರ್ಷಗಳಿಂದ ನಡೆಯುತ್ತಿದೆ. ಪ್ರಾಣಿಗಳ ಜೊತೆಯಲ್ಲೇ ಭಾರತ ಕೃಷಿ ಸಾಗುತ್ತದೆ. ಅದರಲ್ಲೂ ಹಸುವನ್ನು ಗೋಮಾತೆ ಎಂದೇ ಪೂಜಿಸಿ ಸಾಕುತ್ತಾರೆ. ಸಗಣಿ ಗೊಬ್ಬರ ಭಾರತದಲ್ಲಿ ಅನಾದಿ ಕಾಲದಿಂದ ಬಳಕೆಯಲ್ಲಿದೆ. ಈಗೀಗ ಸಾವಯವ ಕೃಷಿ ಹೆಸರಿನಲ್ಲಿ ಕೊಟ್ಟಿಗೆ ಗೊಬ್ಬರಕ್ಕೆ ಬೇಡಿಕೆ ಬಂದಿದೆ.
ಕೃಷಿ ವಲಯದಲ್ಲಿ ಪಶು ಉತ್ಪನ್ನಗಳ ರಫ್ತಿನ ವಿಷಯದಲ್ಲಿ ಭಾರತ ಈಗಾಗಲೇ ದೊಡ್ಡ ಕೇಂದ್ರವಾಗಿದೆ ಮತ್ತು ಈಗ ದೇಶವು ಈ ವಲಯದಲ್ಲಿ ಮತ್ತೊಂದು ದೊಡ್ಡ ಮೈಲಿಗಲ್ಲನ್ನು ಸಾಧಿಸಿದೆ. ಕುವೈತ್ಗೆ ಭಾರತದಿಂದ ಹಸುವಿನ ಸಗಣಿ ರಫ್ತಾಗಲಿದೆ. 192 ಮೆಟ್ರಿಕ್ ಟನ್ಗಳಷ್ಟು ಬೃಹತ್ ಪ್ರಮಾಣದಲ್ಲಿ ರಫ್ತು ಮಾಡಲಾಗುವುದು ಎಂದು ಭಾರತೀಯ ಸಾವಯವ ರೈತ ಉತ್ಪಾದಕರ ಸಂಘದ ರಾಷ್ಟ್ರೀಯ ಅಧ್ಯಕ್ಷ ಅತುಲ್ ಗುಪ್ತಾ ಮಾಹಿತಿ ನೀಡಿದ್ದಾರೆ.
ಗೋವುಗಳ ರಕ್ಷಣೆಗಾಗಿ ನಮ್ಮ ತಂಡ ನಡೆಸಿದ ಅವಿರತ ಪ್ರಯತ್ನಗಳು ಫಲ ನೀಡಿವೆ ಎಂದ ಅವರು, ಜೈಪುರ ಮೂಲದ ಸನ್ರೈಸ್ ಅಗ್ರಿಲ್ಯಾಂಡ್ ಮತ್ತು ಡೆವಲಪ್ಮೆಂಟ್ ರಿಸರ್ಚ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ರಫ್ತು ಮಾಡಲು ಕುವೈತ್ನಿಂದ ಆದೇಶ ಪಡೆದುಕೊಂಡಿದೆ.

ಜೂನ್ 15ರಿಂದ ದೇಶೀಯ ಹಸುಗಳ ಸಗಣಿ ರಫ್ತು
ಮುಸ್ಲಿಂ ಬಾಹುಳ್ಯದ ಕುವೈತ್ ದೇಶಿ ಹಸುಗಳ ಸಗಣಿಯನ್ನು ಭಾರತದಿಂದ ಆಮದು ಮಾಡಿಕೊಳ್ಳುತ್ತಿರುವುದು ಬಹುಶಃ ಇದೇ ಮೊದಲು ಎಂದು ಸನ್ರೈಸ್ ಅಗ್ರಿಲ್ಯಾಂಡ್ ಮತ್ತು ಡೆವಲಪ್ಮೆಂಟ್ ರಿಸರ್ಚ್ ಪ್ರೈವೇಟ್ ಲಿಮಿಟೆಡ್ ಕಂಪನಿ ನಿರ್ದೇಶಕ ಪ್ರಶಾಂತ್ ಚತುರ್ವೇದಿ ಹೇಳಿದ್ದಾರೆ.
ಜೈಪುರದ ಟೋಂಕ್ ರಸ್ತೆಯ ಶ್ರೀಪಿಂಜ್ರಾಪೋಲ್ ಗೋಶಾಲೆಯಲ್ಲಿರುವ ಸನ್ರೈಸ್ ಆರ್ಗಾನಿಕ್ ಪಾರ್ಕ್ನಲ್ಲಿ ಕಸ್ಟಮ್ಸ್ ಇಲಾಖೆಯ ಮೇಲ್ವಿಚಾರಣೆಯಲ್ಲಿ ಕಂಟೈನರ್ಗಳಲ್ಲಿ ಹಸುವಿನ ಸಗಣಿ ಪ್ಯಾಕ್ ಮಾಡುವ ಕೆಲಸ ನಡೆಯುತ್ತಿದೆ. ಜೂನ್ 15 ರಂದು ಕನಕಪುರ ರೈಲು ನಿಲ್ದಾಣದಿಂದ ರವಾನೆಯಾಗಲಿದೆ ಎಂದು ಹೇಳಿದ್ದಾರೆ. ಮೊದಲ ರವಾನೆಯಲ್ಲಿ, 192 ಮೆಟ್ರಿಕ್ ಟನ್ ಹಸುವಿನ ಸಗಣಿ ಕುವೈತ್ಗೆ ರಫ್ತು ಮಾಡಲಾಗುವುದು. ಗುಜರಾತ್ನ ಮುಂದ್ರಾ ಬಂದರಿನಿಂದ ಕುವೈತ್ಗೆ ಸಾಗಿಸಲಾಗುವುದು.

ವಿದೇಶಗಳಿಂದ ಬೇಡಿಕೆ ಹೆಚ್ಚಾಗುತ್ತಿದೆ
2020-21ರಲ್ಲಿ ಭಾರತದಿಂದ ಪ್ರಾಣಿ ಉತ್ಪನ್ನಗಳ ರಫ್ತು 27,155.56 ಕೋಟಿ ರುಪಾಯಿಗಳಾಗಿದೆ ಎಂದು ಸಾವಯವ ರೈತ ಉತ್ಪಾದಕರ ಸಂಘದ ರಾಷ್ಟ್ರೀಯ ಅಧ್ಯಕ್ಷ ಅತುಲ್ ಗುಪ್ತಾ ಹೇಳಿದರು. ಇದಲ್ಲದೇ ಸಾವಯವ ಗೊಬ್ಬರದ ಬೇಡಿಕೆ ನಿರಂತರವಾಗಿ ಹೆಚ್ಚುತ್ತಿದೆ.
ದೇಶೀಯ ಹಸುವಿನ ಸಗಣಿ ಸಂಶೋಧನೆಯ ನಂತರ ಅದರ ಬಳಕೆಯ ಲಾಭಗಳನ್ನು ಅನೇಕ ದೇಶಗಳು ಕಂಡುಕೊಂಡಿವೆ, ಇದು ಬೆಳೆಗಳ ಉತ್ಪಾದನೆಯನ್ನು ಹೆಚ್ಚಿಸುವುದಲ್ಲದೆ, ಅದರಿಂದ ಉತ್ಪತ್ತಿಯಾಗುವ ಉತ್ಪನ್ನಗಳ ಬಳಕೆಯು ಗಂಭೀರ ಕಾಯಿಲೆಗಳಿಂದ ಮನುಷ್ಯರನ್ನು ರಕ್ಷಿಸುತ್ತದೆ. ಇದೇ ಕಾರಣಕ್ಕೆ ಹಲವು ದೇಶಗಳು ಭಾರತದಿಂದ ಸಾವಯವ ಗೊಬ್ಬರದ ಜೊತೆಗೆ ದೇಶಿ ಗೋಮಯವನ್ನು ಆಮದು ಮಾಡಿಕೊಳ್ಳಲು ಆರಂಭಿಸಿವೆ.

ಖರ್ಜೂರ ಬೆಳೆಗೆ ಸಾವಯವ ಗೊಬ್ಬರ ಬಳಕೆ
ಇಸ್ಲಾಮಿಕ್ ದೇಶ ಕುವೈತ್ನ ವೈಜ್ಞಾನಿಕ ಸಂಶೋಧನೆಯಲ್ಲಿ, ಹಸುವಿನ ಸಗಣಿ ಬೆಳೆಗಳಿಗೆ ತುಂಬಾ ಉಪಯುಕ್ತವಾಗಿದೆ ಎಂದು ಕಂಡುಬಂದಿದೆ.
ಖರ್ಜೂರದ ಬೆಳೆಗೆ ಪೌಡರ್ ರೂಪದಲ್ಲಿ ದೇಶಿ ಗೋಮಯವನ್ನು ಬಳಸುವುದರಿಂದ ಹಣ್ಣಿನ ಗಾತ್ರದಲ್ಲಿ ಹೆಚ್ಚಳ ಹಾಗೂ ಉತ್ಪಾದನೆಯಲ್ಲಿ ನಿರೀಕ್ಷಿತ ಹೆಚ್ಚಳ ಕಂಡುಬಂದಿದೆ. ಈ ಕಾರಣಕ್ಕಾಗಿಯೇ ಕುವೈತ್ ಮೂಲದ ಕಂಪನಿ ಲಾಮೋರ್, ಜೈಪುರ ಸಂಸ್ಥೆಯಿಂದ 192 ಮೆಟ್ರಿಕ್ ಟನ್ ದೇಶಿ ಹಸುವಿನ ಸಗಣಿ ಆಮದು ಮಾಡಿಕೊಳ್ಳಲು ಆರ್ಡರ್ ಮಾಡಿದೆ.

ಬೇಡಿಕೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ
ಕುವೈತ್ನಿಂದ ಭಾರತಕ್ಕೆ ಹಸುವಿನ ಸಗಣಿ ಆರ್ಡರ್ ಬಂದಿರುವುದು ಇದೇ ಮೊದಲು ಎಂದು ಹೇಳಲಾಗುತ್ತಿದೆ. ಹಿಂದೆ, ಭಾರತವು ಪ್ರಾಣಿ ಉತ್ಪನ್ನಗಳಲ್ಲಿ ಮಾಂಸ ಮತ್ತು ಪ್ರಾಣಿಗಳ ಚರ್ಮವನ್ನು ರಫ್ತು ಮಾಡುತ್ತಿದೆ ಮತ್ತು ಹಾಲು ಹಾಗೂ ಹಾಲಿನಿಂದ ತಯಾರಿಸಿದ ಇತರ ಉತ್ಪನ್ನಗಳನ್ನು ರಫ್ತು ಮಾಡುತ್ತಿದೆ.
ಈಗ ವಿದೇಶಿ ವೈಜ್ಞಾನಿಕ ಸಂಶೋಧನೆಯಲ್ಲಿ ಹಸುವಿನ ಸಗಣಿ ಗುಣಮಟ್ಟವನ್ನು ದೃಢೀಕರಿಸಿದ ನಂತರ, ಭಾರತವು ಹೆಚ್ಚಿನ ಆದೇಶಗಳನ್ನು ಪಡೆಯಬಹುದು. ಈ ರಫ್ತು ಸರ್ಕಾರದಿಂದ ಆಗುತ್ತಿಲ್ಲ ಬದಲಾಗಿ ಸಹಕಾರಿ ಮಟ್ಟದಲ್ಲಿ ಆಗುತ್ತಿರುವುದು ದೊಡ್ಡ ವಿಷಯ. ಭಾರತದ ಜಾನುವಾರುಗಳು ಪ್ರತಿದಿನ ಸುಮಾರು 3 ಮಿಲಿಯನ್ ಟನ್ ಹಸುವಿನ ಸಗಣಿ ನೀಡುತ್ತವೆ. ಚೀನಾ 15 ಮಿಲಿಯನ್ ಮನೆಗಳಿಗೆ ಬೆಳಕು ನೀಡಲು ಹಸುವಿನ ಸಗಣಿ ಬಳಸುತ್ತದೆ.
Recommended Video
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications