ಭಾರತದಲ್ಲಿ 2022-23ರಲ್ಲಿ 112ಲಕ್ಷ ಟನ್ಗಿಂತ ಹೆಚ್ಚು ಗೋಧಿ ಉತ್ಪಾದನೆ ನಿರೀಕ್ಷೆ
ನವದೆಹಲಿ, ಜನವರಿ 13: ಭಾರತದವು ಕಳೆದ ವರ್ಷಕ್ಕಿಂತ ಪ್ರಸ್ತಕ 2022-23 ರಲ್ಲಿ ಗೋಧಿ ಉತ್ಪಾದನೆಯಲ್ಲಿ ಮಹತ್ತರ ದಾಖಲೆ ಬರೆಯುವ ನಿರೀಕ್ಷೆ ಇದೆ ಎಂದು ಕೇಂದ್ರ ಕೃಷಿ ಸಚಿವಾಲಯ ತಿಳಿಸಿದೆ.
ಈ 2022-23 ವರ್ಷದ ಗೋಧಿ ಬೆಳೆ ಋತುವಿನಲ್ಲಿ (ಜುಲೈ-ಜೂನ್) 112 ಮಿಲಿಯನ್ ಟನ್ಗಳಿಗಿಂತ ಹೆಚ್ಚು ಗೋಧಿ ಉತ್ಪಾದನೆಯಾಗುವ ಸಾಧ್ಯತೆ ಇದೆ. ಕಳೆದ ವರ್ಷ 2021-22ರಲ್ಲಿ ಗೋಧಿ ಉತ್ಪಾದನೆ ಕಡಿಮೆ ಯಾಗಿತ್ತು. ಅದರಲ್ಲೂ ಗೋಧಿ ಬೆಳೆಯುವ ಉತ್ತರ ಭಾರತದ ಪ್ರಮುಖ ರಾಜ್ಯಗಳಾದ ಗುಜರಾತ್, ಉತ್ತರ ಪ್ರದೇಶ, ರಾಜಸ್ಥಾನ, ಬಿಹಾರ್ ಸೇರಿದಂತೆ ಇನ್ನಿತರ ರಾಜ್ಯಗಳಲ್ಲಿ ಹವಾಮಾನ ಬದಲಾವಣೆ, ಅಧಿಕ ಉಷ್ಣಾಂಶದ ಪ್ರಭಾವದಿಂದ ಗೋಧಿ ಉತ್ಪಾದನೆಯು 106.84 ಮಿಲಿಯನ್ ಟನ್ಗಳಿಗೆ ಕುಸಿದಿತ್ತು ಎಂದು ಕೇಂದ್ರ ಕೃಷಿ ಸಚಿವಾಲಯ ಮಾಹಿತಿ ನೀಡಿದೆ.
ಎರಡು ವರ್ಷಗಳ ಹಿಂದೆ ನೋಡುವುದಾದರೆ 2020-21ರಲ್ಲಿ ದೇಶವು 109.59 ಮಿಲಿಯನ್ ಟನ್ಗಳ ಗೋಧಿ ಉತ್ಪಾದಿಸಿ ಪ್ರಗತಿ ಸಾಧಿಸಿತ್ತು. ಅದಾದ ನಂತರ ಮರುವರ್ಷ ನಿರೀಕ್ಷಿತ ಮಟ್ಟದಲ್ಲಿ ಉತ್ಪಾದನೆ ಆಗಲಿಲ್ಲ. ಪ್ರಸ್ತುತ ವರ್ಷದಲ್ಲಿ ಹವಾಮಾನ ಪರಿಸ್ಥಿತಿಗಳು ಉತ್ತಮವಾಗಿದೆ. ಈಗಾಗಲೇ ರೈತರು ಹೆಚ್ಚಿನ ಗೋಧಿಯನ್ನು ಅತ್ಯಧಿಕ ಪ್ರದೇಶದಲ್ಲಿ ಬಿತ್ತನೆ ಮಾಡಿದ್ದಾರೆ.

ಈ ಕಾರಣದಿಂದಲೇ 2023ರ ಮಾರ್ಚ್ ವೇಳೆಗೆ ಕೊಯ್ಲಿಗೆ ಬರಲಿರುವ ಗೋಧಿ ಬೆಳೆಯಲ್ಲಿ ಹೆಚ್ಚು ಉತ್ಪಾದನೆ ಸಾಧ್ಯವಾಗಲಿದೆ. ಒಟ್ಟು ಉತ್ಪಾದನೆಯು 112 ಮಿಲಿಯನ್ ಟನ್ಗಳಿಗಿಂತ ಹೆಚ್ಚು ಎಂದು ವ್ಯಾಪಾರಿಗಳು ಹಾಗೂ ಆಹಾರ ತಜ್ಞರು ಅಂದಾಜಿಸಿದ್ದಾರೆ.
ಎಲ್ಲೆಲ್ಲಿ ಎಷ್ಟು ಬಿತ್ತನೆ ಆಗಿದೆ?
ಮುಖ್ಯ ರಾಬಿ (ಚಳಿಗಾಲ) ಬೆಳೆಯಾದ ಗೋಧಿಯ ಬಿತ್ತನೆಯು ಅಕ್ಟೋಬರ್ನಿಂದ ಪ್ರಾರಂಭವಾಯಿತು, ಆದರೆ ಕೊಯ್ಲು ಮಾರ್ಚ್ ಅಂತ್ಯ ಇಲ್ಲವೇ ಏಪ್ರಿಲ್ ಆರಂಭಕ್ಕೆ ಶುರುವಾಗಲಿದೆ. ಇನ್ನೂ ಇತ್ತೀಚಿನ ಅಂಕಿಅಂಶಗಳ ಪ್ರಕಾರ, 2022-23 ರ ಬೆಳೆ ವರ್ಷದ (ಜುಲೈ-ಜೂನ್) ಪ್ರಸಕ್ತ ರಾಬಿ ಹಂಗಾಮಿನ ಜನವರಿ 6 ರವರೆಗೆ ರೈತರು 332.16 ಲಕ್ಷ ಹೆಕ್ಟೇರ್ನಲ್ಲಿ ಗೋಧಿಯನ್ನು ಬಿತ್ತಿದ್ದಾರೆ. ಕಳೆದ ವರ್ಷ ಇದೇ ಅವಧಿಯಲ್ಲಿ 329.88 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಗೋಧಿ ಬಿತ್ತನೆ ಕಂಡಿತ್ತು.

ದೇಶದ ಗೋಧಿ ಬಿತ್ತನೆಯ ಪ್ರಮುಖ ರಾಜ್ಯಗಳಾದ ರಾಜಸ್ಥಾನನಲ್ಲಿ ಒಟ್ಟು 2.52 ಲಕ್ಷ ಹೆಕ್ಟೇರ್ ನಲ್ಲಿ ಬಿತ್ತನೆ ಆಗಿದೆ. ಅದೇ ರೀತಿ ಉತ್ತರ ಪ್ರದೇಶದಲ್ಲಿ 1.69 ಲಕ್ಷ ಹೆಕ್ಟೇರ್, ಮಹಾರಾಷ್ಟ್ರ 1.20 ಲಕ್ಷ ಹೆಕ್ಟೇರ್, ಗುಜರಾತ್ 0.70 ಲಕ್ಷ ಹೆಕ್ಟೇರ್, ಛತ್ತೀಸ್ಗಢ 0.63 ಲಕ್ಷ ಹೆಕ್ಟೇರ್, ಬಿಹಾರ 0.44 ಲಕ್ಷ ಹೆಕ್ಟೇರ್, ಪಶ್ಚಿಮ ಬಂಗಾಳದಲ್ಲಿ 0.10 ಲಕ್ಷ ಹೆಕ್ಟೇರ್, ಜಮ್ಮು ಮತ್ತು ಕಾಶ್ಮೀರ 0.06 ಲಕ್ಷ ಹೆಕ್ಟೇರ್ ಹಾಗೂ ಅಸ್ಸಾಂನಲ್ಲಿ 0.03 ಲಕ್ಷ ಹೆಕ್ಟೇರ್ನಲ್ಲಿ ಗೋಧಿ ಬಿತ್ತಲಾಗಿದೆ ಅಧಿಕೃತ ಮೂಲಗಳು ತಿಳಿಸಿವೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications