ಮರುಭೂಮಿ ಮಿಡತೆ ಅಪಾಯ: ಪಾಕಿಸ್ತಾನ,ಇರಾನ್ ಸಹಕಾರ ಕೇಳಿದ ಭಾರತ

ನವದೆಹಲಿ, ಮೇ 22: ಕೊರೊನಾದ ಜೊತೆ ಜೊತೆಗೆ ಮರುಭೂಮಿ ಮಿಡತೆ ಭಯ ಹೆಚ್ಚಾಗಿದೆ. ಈ ಮಿಡತೆಗಳು ವೇಗವಾಗಿ ವೃದ್ಧಿಯಾಗುತ್ತಿದ್ದು ಇದು ಗಂಭೀರ ಅಪಾಯವನ್ನುಂಟುಮಾಡಲಿದೆ ಎಂದು ಇದರ ತಡೆಗೆ ಸಂಘಟಿತ ಸಹಕಾರ ನೀಡುವಂತೆ ಭಾರತ ಪಾಕಿಸ್ತಾನ ಮತ್ತು ಇರಾನ್ ಗೆ ಪ್ರಸ್ತಾವನೆ ಸಲ್ಲಿಸಿದೆ.

Recommended Video

      ನಾವೇನ್ ಪಾಕಿಸ್ಥಾನದವ್ರಾ? ವಿದೇಶದಲ್ಲಿರೋರು ಬರಬಹುದು ನಾವು ಬರೋ ಹಾಗಿಲ್ವಾ? | Mumbai | Karnataka

      ಬಲೂಚಿಸ್ತಾನದ ಸಂತಾನೋತ್ಪತ್ತಿ ಪ್ರದೇಶಗಳಿಂದ ಮತ್ತು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಿಂದ ಮರುಭೂಮಿ ಮಿಡತೆಗಳ ಗುಂಪುಗಳು ಭಾರತಕ್ಕೆ ವಲಸೆ ಹೋಗುತ್ತಿವೆ.

      ಭಾರತದಲ್ಲಿ, ಕಳೆದ ವಾರಗಳಲ್ಲಿ ಹೆಚ್ಚು ಮಿಡತೆಯ ಗುಂಪುಗಳು ಮತ್ತು ಸಣ್ಣ ಹಿಂಡುಗಳು ಪಾಕಿಸ್ತಾನದಿಂದ ರಾಜಸ್ಥಾನದ ಜೋಧಪುರವನ್ನು ತಲುಪಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

      India Proposes To Iran, Pakistan For Coordinated Response Tto Contain Desert Locusts

      ವಿನಾಶಕಾರಿ ವಲಸೆ ಕೀಟಗಳು ಆಫ್ರಿಕಾ ಸೇರಿದಂತೆ ಜಗತ್ತಿನ ಹಲವಾರು ಭಾಗಗಳಲ್ಲಿ ಆಹಾರ ಭದ್ರತೆಗೆ ಗಂಭೀರ ಅಪಾಯವನ್ನುಂಟುಮಾಡಿದೆ. ಇದರ ತಡೆಗಟ್ಟುವಿಕೆಗೆ ಸಮನ್ವಯದ ಸಹಕಾರ, ಪ್ರತಿಕ್ರಿಯೆ ನೀಡುವಂತೆ ಭಾರತ ಪಾಕಿಸ್ತಾನ ಮತ್ತು ಇರಾನ್ ನ್ನು ಕೇಳಿಕೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

      ಭಾರತದ ಪ್ರಸ್ತಾವನೆಗೆ ಇರಾನ್ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಪಾಕಿಸ್ತಾನ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಇದುವರೆಗೆ ಬಂದಿಲ್ಲ. ಭಾರತ ತನ್ನ ಸಿಸ್ತಾನ್-ಬಲೂಚಿಸ್ತಾನ್ ಮತ್ತು ದಕ್ಷಿಣ ಖೋರಾಸಾನ್ ಪ್ರಾಂತ್ಯಗಳಲ್ಲಿ ಮರುಭೂಮಿ ಮಿಡತೆಗಳ ಹರಡುವಿಕೆಯನ್ನು ತಡೆಗಟ್ಟಲು ಇರಾನ್‌ಗೆ ಕೀಟನಾಶಕವನ್ನು ಪೂರೈಸಲು ಮುಂದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

      ಜಗತ್ತಿನ ಅರ್ಧ ಭಾಗವೀಗ ಮಿಡತೆಗಳ ದಾಳಿಗೆ ಬೆಚ್ಚಿಬಿದ್ದಿದೆ. ಬೆಳೆಗಳಿಗೆ ಮಿಡತೆಗಳ ಕಾಟವೇನೂ ಹೊಸತಲ್ಲವಾದರೂ, ಕೆಲವು ತಿಂಗಳಿಂದ ಪ್ರಪಂಚದ ಹಲವು ಭಾಗಗಳಲ್ಲಿ ಸಾಗರೋಪಾದಿಯಲ್ಲಿ ದಾಂಗುಡಿಯಿಡುತ್ತಿರುವ ಮರುಭೂಮಿಯ ಮಿಡತೆಗಳು ಸಾಕಷ್ಟು ಅನಾಹುತವನ್ನು ಸೃಷ್ಟಿಸಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+