ಬೀಸುವ ದೊಣ್ಣೆ ಯಿಂದ ತಪ್ಪಿಸಿಕೊಂಡ ಬಿಟಿ ಬದನೆ

ಕುಲಾಂತರಿ ಬದನೆಕಾಯಿಗೆ ಭಾರತದಲ್ಲಿ ಅವಕಾಶ ಕೊಟ್ಟರೆ ದೇಶದ ಆಹಾರ ಭದ್ರತೆ ನಾಶವಾಗುತ್ತದೆ. ಅಷ್ಟೇ ಅಲ್ಲದೆ ಇಡೀ ಆಹಾರ ವ್ಯವಸ್ಥೆಯನ್ನು ಬೆರಳೆಣಿಕೆಯ ಕಂಪನಿಯ ಕೈಯಲ್ಲಿಟ್ಟಂತೆ ಆಗುತ್ತದೆ ಎಂದು ರೈತ ಸಂಘಟನೆಗಳು, ನಾಗರಿಕ ಸಂಸ್ಥೆಗಳು, ಜನಸಾಮಾನ್ಯರಿಂದ ದೇಶದ್ಯಾಂತ ಭಾರಿ ವಿರೋಧ ವ್ಯಕ್ತವಾಗಿತ್ತು. ಅಲ್ಲದೇ ಬಿಟಿ ಬದನೆಗೆ ದೇಶದಲ್ಲಿ ಅವಕಾಶ ನೀಡಬೇಕೆ, ಬೇಡವೇ ಎಂಬ ಜಿಜ್ಞಾಸೆಗೆ ಕೇಂದ್ರ ಸರಕಾರ ಸಾರ್ವಜನಿಕ ಚರ್ಚೆಗೆ ಮುಂದಾಗಿತ್ತು.
ದೇಶದ ಪ್ರಮುಖ ನಗರಗಳಲ್ಲಿ ಬಿಟಿ ಬದನೆಗೆ ಚರ್ಚೆಯನ್ನೂ ಸಹ ನಡೆಸಿತ್ತು. ಆದರೆ, ಚರ್ಚೆಯಲ್ಲಿ ಕುಲಾಂತರಿ ಬದನೆಗೆ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕೊನೆಯದಾಗಿ ಭಾರತದಲ್ಲಿ ಬಿಟಿ ಬದನೆಗೆ ಅವಕಾಶ ನೀಡುವ ಕುರಿತು ಫೆ.10ರಂದು ಅಧಿಕೃತವಾಗಿ ಘೋಷಿಸಲಾಗುವುದಾಗಿ ಕೇಂದ್ರ ತಿಳಿಸಿತ್ತು. ಇಂದು ಮಾಧ್ಯಮಗೋಷ್ಠಿ ನಡೆಸಿದ ಕೇಂದ್ರ ಪರಿಸರ ಖಾತೆ ಸಚಿವ ಜೈರಾಮ್ ರಮೇಶ್ ಭಾರತದಲ್ಲಿ ಸದ್ಯಕ್ಕೆ ಬಿಟಿ ಬದನೆಗೆ ಅನುಮತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ವಿಡಿಯೋ: ಬಿಟಿ ಬದನೆ ನೋ ಎಂದ ಕೇಂದ್ರ ಸರ್ಕಾರ
ಕಳೆದ ವಾರ ನಗರದ ಸೆಂಟ್ರೆಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಬಿಟಿ ಬದನೆ ಕುರಿತ ಸಂವಾದದಲ್ಲಿ ಪಾಲ್ಗೊಂಡಿದ್ದ ಸಚಿವ ಜೈರಾಮ್ ರಮೇಶ್ ಅವರು, ಬಿಟಿ ಬದನೆ ಕುರಿತ ಸಾರ್ವಜನಿಕರ ಪರ ವಿರೋಧ ಅಭಿಪ್ರಾಯ ಸಂಗ್ರಹ ಮಾಡಿದ್ದರು. ಉತ್ಪಾದಕರು ಹಾಗೂ ಗ್ರಾಹಕರ ದೃಷ್ಟಿಯಿಂದ ನೋಡಿ ನಾನು ನಿರ್ಣಯ ಕೈಗೊಳ್ಳುತ್ತೇನೆ. ಯಾವುದೇ ವಿಜ್ಞಾನಿಗಳ ಗುಂಪು, ಸರ್ಕಾರೇತರ ಸಂಸ್ಥೆ ಅಥವಾ ರಾಜಕೀಯ ಪ್ರೇರಿತವಾಗಿ ನಿರ್ಧಾರ ಕೈಗೊಳುವುದಿಲ್ಲ ಎಂದಿದ್ದರು. ಆದರೆ, ಭಾಗವಹಿಸಿದ್ದವರಲ್ಲಿ ಶೇ.90ರಷ್ಟು ಜನರ ಅಭಿಪ್ರಾಯ ಬಿಟಿ ಬದನೆ ವಿರುದ್ಧವಾಗಿತ್ತು
ಕಳೆದ ಅಕ್ಟೋಬರ್ ನಲ್ಲಿ ಕುಲಾಂತರಿ ಬದನೆಯನ್ನು ವಾಣಿಜ್ಯ ಬೆಳೆಯಾಗಿ ಬೆಳಸಲು ಯಾವುದೇ ಅಡ್ಡಿಯಿಲ್ಲ ಎಂದು ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿತ್ತು. genetically modified (GM) ಬದನೆಗೆ Genetic Engineering Approval Committee ಕೂಡ ಒಪ್ಪಿಗೆ ನೀಡಿತ್ತು. ಆದರೆ, ಸಣ್ಣ ಇಳುವರಿ ರೈತರಿಗೆ ಮಾರಕ, ಅಲ್ಲದೆ ಬಿಟಿ ಬದನೆ ಸೇವನೆ ಇಂದ ಆರೋಗ್ಯಕ್ಕೆ ಹಾನಿಕರ ಎಂದು ರೈತ ಸಂಘಟನೆಗಳು ವಾದಿಸುತ್ತಾ ಬಂದಿದ್ದವು. ಇದಕ್ಕೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ಜೈರಾಮ್ ರಮೇಶ್ ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ಮಾಹಿತಿ, ಸಾರ್ವಜನಿಕ ಅಭಿಪ್ರಾಯ ಸಂಗ್ರಹ ಕಾರ್ಯಕ್ಕೆ ಮುಂದಾಗಿದ್ದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications