ಬೀಸುವ ದೊಣ್ಣೆ ಯಿಂದ ತಪ್ಪಿಸಿಕೊಂಡ ಬಿಟಿ ಬದನೆ

ಕುಲಾಂತರಿ ಬದನೆಕಾಯಿಗೆ ಭಾರತದಲ್ಲಿ ಅವಕಾಶ ಕೊಟ್ಟರೆ ದೇಶದ ಆಹಾರ ಭದ್ರತೆ ನಾಶವಾಗುತ್ತದೆ. ಅಷ್ಟೇ ಅಲ್ಲದೆ ಇಡೀ ಆಹಾರ ವ್ಯವಸ್ಥೆಯನ್ನು ಬೆರಳೆಣಿಕೆಯ ಕಂಪನಿಯ ಕೈಯಲ್ಲಿಟ್ಟಂತೆ ಆಗುತ್ತದೆ ಎಂದು ರೈತ ಸಂಘಟನೆಗಳು, ನಾಗರಿಕ ಸಂಸ್ಥೆಗಳು, ಜನಸಾಮಾನ್ಯರಿಂದ ದೇಶದ್ಯಾಂತ ಭಾರಿ ವಿರೋಧ ವ್ಯಕ್ತವಾಗಿತ್ತು. ಅಲ್ಲದೇ ಬಿಟಿ ಬದನೆಗೆ ದೇಶದಲ್ಲಿ ಅವಕಾಶ ನೀಡಬೇಕೆ, ಬೇಡವೇ ಎಂಬ ಜಿಜ್ಞಾಸೆಗೆ ಕೇಂದ್ರ ಸರಕಾರ ಸಾರ್ವಜನಿಕ ಚರ್ಚೆಗೆ ಮುಂದಾಗಿತ್ತು.
ದೇಶದ ಪ್ರಮುಖ ನಗರಗಳಲ್ಲಿ ಬಿಟಿ ಬದನೆಗೆ ಚರ್ಚೆಯನ್ನೂ ಸಹ ನಡೆಸಿತ್ತು. ಆದರೆ, ಚರ್ಚೆಯಲ್ಲಿ ಕುಲಾಂತರಿ ಬದನೆಗೆ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕೊನೆಯದಾಗಿ ಭಾರತದಲ್ಲಿ ಬಿಟಿ ಬದನೆಗೆ ಅವಕಾಶ ನೀಡುವ ಕುರಿತು ಫೆ.10ರಂದು ಅಧಿಕೃತವಾಗಿ ಘೋಷಿಸಲಾಗುವುದಾಗಿ ಕೇಂದ್ರ ತಿಳಿಸಿತ್ತು. ಇಂದು ಮಾಧ್ಯಮಗೋಷ್ಠಿ ನಡೆಸಿದ ಕೇಂದ್ರ ಪರಿಸರ ಖಾತೆ ಸಚಿವ ಜೈರಾಮ್ ರಮೇಶ್ ಭಾರತದಲ್ಲಿ ಸದ್ಯಕ್ಕೆ ಬಿಟಿ ಬದನೆಗೆ ಅನುಮತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ವಿಡಿಯೋ: ಬಿಟಿ ಬದನೆ ನೋ ಎಂದ ಕೇಂದ್ರ ಸರ್ಕಾರ
ಕಳೆದ ವಾರ ನಗರದ ಸೆಂಟ್ರೆಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಬಿಟಿ ಬದನೆ ಕುರಿತ ಸಂವಾದದಲ್ಲಿ ಪಾಲ್ಗೊಂಡಿದ್ದ ಸಚಿವ ಜೈರಾಮ್ ರಮೇಶ್ ಅವರು, ಬಿಟಿ ಬದನೆ ಕುರಿತ ಸಾರ್ವಜನಿಕರ ಪರ ವಿರೋಧ ಅಭಿಪ್ರಾಯ ಸಂಗ್ರಹ ಮಾಡಿದ್ದರು. ಉತ್ಪಾದಕರು ಹಾಗೂ ಗ್ರಾಹಕರ ದೃಷ್ಟಿಯಿಂದ ನೋಡಿ ನಾನು ನಿರ್ಣಯ ಕೈಗೊಳ್ಳುತ್ತೇನೆ. ಯಾವುದೇ ವಿಜ್ಞಾನಿಗಳ ಗುಂಪು, ಸರ್ಕಾರೇತರ ಸಂಸ್ಥೆ ಅಥವಾ ರಾಜಕೀಯ ಪ್ರೇರಿತವಾಗಿ ನಿರ್ಧಾರ ಕೈಗೊಳುವುದಿಲ್ಲ ಎಂದಿದ್ದರು. ಆದರೆ, ಭಾಗವಹಿಸಿದ್ದವರಲ್ಲಿ ಶೇ.90ರಷ್ಟು ಜನರ ಅಭಿಪ್ರಾಯ ಬಿಟಿ ಬದನೆ ವಿರುದ್ಧವಾಗಿತ್ತು
ಕಳೆದ ಅಕ್ಟೋಬರ್ ನಲ್ಲಿ ಕುಲಾಂತರಿ ಬದನೆಯನ್ನು ವಾಣಿಜ್ಯ ಬೆಳೆಯಾಗಿ ಬೆಳಸಲು ಯಾವುದೇ ಅಡ್ಡಿಯಿಲ್ಲ ಎಂದು ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿತ್ತು. genetically modified (GM) ಬದನೆಗೆ Genetic Engineering Approval Committee ಕೂಡ ಒಪ್ಪಿಗೆ ನೀಡಿತ್ತು. ಆದರೆ, ಸಣ್ಣ ಇಳುವರಿ ರೈತರಿಗೆ ಮಾರಕ, ಅಲ್ಲದೆ ಬಿಟಿ ಬದನೆ ಸೇವನೆ ಇಂದ ಆರೋಗ್ಯಕ್ಕೆ ಹಾನಿಕರ ಎಂದು ರೈತ ಸಂಘಟನೆಗಳು ವಾದಿಸುತ್ತಾ ಬಂದಿದ್ದವು. ಇದಕ್ಕೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ಜೈರಾಮ್ ರಮೇಶ್ ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ಮಾಹಿತಿ, ಸಾರ್ವಜನಿಕ ಅಭಿಪ್ರಾಯ ಸಂಗ್ರಹ ಕಾರ್ಯಕ್ಕೆ ಮುಂದಾಗಿದ್ದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications