ಕೋಲಾರದ ಪ್ರಖ್ಯಾತ ಹಲಸಿನ ತೋಟದಲ್ಲೀಗ ಹಲಸಿನ ಖಾದ್ಯಗಳೂ ರೆಡಿ...
ಕೋಲಾರ, ಜೂನ್ 12: ಇದು ಏಷ್ಯಾದಲ್ಲೇ ಪ್ರಖ್ಯಾತಿ ಪಡೆದಿರುವ ಹಲಸಿನ ತೋಟ. ಈ ಪ್ರಖ್ಯಾತಿಗೂ ಒಂದು ಕಾರಣವಿದೆ. ಆಧುನಿಕ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಬೇಡಿಕೆ ಪಡೆದಿರುವ ಈ ತೋಟದ ಹಣ್ಣುಗಳು ತನ್ನ ವಿಶಿಷ್ಟ ಸ್ವಾದದಿಂದಲೇ ಬೇಡಿಕೆ ಕುದುರಿಸಿಕೊಂಡಿರುವಂಥವು. ಈ ಹಲಸಿನ ಹಣ್ಣಿನ ರುಚಿಗೆ ಫಿದಾ ಆಗದವರೇ ಇಲ್ಲ.
Recommended Video
40 ಎಕರೆ ಬೃಹತ್ ಪ್ರದೇಶದಲ್ಲಿ ಬೆಳೆಯಲಾಗಿರುವ ಈ ಹಲಸಿನ ಮರಗಳು ಇರುವುದು ಕೋಲಾರ ತೋಟಗಾರಿಕಾ ಮಹಾ ವಿಶ್ವವಿದ್ಯಾಲಯದ ಆವರಣದಲ್ಲಿ. ಕೋಲಾರ ನಗರಕ್ಕೆ ಹೊಂದಿಕೊಂಡಂತೆ ಇರುವ ಈ ತೋಟಗಾರಿಕಾ ಮಹಾವಿದ್ಯಾಲಯದಲ್ಲಿ ಬೆಳೆಯುತ್ತಿರುವ ಈ ಹಲಸಿನ ಹಣ್ಣಿಗೆ ಭಾರೀ ಬೇಡಿಕೆ ಇದೆ. ಈ ತೋಟದ ಹೆಗ್ಗಳಿಕೆ ಹಿಂದೆ ಒಂದು ವಿಶೇಷ ಸಂಗತಿಯೂ ಇದೆ. ಹಲಸಿನ ಹಣ್ಣು ಮಾತ್ರವಲ್ಲ, ಹಲಸಿನ ಸಂಸ್ಕರಣಾ ಘಟಕವೂ ಇಲ್ಲಿದ್ದು, ಹಲಸಿನ ವಿವಿಧ ಖಾದ್ಯಗಳ ತಯಾರಿಯೂ ಇಲ್ಲಿ ನಡೆಯುತ್ತಿದೆ...

ಏಷ್ಯಾದಲ್ಲಿಯೇ ಅತಿ ದೊಡ್ಡ ಹಲಸಿನ ತೋಟ
ಏಷ್ಯಾದಲ್ಲಿಯೇ ಅತಿ ದೊಡ್ಡ ಹಲಸಿನ ತೋಟ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಹಲಸಿನ ತೋಟದಲ್ಲಿ 1800ಕ್ಕೂ ಹೆಚ್ಚು ಹಲಸಿನ ಮರಗಳಿವೆ. ಏಷ್ಯಾದಲ್ಲಿ, ಒಂದೇ ಸ್ಥಳದಲ್ಲಿ ಅತಿಹೆಚ್ಚು ಹಲಸಿನ ಮರಗಳನ್ನು ಹೊಂದಿರುವ ತೋಟ ಎಂಬ ಹೆಗ್ಗಳಿಕೆಯೂ ಈ ತೋಟಕ್ಕಿದೆ.

39 ವಿವಿಧ ಜಾತಿಯ ಹಲಸಿನ ಮರ
ಈ ನಲವತ್ತು ಎಕರೆ ಪ್ರದೇಶದಲ್ಲಿ ಸುಮಾರು 39 ವಿವಿಧ ಜಾತಿಯ ಹಲಸಿನ ಮರಗಳನ್ನು ಬೆಳೆಸಲಾಗಿದೆ. ಜಾಣಗೆರೆ, ತೂಗುಗೆರೆ, ಸಿಂಗಾಪುರ ಹಸಲು, ಚಂದ್ರಹಲಸು, ಅಂಟಿಲ್ಲದ ಹಲಸು ಹೀಗೆ ವಿವಿಧ ತಳಿಗಳನ್ನು ಇಲ್ಲಿ ಬೆಳೆಯಲಾಗುತ್ತದೆ. ಅದೇ ಈ ತೋಟದ ವೈಶಿಷ್ಯವೂ ಆಗಿದೆ.

ಹಲಸು ಸಂಸ್ಕರಣಾ ಘಟಕ ಸ್ಥಾಪನೆ
ಇಷ್ಟು ವರ್ಷಗಳಲ್ಲಿ ಇಲ್ಲಿ ಬೆಳೆಯಲಾಗುತ್ತಿದ್ದ ಹಲಸನ್ನು ಮಾರಾಟ ಮಾಡಲಾಗುತ್ತಿತ್ತು. ಇದೀಗ ವಿಶೇಷವಾಗಿ ಹಲಸು ಸಂಸ್ಕರಣಾ ಘಟಕ ಸ್ಥಾಪನೆ ಮಾಡಿ, ಹಲಸಿನ ವಿವಿಧ ಖಾದ್ಯಗಳನ್ನು, ವಿವಿಧ ಉತ್ಪನ್ನಗಳನ್ನು ಇಲ್ಲೇ ತಯಾರು ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಹಲಸಿನ ಹಣ್ಣಿನ ಐಸ್ ಕ್ರೀಂ, ಬರ್ಫಿ, ಚಿಪ್ಸ್, ಜಾಮ್, ಪಲ್ಪಿ ಜ್ಯೂಸ್ ಸೇರಿದಂತೆ ಹಲವು ಖಾದ್ಯಗಳನ್ನು ತಯಾರಿಸುವ ಮೂಲಕ ಹಲಸಿನ ಮಹತ್ವವನ್ನು ಪ್ರಚುರಪಡಿಸಲು ಕ್ರಮ ಕೈಗೊಳ್ಳಲಾಗಿದೆ.

ಪ್ರವಾಸಿ ಕೇಂದ್ರ ಮಾಡುವ ಚಿಂತನೆ
ಅಲ್ಲದೆ ಈ ಹಲಸಿನ ತೋಟವನ್ನು ಒಳ್ಳೆಯ ಪ್ರವಾಸಿ ಕೇಂದ್ರವನ್ನಾಗಿ ಮಾಡುವ ಕುರಿತು ಚಿಂತನೆ ಮಾಡಲಾಗಿದೆ. ಇಷ್ಟು ದಿನ ಕೇವಲ ಹಳ್ಳಿಯ ಹಣ್ಣಾಗಿದ್ದ ಹಲಸಿನ ಹಣ್ಣಿಗೆ ದೊಡ್ಡ ಮಟ್ಟದಲ್ಲಿ ಬೇಡಿಕೆ ಕುದುರಿಸುವ ಹಲವು ಪ್ರಯತ್ನಗಳನ್ನೂ ನಡೆಸಲಾಗುತ್ತಿದೆ. ಆ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದೇ ಆದಲ್ಲಿ ಕರ್ನಾಟಕದ ಈ ಹಲಸಿನ ತೋಟ ಇನ್ನಷ್ಟು ಮನೆ ಮಾತಾಗುವುದರಲ್ಲಿ ಯಾವುದೇ ಸಂದೇಹವಿಲ್ಲ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications