ಮಹಾದಾಯಿಗಾಗಿ ಬಂದ ರೈತರ ಬೆಂಬಲಕ್ಕೆ ನಿಂತ ಜನಸಾಮಾನ್ಯರ ವೇದಿಕೆ
ಬೆಂಗಳೂರು, ಡಿಸೆಂಬರ್ 24 : ಕಳಸಾ ಬಂಡೂರಿ ಹಾಗೂ ಮಹದಾಯಿ ವಿಷಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪನವರು ಸ್ಪಷ್ಟ ಹೇಳಿಕೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಕಚೇರಿ ಮುಂದೆ ಕಳಸಾ ಬಂಡೂರಿ ಹೋರಾಟಗಾರರು ನಡೆಸುತ್ತಿರುವ ಧರಣಿಗೆ ಜನಸಾಮಾನ್ಯರ ವೇದಿಕೆ ಬೆಂಬಲ ಸೂಚಿಸಿದೆ.
ಶನಿವಾರದಂದು ನಡೆಯುತ್ತಿರುವ ಹೋರಾಟದ ಸ್ಥಳಕ್ಕೆ ಭೇಟಿ ನೀಡಿದ ಜನ ಸಾಮಾನ್ಯರ ವೇದಿಕೆ ಅಧ್ಯಕ್ಷ ಡಾ. ಅಯ್ಯಪ್ಪ ಹೋರಾಟದ ಖರ್ಚು ವೆಚ್ಚ ಭರಿಸುವುದಾಗಿ ಭರವಸೆ ನೀಡಿದರು. ಕಳಸಾ ಬಂಡೂರಿ ಹಾಗೂ ಮಹದಾಯಿ ವಿವಾದ ಬಗೆಹರಿಸುವಂತೆ ಇತ್ತೀಚೆಗೆ ದೆಹಲಿಗೆ ರೈತರನ್ನು ಕರೆದುಕೊಂಡು ಹೋಗಿ ಬೃಹತ್ ಪ್ರತಿಭಟನೆಯನ್ನು ಡಾ ಅಯ್ಯಪ್ಪ ನೇತೃತ್ವದಲ್ಲಿ ನಡೆಸಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.

ನಂತರ ಮಾತನಾಡಿದ ಅವರು ಕಳಸಾ ಬಂಡೂರಿ ಹೋರಾಟಗಾರರು ನಮ್ಮ ಮನೆಯ ಸದಸ್ಯರಿದ್ದಂತೆ. ಅವರು ತಮ್ಮ ಅತ್ಯವಶ್ಯಕ ಬೇಡಿಕೆಯಾದ ಕುಡಿಯುವ ನೀರಿಗೋಸ್ಕರ ನಡೆಸುತ್ತಿರುವ ಹೋರಾಟವನ್ನು ರಾಜಕೀಯ ಪಕ್ಷಗಳು ರಾಜಕೀಯ ವಿಷಯವಾಗಿ ಪರಿಗಣಿಸಿರುವುದು ವಿಷಾದನೀಯ.
ಇಂಥ ಸಂಧರ್ಭದಲ್ಲಿ ಬೆಂಗಳೂರಿಗೆ ಆಗಮಿಸಿ ಹೋರಾಟ ನಡೆಸುತ್ತಿರುವ ಮಹದಾಯಿ ಹೋರಾಟಗಾರರು ರಸ್ತೆ ಬದಿಯಲ್ಲಿ ಕುಳಿತು ಹೋರಾಟ ಮುಂದುವರೆಸಿದ್ದಾರೆ. ಅವರಿಗೆ ಬೇಕಾದ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಲು ಅಗತ್ಯವಿರುವ ಸಹಾಯವನ್ನು ಮಾಡಲು ಜನ ಸಾಮಾನ್ಯರಾದ ನಾವು ಮುಂದಾಗಿದ್ದೇವೆ. ಜನ ಸಾಮಾನ್ಯರ ಹೋರಾಟಕ್ಕೆ ಯಾವುದೇ ರೀತಿಯಲ್ಲಾದರೂ ಕೈ ಜೊಡಿಸಬೇಕು ಎನ್ನುವುದು ಜನ ಸಾಮಾನ್ಯರ ಉದ್ದೇಶವಾಗಿದೆ ಎಂದರು.
ರಾಜಕಾರಣಿಗಳೂ ಸಮಸ್ಯೆಗಳನ್ನು ಜೀವಂತವಿಡುವಲ್ಲಿ ನಿಸ್ಸೀಮರು. ಹಲವಾರು ದಶಕಗಳಿಂದ ರಾಜಕಾರಣಿಗಳಿಗೆ ನೀಡಿರುವ ಮನವಿಗಳು ಘೋರ್ಕಲ್ಲ ಮೇಲೆ ನೀರು ಸುರಿದಂತಾಗಿವೆ. ಈ ಭ್ರಷ್ಟ ರಾಜಕಾರಣಿಗಳ ನಿಜವಾದ ಮುಖವಾಡವನ್ನು ಬಯಲು ಮಾಡುವುದು ಹಾಗೂ ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮ ಉದ್ದೇಶವಾಗಿದೆ ಎಂದರು. ಈ ಹಿನ್ನಲೆಯಲ್ಲಿ ಜನ ಸಾಮಾನ್ಯರ ಕೈಗೆ ಆಡಳಿತ ನೀಡುವ ಉದ್ದೇಶದಿಂದ ನಾವು ಈ ಪಕ್ಷವನ್ನು ಪ್ರಾರಂಭಿಸಿದ್ದೇವೆ ಎಂದರು.
ಈ ಧರಣಿ ಎಷ್ಟು ದಿನ ಮುಂದುವರೆದರೂ ಅಷ್ಟೂ ದಿನವೂ ಅವರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲು ಜನ ಸಾಮಾನ್ಯ ವೇದಿಕೆ ಸಿದ್ದವಾಗಿದೆ ಎಂದು ಡಾ ಅಯ್ಯಪ್ಪ ಹೇಳಿದರು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications