BTS2020: ರೈತರು ಡ್ರೋನ್ ಮೂಲಕ ಪಡೆಯಬಹುದು ಬೆಳೆ ಭವಿಷ್ಯ!
ಬೆಂಗಳೂರು, ನ. 22: ಯಾವ ಬೀಜವನ್ನು ತಮ್ಮ ಹೊಲದಲ್ಲಿ ಬಿತ್ತನೆ ಮಾಡಿದರೆ ಉತ್ತಮ ಬೆಳೆ ಬರಬಹುದು ಎಂಬುದು ಪ್ರತಿಯೊಬ್ಬ ರೈತರ ತಲೆಯಲ್ಲಿ ಕೊರೆಯುವ ಪ್ರಶ್ನೆ. ಇದೀಗ ಡ್ರೋನ್ ಹಾಗೂ ಕೃತಕ ಬುದ್ಧಿಮತ್ತೆ (ಎಐ) ಮೂಲಕ ಬೆಳೆ ಭವಿಷ್ಯ ಹೇಳಲು ಬಂದಿದ್ದಾರೆ ಜಪಾನ್ ವಿಜ್ಞಾನಿಗಳು.
ಬೆಂಗಳೂರು ತಂತ್ರಜ್ಞಾನ ಮೇಳ 2020ದಲ್ಲಿ ಟೋಕಿಯೋ ವಿಶ್ವವಿದ್ಯಾಲಯದ ಪ್ರೊ. ಸೆಶಿ ನಿನೊಮಿಯಾ ಅವರು 'ಜಪಾನ್-ಭಾರತ: ಭವಿಷ್ಯದ ಸಮಾಜಕ್ಕಾಗಿ ಹೈಟೆಕ್ ಪರಿಹಾರಗಳ ಸಹ-ಅಭಿವೃದ್ಧಿ' ಸಂವಾದ ಕಾರ್ಯಕ್ರಮದಲ್ಲಿ ಸಮ್ಮೇಳನದ ಕೊನೆಯ ದಿನ ಶನಿವಾರ ಈ ಕುರಿತು ವಿವರಿಸಿದರು.
ಭೂಮಿಯಲ್ಲಿ ಬೆಳೆ ಬೆಳೆಯುವ ಮುನ್ನವೇ ಬೀಜವೊಂದು ತಮ್ಮ ಹೊಲದಲ್ಲಿ ಹೇಗೆ ಫಲಿತಾಂಶ ನೀಡಬಹುದು ಎಂಬುದನ್ನು ಹೇಳಲು ಡ್ರೋನ್, ಐಒಟಿ ಸೆನ್ಸರ್ ಹಾಗೂ ಎಐ ತಂತ್ರಜ್ಞಾನ ಬಳಸಿಕೊಂಡು ಯಶಸ್ವಿಯಾಗಿ ಕಂಡುಕೊಳ್ಳಲಾಗಿದೆ.

ಜಪಾನ್ನ ಟೋಕಿಯೋ ಯುನಿವರ್ಸಿಟಿ ಹಾಗೂ ಭಾರತದ ಐಐಟಿ ಹೈದರಾಬಾದ್, ಐಐಟಿ ಬಾಂಬೆ, ತೆಲಂಗಾಣದ ಕೃಷಿ ವಿವಿ ಹಾಗೂ ಹೈದರಾಬಾದ್ನ ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಜಂಟಿಯಾಗಿ ಈ ಪ್ರಯೋಗವನ್ನು ಭಾರತ ಹಾಗೂ ಜಪಾನ್ನಲ್ಲಿ ಮಾಡಿವೆ. ಭಾರತದ ದಖ್ಖನ್ ಪ್ರಸ್ಥಭೂಮಿ, ಅರೆ ಶುಷ್ಕ ಭೂಮಿಯ ಬೆಳೆಗಳ ಬಗ್ಗೆ ಕರಾರುವಕ್ಕಾದ ಭವಿಷ್ಯವನ್ನು ಈ ತಂತ್ರಜ್ಞಾನದ ಮೂಲಕ ಹೇಳಬಹುದಾಗಿದೆ ಎಂದರು.
ಕಾರ್ಯನಿರ್ವಹಣೆಯ ಬಗೆ: ಮೊದಲು ಸ್ವಯಂಚಾಲಿತ ಡ್ರೋನ್ ಮೂಲಕ ಹೊಲದ ನಿಖರವಾದ ಚಿತ್ರದ ದತ್ತಾಂಶ ಸಂಗ್ರಹ ಮಾಡಲಾಗುತ್ತದೆ. ಅಗ್ಗದ ಮತ್ತು ನಿರ್ವಹಣೆ ಸುಲಭವಾದ ಐಒಟಿ ಸೆನ್ಸರ್ ಮೂಲಕ ಹೊಲದ ಮಣ್ಣಿನ ತೇವಾಂಶ, ಸ್ಥಳದ ಉಷ್ಣಾಂಶ ದಾಖಲಿಸಲಾಗುತ್ತದೆ.
ಸ್ವಯಂಚಾಲಿತವಾಗಿ ಕೃತಕ ಬುದ್ಧಿಮತ್ತೆಯ ಮೂಲಕ ಬೆಳೆಯ ಸ್ಥಿತಿಗತಿಯ ಚಿತ್ರಗಳ ದಾಖಲೀಕರಣ, ಬೀಜದ ವಂಶವಾಹಿ ಮಾಹಿತಿಯ ಮೂಲಕ ಬೆಳೆ ಎಷ್ಟು ಬರಬಹುದು ಎಂಬುದನ್ನು ಲೆಕ್ಕಾಚಾರ ಹಾಕಲಾಗುತ್ತದೆ. ಈಗಾಗಲೇ ಹೈದರಾಬಾದ್ನಲ್ಲಿ ದತ್ತಾಂಶ ಸಂಗ್ರಹ ಮಾಡಲಾಗಿದೆ. ಈ ಎಲ್ಲಾ ದತ್ತಾಂಶಗಳನ್ನು ಉಪಯೋಗಿಸಿಕೊಂಡು ವೈಯಕ್ತಿಕವಾಗಿ ರೈತರ ಹೊಲದ ಪರೀಕ್ಷೆ ಮಾಡಿ ಬೆಳೆ ಬೆಳೆಯುವ ಮುನ್ನವೇ ಆಯಾ ಹೊಲದ ಮಣ್ಣು ಹಾಗೂ ಆಯಾ ಪ್ರದೇಶದ ಹವಾಮಾನಕ್ಕೆ ಯಾವ ಬೆಳೆ ಸೂಕ್ತ, ನೀರು ಎಷ್ಟು ಬೇಕು ಇತ್ಯಾದಿ ಸಲಹೆಗಳನ್ನು ನೀಡಬಹುದು ಎಂದು ವಿವರಿಸಿದರು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications