BTS2020: ರೈತರು ಡ್ರೋನ್ ಮೂಲಕ ಪಡೆಯಬಹುದು ಬೆಳೆ ಭವಿಷ್ಯ!
ಬೆಂಗಳೂರು, ನ. 22: ಯಾವ ಬೀಜವನ್ನು ತಮ್ಮ ಹೊಲದಲ್ಲಿ ಬಿತ್ತನೆ ಮಾಡಿದರೆ ಉತ್ತಮ ಬೆಳೆ ಬರಬಹುದು ಎಂಬುದು ಪ್ರತಿಯೊಬ್ಬ ರೈತರ ತಲೆಯಲ್ಲಿ ಕೊರೆಯುವ ಪ್ರಶ್ನೆ. ಇದೀಗ ಡ್ರೋನ್ ಹಾಗೂ ಕೃತಕ ಬುದ್ಧಿಮತ್ತೆ (ಎಐ) ಮೂಲಕ ಬೆಳೆ ಭವಿಷ್ಯ ಹೇಳಲು ಬಂದಿದ್ದಾರೆ ಜಪಾನ್ ವಿಜ್ಞಾನಿಗಳು.
ಬೆಂಗಳೂರು ತಂತ್ರಜ್ಞಾನ ಮೇಳ 2020ದಲ್ಲಿ ಟೋಕಿಯೋ ವಿಶ್ವವಿದ್ಯಾಲಯದ ಪ್ರೊ. ಸೆಶಿ ನಿನೊಮಿಯಾ ಅವರು 'ಜಪಾನ್-ಭಾರತ: ಭವಿಷ್ಯದ ಸಮಾಜಕ್ಕಾಗಿ ಹೈಟೆಕ್ ಪರಿಹಾರಗಳ ಸಹ-ಅಭಿವೃದ್ಧಿ' ಸಂವಾದ ಕಾರ್ಯಕ್ರಮದಲ್ಲಿ ಸಮ್ಮೇಳನದ ಕೊನೆಯ ದಿನ ಶನಿವಾರ ಈ ಕುರಿತು ವಿವರಿಸಿದರು.
ಭೂಮಿಯಲ್ಲಿ ಬೆಳೆ ಬೆಳೆಯುವ ಮುನ್ನವೇ ಬೀಜವೊಂದು ತಮ್ಮ ಹೊಲದಲ್ಲಿ ಹೇಗೆ ಫಲಿತಾಂಶ ನೀಡಬಹುದು ಎಂಬುದನ್ನು ಹೇಳಲು ಡ್ರೋನ್, ಐಒಟಿ ಸೆನ್ಸರ್ ಹಾಗೂ ಎಐ ತಂತ್ರಜ್ಞಾನ ಬಳಸಿಕೊಂಡು ಯಶಸ್ವಿಯಾಗಿ ಕಂಡುಕೊಳ್ಳಲಾಗಿದೆ.

ಜಪಾನ್ನ ಟೋಕಿಯೋ ಯುನಿವರ್ಸಿಟಿ ಹಾಗೂ ಭಾರತದ ಐಐಟಿ ಹೈದರಾಬಾದ್, ಐಐಟಿ ಬಾಂಬೆ, ತೆಲಂಗಾಣದ ಕೃಷಿ ವಿವಿ ಹಾಗೂ ಹೈದರಾಬಾದ್ನ ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಜಂಟಿಯಾಗಿ ಈ ಪ್ರಯೋಗವನ್ನು ಭಾರತ ಹಾಗೂ ಜಪಾನ್ನಲ್ಲಿ ಮಾಡಿವೆ. ಭಾರತದ ದಖ್ಖನ್ ಪ್ರಸ್ಥಭೂಮಿ, ಅರೆ ಶುಷ್ಕ ಭೂಮಿಯ ಬೆಳೆಗಳ ಬಗ್ಗೆ ಕರಾರುವಕ್ಕಾದ ಭವಿಷ್ಯವನ್ನು ಈ ತಂತ್ರಜ್ಞಾನದ ಮೂಲಕ ಹೇಳಬಹುದಾಗಿದೆ ಎಂದರು.
ಕಾರ್ಯನಿರ್ವಹಣೆಯ ಬಗೆ: ಮೊದಲು ಸ್ವಯಂಚಾಲಿತ ಡ್ರೋನ್ ಮೂಲಕ ಹೊಲದ ನಿಖರವಾದ ಚಿತ್ರದ ದತ್ತಾಂಶ ಸಂಗ್ರಹ ಮಾಡಲಾಗುತ್ತದೆ. ಅಗ್ಗದ ಮತ್ತು ನಿರ್ವಹಣೆ ಸುಲಭವಾದ ಐಒಟಿ ಸೆನ್ಸರ್ ಮೂಲಕ ಹೊಲದ ಮಣ್ಣಿನ ತೇವಾಂಶ, ಸ್ಥಳದ ಉಷ್ಣಾಂಶ ದಾಖಲಿಸಲಾಗುತ್ತದೆ.
ಸ್ವಯಂಚಾಲಿತವಾಗಿ ಕೃತಕ ಬುದ್ಧಿಮತ್ತೆಯ ಮೂಲಕ ಬೆಳೆಯ ಸ್ಥಿತಿಗತಿಯ ಚಿತ್ರಗಳ ದಾಖಲೀಕರಣ, ಬೀಜದ ವಂಶವಾಹಿ ಮಾಹಿತಿಯ ಮೂಲಕ ಬೆಳೆ ಎಷ್ಟು ಬರಬಹುದು ಎಂಬುದನ್ನು ಲೆಕ್ಕಾಚಾರ ಹಾಕಲಾಗುತ್ತದೆ. ಈಗಾಗಲೇ ಹೈದರಾಬಾದ್ನಲ್ಲಿ ದತ್ತಾಂಶ ಸಂಗ್ರಹ ಮಾಡಲಾಗಿದೆ. ಈ ಎಲ್ಲಾ ದತ್ತಾಂಶಗಳನ್ನು ಉಪಯೋಗಿಸಿಕೊಂಡು ವೈಯಕ್ತಿಕವಾಗಿ ರೈತರ ಹೊಲದ ಪರೀಕ್ಷೆ ಮಾಡಿ ಬೆಳೆ ಬೆಳೆಯುವ ಮುನ್ನವೇ ಆಯಾ ಹೊಲದ ಮಣ್ಣು ಹಾಗೂ ಆಯಾ ಪ್ರದೇಶದ ಹವಾಮಾನಕ್ಕೆ ಯಾವ ಬೆಳೆ ಸೂಕ್ತ, ನೀರು ಎಷ್ಟು ಬೇಕು ಇತ್ಯಾದಿ ಸಲಹೆಗಳನ್ನು ನೀಡಬಹುದು ಎಂದು ವಿವರಿಸಿದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications