ಪೊಲೀಸರ ದೌರ್ಜನ್ಯ ಖಂಡಿಸಿ ಜೆಡಿಎಸ್ ನಿಂದ ಪ್ರತಿಭಟನೆ
ಧಾರವಾಡ, ಜುಲೈ 31: ಯಮನೂರಿನಲ್ಲಿ ಪೊಲೀಸರ ದೌರ್ಜನ್ಯದಿಂದ ಗ್ರಾಮಸ್ಥರು ಭಯಭೀತಗೊಂಡು ಊರು ಬಿಟ್ಟಿದ್ದಾರೆ. ಅಳಿದುಳಿದವರು ಶಾಸಕರು, ಸಚಿವರ ಎದುರು ತಮ್ಮ ಗೋಳು ತೋಡಿಕೊಂಡಿದ್ದಾರೆ. ಪೊಲೀಸರ ದೌರ್ಜನ್ಯ ಖಂಡಿಸಿ ಜೆಡಿಎಸ್ ಪ್ರತಿಭಟನೆಗೆ ಮುಂದಾಗಿದೆ.
ಮಳೆ ಬಂದು ಹೊಲದಲ್ಲಿ ಕೆಲಸ ಮಾಡಬೇಕಾದ ರೈತರು ಬಂಧನ ಭೀತಿಯಿಂದ ತಲೆ ಮರೆಸಿಕೊಂಡಿದ್ದಾರೆ. ಕೆಲವರು ಹೋದವರು ಇದುವರೆಗೂ ಮನೆಗೆ ಬಂದಿಲ್ಲ ಎಂದು ಗ್ರಾಮದ ಮಹಿಳೆಯರು ಆರೋಪಿಸಿದ್ದಾರೆ. ಬಂಧಿತ ರೈತರನ್ನು ಬಳ್ಳಾರಿ ಜೈಲಿಗೆ ರವಾನಿಸಲಾಗಿದೆ.
ಘಟನೆಯ ಹಿನ್ನೆಲೆಯಲ್ಲಿ ಶನಿವಾರ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಯಮನೂರು ಮತ್ತು ಸುತ್ತಮುತ್ತಲಿನ ಗ್ರಾಮಕ್ಕೆ ಭೇಟಿ ನೀಡಿದ್ದರು. [ಯಮನೂರಿನಲ್ಲಿ ಪೊಲೀಸ್ ದೌರ್ಜನ್ಯ: ಎಡಿಜಿಪಿ ಪಂತ್ ರಿಂದ ತನಿಖೆ]
ಕನ್ನಡ ಪರ ಸಂಘಟನೆಗಳ ಕರ್ನಾಟಕ ಬಂದ್ ಕರೆ ಹಿನ್ನೆಲೆಯಲ್ಲಿ ಮತ್ತು ಉತ್ತರ ಕರ್ನಾಟಕ ಬಂದ್ ಸಂದರ್ಭದಲ್ಲಿ ನವಲಗುಂದ ಪಟ್ಟಣದ ಸರಕಾರಿ ಕಚೇರಿಗಳಿಗೆ ಬೆಂಕಿ ಹಚ್ಚಲಾಗಿತ್ತು. ಜೊತೆಗೆ ಒಂದು ಸರಕಾರಿ ಬಸ್ ಸುಡಲಾಗಿತ್ತು. ಪೊಲೀಸರ ಜೀಪ್ ಗೂ ಬೆಂಕಿ ಹಚ್ಚಲಾಗಿತ್ತು.
ಈ ಹಿನ್ನೆಲೆಯಲ್ಲಿ ಗುರುವಾರ ರಾತ್ರೋ ರಾತ್ರಿ ಪೊಲೀಸರು ಯಮನೂರ ಮತ್ತು ಅಳಗವಾಡಿ ಗ್ರಾಮಕ್ಕೆ ಧಾವಿಸಿ ಜನರಲ್ಲಿ ಬಂಧಿಸಿ ಕರೆದೊಯ್ದಿದ್ದರು. [ಇದೇನು ಸದ್ದಾಂ ಹುಸೇನ್ ರಾಜ್ಯವೇ? : ಎಚ್ಡಿಕೆ ಪ್ರಶ್ನೆ]
ಮನೆ ಬಾಗಿಲು ಮುರಿದು ಒಳಗಡೆ ಬಂದ ಪೊಲೀಸರು ಮೊದಲು ಮಾಡುವ ಕೆಲಸವೇ ಟಿವಿ ಒಡೆಯುವುದು, ನಂತರ ಸಿಕ್ಕ ಸಿಕ್ಕವರಿಗೆ ಲಾಠಿಯಿಂದ ಬಡಿಯುತ್ತಿದ್ದರು ಎಂದು ಹೊಡೆತ ಮಲ್ಲಮ್ಮ ಹೇಳುತ್ತಾರೆ. ಹೆಣ್ಣು ಮಕ್ಕಳ ತೊಡೆಗೆ, ಎದೆಗೆ, ಬೆನ್ನಿಗೆ ಬಾಲಕಿಯರು, ಗರ್ಭಿಣಿಯರು ವೃದ್ಧರೆಂಬುದನ್ನು ನೋಡದೇ ಎಲ್ಲರನ್ನೂ ಥಳಿಸಿದ್ದರು.

ಸಂತ್ರಸ್ತರಿಗೆ ಕುಮಾರಸ್ವಾಮಿಯಿಂದ ಭರವಸೆ
ಯಮನೂರಿನಲ್ಲಿ ಪೊಲೀಸರ ದೌರ್ಜನ್ಯದಿಂದ ಗ್ರಾಮಸ್ಥರು ಭಯಭೀತಗೊಂಡು ಊರು ಬಿಟ್ಟಿದ್ದಾರೆ. ಅಳಿದುಳಿದವರು ಶಾಸಕರು, ಸಚಿವರ ಎದುರು ತಮ್ಮ ಗೋಳು ತೋಡಿಕೊಂಡಿದ್ದಾರೆ. ಪೊಲೀಸರ ದೌರ್ಜನ್ಯ ಖಂಡಿಸಿ ಜೆಡಿಎಸ್ ಪ್ರತಿಭಟನೆಗೆ ಮುಂದಾಗಿದೆ.

ಬಸವರಾಜ ಹೊರಟ್ಟಿ ಸಾಂತ್ವನ
ರವಿವಾರ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸಾಂತ್ವನ ಹೇಳಲು ಯಮನೂರು ಗ್ರಾಮಕ್ಕೆ ಭೇಟಿ ನೀಡಿದಾಗ ಅವರ ಕಾರನ್ನು ಮುತ್ತಿಗೆ ಪ್ರತಿಭಟಿಸಲಾಯಿತು. ಆಗಸ್ಟ್ 4ರ ನಂತರ ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹೊರಟ್ಟಿ ಹೇಳಿದರು.

ಬೂದಿ ಮುಚ್ಚಿದ ಕೆಂಡದಂತಹ ವಾತಾವರಣ
ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ವಾತಾವರಣ ಸೃಷ್ಟಿಯಾಗಿದ್ದು ಇಡೀ ಊರೇ ಬಿಕೋ ಎನ್ನುತ್ತಿದೆ. ಗ್ರಾಮದಲ್ಲಿ ಕೆಲವು ಮನೆಗಳಲ್ಲಿ ಪುರುಷರಿದ್ದಾರೆ. ಮಕ್ಕಳು, ವೃದ್ಧರಾದಿಯಾಗಿ ಎಲ್ಲರೂ ಪೊಲೀಸರ ಭಯದಿಂದ ಊರು ಬಿಟ್ಟು ಹೊಲಗಳಲ್ಲಿ ಬೀಡು ಬಿಟ್ಟಿದ್ದಾರೆ.

ರೈತರನ್ನು ಬಳ್ಳಾರಿ ಜೈಲಿಗೆ ರವಾನಿಸಲಾಗಿದೆ
ಮಳೆ ಬಂದು ಹೊಲದಲ್ಲಿ ಕೆಲಸ ಮಾಡಬೇಕಾದ ರೈತರು ಬಂಧನ ಭೀತಿಯಿಂದ ತಲೆ ಮರೆಸಿಕೊಂಡಿದ್ದಾರೆ. ಕೆಲವರು ಹೋದವರು ಇದುವರೆಗೂ ಮನೆಗೆ ಬಂದಿಲ್ಲ ಎಂದು ಗ್ರಾಮದ ಮಹಿಳೆಯರು ಆರೋಪಿಸಿದ್ದಾರೆ. ಬಂಧಿತ ರೈತರನ್ನು ಬಳ್ಳಾರಿ ಜೈಲಿಗೆ ರವಾನಿಸಲಾಗಿದೆ.

ಕಮಲಪಂತ್ ನೇತೃತ್ವದಲ್ಲಿ ತನಿಖೆ
ಗೃಹ ಸಚಿವ ಪಿ.ಪರಮೇಶ್ವರ ಅವರು ಡಿವೈಎಸ್ಪಿ ನೆಹರು ಓಲೇಕಾರ ಅವರನ್ನು ವರ್ಗಾಯಿಸಿ, ಪೊಲೀಸ್ ಇನ್ಸಪೆಕ್ಟರ್ ಶಿವಯೋಗಿ ಲೋಹಾರ ಅವರಿಗೆ ಅಮಾನತು ಶಿಕ್ಷೆ ನೀಡಿದ್ದಾರೆ.
ಎಡಿಜಿಪಿ ಕಮಲಪಂತ್ ನೇತೃತ್ವದಲ್ಲಿ ತನಿಖೆ ನಡೆಸಲು ಗೃಹ ಸಚಿವರು ಆದೇಶಿಸಿ ಒಂದು ವಾರದಲ್ಲಿ ವರದಿ ನೀಡಲು ತಿಳಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications