Jowar: ಮಾರುಕಟ್ಟೆಯಲ್ಲಿ ಜೋಳದ ದರ ಕುಸಿತ- ಚಿನ್ನದ ನಾಡಿನ ಬೆಳೆಗಾರರಿಗೆ ನಿರಾಸೆ
ರಾಯಚೂರು ಮಾರ್ಚ್ 20: ಮಾರುಕಟ್ಟೆಯಲ್ಲಿ ಜೋಳದ ದರ ಕುಸಿತದಿಂದ ಕಂಗಾಲಾಗಿರುವ ರೈತರು, ಸರಕಾರದ ಬೆಂಬಲ ಬೆಲೆ ಖರೀದಿ ಕೇಂದ್ರವನ್ನು ನಂಬಿ ನಿರಾಸೆಗೊಳಗಾಗಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜೋಳ ಮಾರಾಟಕ್ಕೆ ನೋಂದಣಿ ಆರಂಭಿಸಿ ತಿಂಗಳು ಕಳೆದರೂ ಪ್ರಯೋಜನವಾಗಿಲ್ಲ.
ತಾಲೂಕು ವ್ಯಾಪ್ತಿಯಲ್ಲಿ ಮುಂಗಾರು ಹಂಗಾಮಿನ ಜೋಳ ಮಾರಾಟಕ್ಕೆ ನೋಂದಣಿ ಮಾಡಿಕೊಳ್ಳಲಾಗುತ್ತಿದೆ. ಈ ಸಮಸ್ಯೆ ಪರಿಹರಿಸಿ, ಜೋಳ ಖರೀದಿಗೆ ಅವಕಾಶ ನೀಡುವ ಭರವಸೆ ನೀಡಲಾಗಿದೆ. ಆದರೆ ಸರಕಾರ ಕಣ್ಣು ತೆರೆದಿಲ್ಲ.

ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಜೋಳಕ್ಕೆ 2500 ರಿಂದ 2600 ರೂ.ದರವಿದೆ. ಸರಕಾರದ ಕನಿಷ್ಠ ಬೆಂಬಲ ಬೆಲೆ ಕೇಂದ್ರಲ್ಲಿ ಹೈಬ್ರಿಡ್ ಬಿಳಿ ಜೋಳಕ್ಕೆ 3180 ರೂ., ಮಾಲ್ದಂಡಿ ಬಿಳಿ ಜೋಳಕ್ಕೆ 3225 ರೂ. ಇದೆ. ಮಾರುಕಟ್ಟೆ ದರಕ್ಕೂ ಸರಕಾರದ ದರಕ್ಕೂ 600 ರೂ. ವ್ಯತ್ಯಾಸವಿರುವುದರಿಂದ ರೈತರು ಸರಕಾರದ ಖರೀದಿ ಕೇಂದ್ರವನ್ನೇ ಅವಲಂಬಿಸಿದ್ದಾರೆ.
ಹಿಂಗಾರು-ಮುಂಗಾರು ತಾಂತ್ರಿಕ ಸಮಸ್ಯೆ ಹಾಗೂ ಸಣ್ಣಪುಟ್ಟ ಸಮಸ್ಯೆ ದೂರಾಗಿಸಿ, ಖರೀದಿ ಕೇಂದ್ರ ಆರಂಭಿಸಿಲ್ಲ. ಹೀಗಾಗಿ ಲೋಕಸಭೆ ಚುನಾವಣೆ ಸನ್ನಿಹಿತವಾಗಿರುವುದರಿಂದ ನೀತಿ ಸಂಹಿತೆ ಜಾರಿಯಾದರೆ, ಸಮಸ್ಯೆ ಆಗಲಿದೆ? ಎಂಬ ಪ್ರಶ್ನೆ ರೈತರದ್ದಾಗಿದೆ.

ಸಿಂಧನೂರು ತಾಲೂಕಿನ ರಾಮತ್ನಾಳ, ರಾಗಲಪರ್ವಿ, ಗೋನವಾರ, ಹೆಡಗಿನಾಳ, ಅಲಬನೂರು, ಬಾದರ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಹುತೇಕ ಕಡೆಗಳಲ್ಲಿ ಜೋಳ ಬೆಳೆದ ಬೆಳೆಗಾರರು, ಜೋಳವನ್ನು ಮಾರಾಟ ಮಾಡದೆ, ಮನೆ ಎದುರು ಶೇಖರಿಸಿಟ್ಟು, ತಾಡಪಲ್ಲುಗಳಲ್ಲಿ ಮುಚ್ಚಿಡಲಾಗಿದೆ. ಶೇಖರಿಸಿಟ್ಟಿರುವ ಜೋಳಕ್ಕೆ ನುಸಿ ಹತ್ತುತ್ತಿವೆ. ಸರಕಾರದ ಖರೀದಿ ಕೇಂದ್ರಕ್ಕೆ ಜೋಳ ನೀಡಿದರೆ, ಒಂದಷ್ಟು ಹಣ ಉಳಿಯಲಿದೆ ಎಂಬ ಲೆಕ್ಕಾಚಾರ ರೈತರದ್ದಾಗಿದೆ.
ಆದರೆ ನೋಂದಣಿ ಪ್ರಕ್ರಿಯೆಯಲ್ಲಿ ಆಗಿರುವ ಲೋಪ ಮತ್ತು ಖರೀದಿ ಕೇಂದ್ರ ಆರಂಭಕ್ಕೆ ಕಾಳಜಿ ವಹಿಸದ ಪರಿಣಾಮ ಸಮಸ್ಯೆ ಉಂಟಾಗಿದೆ. ಜೋಳ ಖರೀದಿಯಾಗದೇ ಉಳಿದಿದೆ.

ಸರಕಾರದ ನಿರ್ಲಕ್ಷ್ಯ ನೀತಿಗೆ ಬೇಸತ್ತ ರೈತರು ಕಡಿಮೆ ದರಕ್ಕೆ ವರ್ತಕರಿಗೆ ಜೋಳ ಮಾರಾಟ ಮಾಡಿದರೆ, ಖರೀದಿ ಕೇಂದ್ರ ಆರಂಭವಾದರೆ ವರ್ತಕರು ಖರೀದಿ ಕೇಂದ್ರ ಲಾಭ ಪಡೆಯುವ ಸಾಧ್ಯತೆ ಇದೆ. ಸರಕಾರ ಕೂಡಲೇ ಖರೀದಿ ಕೇಂದ್ರ ಆರಂಭಕ್ಕೆ ಮುಂದಾಗಿ, ರೈತರ ನೆರವಿಗೆ ಧಾವಿಸಬೇಕು ಎಂಬುದು ಪ್ರಜ್ಞಾವಂತರ ಅಭಿಪ್ರಾಯವಾಗಿದೆ.
ಈ ಬಾರಿ ಜೋಳ ಖರೀದಿಗೆ ನೋಂದಣಿ ಪ್ರಕ್ರಿಯೆ ಸರಿಯಾಗಿ ನಡೆದಿಲ್ಲ. ಹಿಂಗಾರು ಹಂಗಾಮಿನ ಜೋಳ ಖರೀದಿಗೆ ಅವಕಾಶ ನೀಡದೇ ಇರುವುದು, ಪ್ರತಿ ಎಕರೆಗೆ 20 ಕ್ವಿಂಟಾಲ್ ಜೋಳ ಖರೀದಿಗೆ ಆನ್ಲೈನ್ ಅಪ್ಡೇಟ್ ಆಗಿಲ್ಲ. ಸರಕಾರ ಕೂಡಲೇ ರೈತರ ಸಮಸ್ಯೆ ಪರಿಹರಿಸಬೇಕು ಎಂದು ರೈತ ಮುಖಂಡ ಬಸವರಾಜ ಬನ್ನಿಗನೂರು ಹೇಳಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications