Jowar: ಮಾರುಕಟ್ಟೆಯಲ್ಲಿ ಜೋಳದ ದರ ಕುಸಿತ- ಚಿನ್ನದ ನಾಡಿನ ಬೆಳೆಗಾರರಿಗೆ ನಿರಾಸೆ
ರಾಯಚೂರು ಮಾರ್ಚ್ 20: ಮಾರುಕಟ್ಟೆಯಲ್ಲಿ ಜೋಳದ ದರ ಕುಸಿತದಿಂದ ಕಂಗಾಲಾಗಿರುವ ರೈತರು, ಸರಕಾರದ ಬೆಂಬಲ ಬೆಲೆ ಖರೀದಿ ಕೇಂದ್ರವನ್ನು ನಂಬಿ ನಿರಾಸೆಗೊಳಗಾಗಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜೋಳ ಮಾರಾಟಕ್ಕೆ ನೋಂದಣಿ ಆರಂಭಿಸಿ ತಿಂಗಳು ಕಳೆದರೂ ಪ್ರಯೋಜನವಾಗಿಲ್ಲ.
ತಾಲೂಕು ವ್ಯಾಪ್ತಿಯಲ್ಲಿ ಮುಂಗಾರು ಹಂಗಾಮಿನ ಜೋಳ ಮಾರಾಟಕ್ಕೆ ನೋಂದಣಿ ಮಾಡಿಕೊಳ್ಳಲಾಗುತ್ತಿದೆ. ಈ ಸಮಸ್ಯೆ ಪರಿಹರಿಸಿ, ಜೋಳ ಖರೀದಿಗೆ ಅವಕಾಶ ನೀಡುವ ಭರವಸೆ ನೀಡಲಾಗಿದೆ. ಆದರೆ ಸರಕಾರ ಕಣ್ಣು ತೆರೆದಿಲ್ಲ.

ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಜೋಳಕ್ಕೆ 2500 ರಿಂದ 2600 ರೂ.ದರವಿದೆ. ಸರಕಾರದ ಕನಿಷ್ಠ ಬೆಂಬಲ ಬೆಲೆ ಕೇಂದ್ರಲ್ಲಿ ಹೈಬ್ರಿಡ್ ಬಿಳಿ ಜೋಳಕ್ಕೆ 3180 ರೂ., ಮಾಲ್ದಂಡಿ ಬಿಳಿ ಜೋಳಕ್ಕೆ 3225 ರೂ. ಇದೆ. ಮಾರುಕಟ್ಟೆ ದರಕ್ಕೂ ಸರಕಾರದ ದರಕ್ಕೂ 600 ರೂ. ವ್ಯತ್ಯಾಸವಿರುವುದರಿಂದ ರೈತರು ಸರಕಾರದ ಖರೀದಿ ಕೇಂದ್ರವನ್ನೇ ಅವಲಂಬಿಸಿದ್ದಾರೆ.
ಹಿಂಗಾರು-ಮುಂಗಾರು ತಾಂತ್ರಿಕ ಸಮಸ್ಯೆ ಹಾಗೂ ಸಣ್ಣಪುಟ್ಟ ಸಮಸ್ಯೆ ದೂರಾಗಿಸಿ, ಖರೀದಿ ಕೇಂದ್ರ ಆರಂಭಿಸಿಲ್ಲ. ಹೀಗಾಗಿ ಲೋಕಸಭೆ ಚುನಾವಣೆ ಸನ್ನಿಹಿತವಾಗಿರುವುದರಿಂದ ನೀತಿ ಸಂಹಿತೆ ಜಾರಿಯಾದರೆ, ಸಮಸ್ಯೆ ಆಗಲಿದೆ? ಎಂಬ ಪ್ರಶ್ನೆ ರೈತರದ್ದಾಗಿದೆ.

ಸಿಂಧನೂರು ತಾಲೂಕಿನ ರಾಮತ್ನಾಳ, ರಾಗಲಪರ್ವಿ, ಗೋನವಾರ, ಹೆಡಗಿನಾಳ, ಅಲಬನೂರು, ಬಾದರ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಹುತೇಕ ಕಡೆಗಳಲ್ಲಿ ಜೋಳ ಬೆಳೆದ ಬೆಳೆಗಾರರು, ಜೋಳವನ್ನು ಮಾರಾಟ ಮಾಡದೆ, ಮನೆ ಎದುರು ಶೇಖರಿಸಿಟ್ಟು, ತಾಡಪಲ್ಲುಗಳಲ್ಲಿ ಮುಚ್ಚಿಡಲಾಗಿದೆ. ಶೇಖರಿಸಿಟ್ಟಿರುವ ಜೋಳಕ್ಕೆ ನುಸಿ ಹತ್ತುತ್ತಿವೆ. ಸರಕಾರದ ಖರೀದಿ ಕೇಂದ್ರಕ್ಕೆ ಜೋಳ ನೀಡಿದರೆ, ಒಂದಷ್ಟು ಹಣ ಉಳಿಯಲಿದೆ ಎಂಬ ಲೆಕ್ಕಾಚಾರ ರೈತರದ್ದಾಗಿದೆ.
ಆದರೆ ನೋಂದಣಿ ಪ್ರಕ್ರಿಯೆಯಲ್ಲಿ ಆಗಿರುವ ಲೋಪ ಮತ್ತು ಖರೀದಿ ಕೇಂದ್ರ ಆರಂಭಕ್ಕೆ ಕಾಳಜಿ ವಹಿಸದ ಪರಿಣಾಮ ಸಮಸ್ಯೆ ಉಂಟಾಗಿದೆ. ಜೋಳ ಖರೀದಿಯಾಗದೇ ಉಳಿದಿದೆ.

ಸರಕಾರದ ನಿರ್ಲಕ್ಷ್ಯ ನೀತಿಗೆ ಬೇಸತ್ತ ರೈತರು ಕಡಿಮೆ ದರಕ್ಕೆ ವರ್ತಕರಿಗೆ ಜೋಳ ಮಾರಾಟ ಮಾಡಿದರೆ, ಖರೀದಿ ಕೇಂದ್ರ ಆರಂಭವಾದರೆ ವರ್ತಕರು ಖರೀದಿ ಕೇಂದ್ರ ಲಾಭ ಪಡೆಯುವ ಸಾಧ್ಯತೆ ಇದೆ. ಸರಕಾರ ಕೂಡಲೇ ಖರೀದಿ ಕೇಂದ್ರ ಆರಂಭಕ್ಕೆ ಮುಂದಾಗಿ, ರೈತರ ನೆರವಿಗೆ ಧಾವಿಸಬೇಕು ಎಂಬುದು ಪ್ರಜ್ಞಾವಂತರ ಅಭಿಪ್ರಾಯವಾಗಿದೆ.
ಈ ಬಾರಿ ಜೋಳ ಖರೀದಿಗೆ ನೋಂದಣಿ ಪ್ರಕ್ರಿಯೆ ಸರಿಯಾಗಿ ನಡೆದಿಲ್ಲ. ಹಿಂಗಾರು ಹಂಗಾಮಿನ ಜೋಳ ಖರೀದಿಗೆ ಅವಕಾಶ ನೀಡದೇ ಇರುವುದು, ಪ್ರತಿ ಎಕರೆಗೆ 20 ಕ್ವಿಂಟಾಲ್ ಜೋಳ ಖರೀದಿಗೆ ಆನ್ಲೈನ್ ಅಪ್ಡೇಟ್ ಆಗಿಲ್ಲ. ಸರಕಾರ ಕೂಡಲೇ ರೈತರ ಸಮಸ್ಯೆ ಪರಿಹರಿಸಬೇಕು ಎಂದು ರೈತ ಮುಖಂಡ ಬಸವರಾಜ ಬನ್ನಿಗನೂರು ಹೇಳಿದರು.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications