Kabini Dam: ಕಬಿನಿಯಲ್ಲಿ ತಗ್ಗಿದ ನೀರಿನ ಮಟ್ಟ, ಮೈಸೂರು ಜಿಲ್ಲೆಯ ರೈತರಿಗೆ ಆತಂಕ ಶುರು
ಮೈಸೂರು, ಆಗಸ್ಟ್, 25: ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯದ ನೀರನ್ನು ನಂಬಿ ಭತ್ತ ಬೆಳೆಯಲು ಮುಂದಾಗಿದ್ದ ರೈತರಲ್ಲಿ ಇದೀಗ ಆತಂಕ ಶುರುವಾಗಿದೆ. ಕಾರಣ ತಮಿಳುನಾಡಿಗೆ ನೀರು ಹರಿಸಿದ ಪರಿಣಾಮ ಜಲಾಶಯದ ನೀರಿನ ಮಟ್ಟ ತಗ್ಗಿದ್ದು, ಮಳೆ ಬರುವ ಲಕ್ಷಣಗಳು ಕಾಣದಿರುವುದರಿಂದ ಮುಂದೇನು ಎಂಬ ಚಿಂತೆ ಇಲ್ಲಿನ ಜನರಲ್ಲಿ ಆವರಿಸಿದೆ.
ಇಷ್ಟರಲ್ಲೇ ಮುಂಗಾರು ಮಳೆ ಅಬ್ಬರಿಸಬೇಕಿತ್ತು. ಆದರೆ ಆಗಸ್ಟ್ ತಿಂಗಳಲ್ಲಿ ಮಳೆ ಸುರಿಯದ ಕಾರಣ ತಗ್ಗಿರುವ ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಾಗುವುದು ಕಷ್ಟಸಾಧ್ಯವಾಗಿದೆ. ಒಂದು ವೇಳೆ ಹಿಂಗಾರು ಮಳೆ ಸುರಿದರೆ ಜಲಾಶಯಕ್ಕೆ ಜೀವಕಳೆ ಬರಬಹುದೇನೋ? ಆದರೆ ಭರ್ತಿಯಾಗುವಷ್ಟರ ಮಟ್ಟಿಗೆ ನೀರು ಹರಿದು ಬರುತ್ತಾ? ಎಂಬುದೇ ಈಗ ಪ್ರಶ್ನೆಯಾಗಿ ಉಳಿದಿದೆ.

ಆಗಸ್ಟ್ ತಿಂಗಳಲ್ಲಿ ಪ್ರತಿವರ್ಷ ಎಡಬಿಡದೆ ಸುರಿಯುತ್ತಿದ್ದ ಆಶ್ಲೇಷಾ ಮತ್ತು ಮಗೆ ಮಳೆ ಕೈಕೊಟ್ಟಿದೆ. ಇದರಿಂದ ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣ ತೀರಾ ಕಡಿಮೆಯಾಗಿದೆ. ಸುಪ್ರೀಂಕೋರ್ಟ್ ಆದೇಶದನ್ವಯ ಭರ್ತಿಯಾಗಿದ್ದ ಜಲಾಶಯದಿಂದ ಹೆಚ್ಚಿನ ನೀರನ್ನು ಮುಂಭಾಗದ ನದಿಗೆ ಹರಿಸಿದ್ದರಿಂದ ಜಲಾಶಯದ ನೀರಿನ ಮಟ್ಟದಲ್ಲಿ ದಿನದಿಂದ ದಿನಕ್ಕೆ ಕುಸಿತ ಕಾಣಿಸಿದೆ.
ಕಬಿನಿಯಲ್ಲಿ ನೀರಿನ ಮಟ್ಟ ಕುಸಿತ
ಕೇರಳದ ವೈನಾಡು ಮತ್ತು ಜಲಾಶಯದ ಹಿನ್ನೀರಿನಲ್ಲಿ ಕಳೆದ ಜುಲೈ ತಿಂಗಳಲ್ಲಿ ಮುಂಗಾರು ಮಳೆ ಅಬ್ಬರಿಸಿದ್ದರಿಂದ ಹದಿನೈದು ದಿನದ ಅಂತರದಲ್ಲಿ ಜಲಾಶಯ ಭರ್ತಿಗೊಂಡಿತ್ತು. ಆದರೆ ಎಲ್ಲವೂ ಸರಿಹೋಯಿತು ಎಂದು ಖುಷಿಪಡುತ್ತಿರುವಾಗಲೇ ಆಗಸ್ಟ್ ತಿಂಗಳಲ್ಲಿ ಮಳೆ ಬಾರದೆ ವಿರಾಮ ನೀಡಿರುವುದು, ಜೊತೆಗೆ ತಮಿಳುನಾಡು ನೀರಿಗಾಗಿ ಕ್ಯಾತೆ ತೆಗೆದಿರುವುದು ರೈತರನ್ನು ಚಿಂತೆಗೆ ತಳ್ಳಿದೆ.
ಕಬಿನಿ ಜಲಾಶಯದಿಂದ ಹೆಚ್ಚಿನ ನೀರನ್ನು ಹೊರಬಿಟ್ಟಿದ್ದರಿಂದ ಗರಿಷ್ಟ 2,284 ಅಡಿ ಸಂಗ್ರಹ ಮಟ್ಟದ ಜಲಾಶಯದಲ್ಲಿ ಈಗ 2275.72 ಅಡಿಯಷ್ಟು ನೀರಿದೆ. ಜಲಾಶಯ ಪಕ್ಕದ ಸುಭಾಷ್ ಪವರ್ ಹೌಸ್ ಮೂಲಕ ನಿತ್ಯ 5 ಸಾವಿರ ಕ್ಯೂಸೆಕ್, ಬಲದಂಡೆ ನಾಲೆಗೆ 2,300 ಕ್ಯೂಸೆಕ್, ಎಡದಂಡೆ ನಾಲೆಗೆ 25 ಕ್ಯೂಸೆಕ್ ನೀರು ಹರಿಸಿದ್ದರಿಂದ ಜಲಾಶಯದ ನೀರಿನ ಮಟ್ಟ ಕುಸಿತ ಕಂಡಿದೆ.
ನೀರಿಲ್ಲದೆ ಅನ್ನದಾತರ ಪರದಾಟ
ಜಲಾಯಶದಲ್ಲಿ ನೀರಿನ ಪ್ರಮಾಣ ತಗ್ಗಿರುವುದು ಜಲಾಶಯದ ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಭಯವನ್ನುಂಟು ಮಾಡಿದೆ. ಈ ಬಾರಿ ಜಲಾಶಯ ಭರ್ತಿಯಾಗಿ ಜಲಾಶಯದಿಂದ ಅಚ್ಚುಕಟ್ಟು ಪ್ರದೇಶದ ಬಲ ಮತ್ತು ಎಡದಂಡೆ ನಾಲೆಗಳಿಗೆ ಹಂತ ಹಂತವಾಗಿ ನೀರು ಹರಿಸುವುದಾಗಿ ಅಧಿಕಾರಿಗಳು ಹೇಳಿದ್ದರು. ನಂತರ ಹೇಳಿದಂತೆ ಬಲದಂಡೆ ಮತ್ತು ಎಡದಂಡೆ ನಾಲೆಗಳಿಗೆ ನೀರು ಹರಿಸಿದ್ದರು.
ಇದರಿಂದ ಖುಷಿಯಾದ ಅಚ್ಚುಕಟ್ಟು ಪ್ರದೇಶದ ರೈತರು ಈ ಬಾರಿ ಭತ್ತ ಬೆಳೆ ಬೆಳೆಯಲು ಮುಂದಾಗಿ ತಮ್ಮ ಹೊಲ ಗದ್ದೆಗಳನ್ನು ಹದ ಮಾಡಿ ನಾಟಿಗೆ ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಜಲಾಶಯದ ಅಧಿಕಾರಿಗಳ ಮೂಲಗಳ ಪ್ರಕಾರ ಸುಪ್ರೀಂಕೋರ್ಟ್ ಅದೇಶ ಪಾಲನೆ ಜೊತೆಗೆ ಕೇರಳದ ವೈನಾಡು ಹಾಗೂ ಜಲಾಶಯದ ಹಿನ್ನೀರಿನಲ್ಲಿ ಮಳೆ ತೀರಾ ಕ್ಷೀಣಿಸಿದ್ದು, ಜಲಾಶಯದ ಸಂಗ್ರಹ ಮಟ್ಟದಲ್ಲೂ ಭಾರೀ ಇಳಿಮುಖವಾಗಿರುವುದರಿಂದ ಭತ್ತದ ಬೆಳೆಗೆ ನೀರು ಹರಿಸುವುದು ಕಷ್ಟವಾಗುತ್ತದೆ ಎನ್ನಲಾಗುತ್ತಿದೆ.
ರೈತರಲ್ಲಿ ಮನೆ ಮಾಡಿದ ಆತಂಕ
ಇದೇ ರೀತಿಯಾದರೆ ಭತ್ತದ ಕೃಷಿಗೆ ಮುಂದಾಗಿರುವ ರೈತರ ಕಥೆಯೇನು? ಎಂಬ ಪ್ರಶ್ನೆ ಕಾಡುತ್ತಿದೆ. ಒಂದು ವೇಳೆ ಮುಂದಿನ ದಿನಗಳಲ್ಲಿ ಉತ್ತಮವಾಗಿ ಮಳೆ ಬಂದರೆ ರೈತರು ಬದುಕಬಹುದೇನೋ? ಇಲ್ಲದೆ ಹೋದರೆ ಸಂಕಷ್ಟ ತಪ್ಪಿದಲ್ಲ. ಇನ್ನೊಂದೆಡೆ ಭರ್ತಿಯಾದ ಜಲಾಶಯಕ್ಕೆ ಬಾಗಿನ ಅರ್ಪಿಸದೆ ನೇರವಾಗಿ ತಮಿಳುನಾಡಿಗೆ ನೀರು ಹರಿಸಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಕುರಿತಂತೆ ಮಾತನಾಡಿರುವ ಅಚ್ಚುಕಟ್ಟು ಪ್ರದೇಶದ ರೈತ ಹೋರಾಟಗಾರ ಹೆಚ್.ಬಿ.ಶಿವಲಿಂಗಪ್ಪ ಅವರು, ಈ ಬಾರಿ ಜಲಾಶಯ ತುಂಬಿದ್ದರಿಂದ ಅಚ್ಚುಕಟ್ಟು ಪ್ರದೇಶದ ರೈತರು ನೀರು ಸಿಗುತ್ತದೆ ಎಂಬ ಅಶಾಭಾವನೆಯಿಂದ ಭತ್ತದ ಕೃಷಿಗೆ ನಮ್ಮ ಹೊಲ ಗದ್ದೆಗಳನ್ನು ಹದಮಾಡಿ ನಾಟಿಗೆ ತಯಾರಿ ಮಾಡಿಕೊಂಡಿದ್ದಾರೆ.
ಭತ್ತದ ಕೃಷಿಗೆ ನೀರು ನೀಡುವುದ ಕಷ್ಟ
ಇದೀಗ ಭರ್ತಿಯಾಗಿದ್ದ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಿ ಮಳೆ ಕೊರತೆ, ಭತ್ತಕ್ಕೆ ನೀರು ಕೊಡಲ್ಲ ಅಂದರೆ ನಾವು ಏನು ಮಾಡ್ಬೇಕು? ಭತ್ತ ಬೆಳೆಗೆ ನೀರು ಕೊಡದ್ದೀದ್ದರೇ ನಾವೂ ಬಿಡುವುದಿಲ್ಲ, ಬೀದಿಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕಬಿನಿ ಜಲಾಶಯದ ಎಕ್ಸಿಕ್ಯೂಟೀವ್ ಇಂಜಿನಿಯರ್ ಚಂದ್ರಶೇಖರ್ ಅವರು, ಅಗಸ್ಟ್ ತಿಂಗಳಲ್ಲಿ ವಾಡಿಕೆಯಂತೆ ಸುರಿಯಬೇಕಿದ್ದ ಮಳೆ ಸಂಪೂರ್ಣ ಕ್ಷೀಣಿಸಿದೆ. ಜಲಾಶಯಕ್ಕೆ ಹರಿದುಬರುತ್ತಿದ್ದ ಒಳ ಹರಿವು ಕಡಿಮೆಯಾಗಿದೆ. ಈ ಬಾರಿ ಭತ್ತದ ಬೆಳೆಗೆ ನೀರು ಕಷ್ಟ, ಭತ್ತಕ್ಕೆ ನೀರು ಕೊಡುತ್ತೇವೆ ಎಂದು ನಾವೂ ಹೇಳಿಲ್ಲ. ಆದರೆ ಕುಡಿಯುವ ನೀರಿಗೆ ಯಾವುದೇ ತೊಂದರೆಯಿಲ್ಲ ಎಂದು ತಿಳಿಸಿದ್ದಾರೆ. ಆದರೆ ಮುಂದೇನಾಗುತ್ತದೆ ಎಂಬುದನ್ನು ಕಾದುನೋಡಬೇಕಾಗಿದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!











Click it and Unblock the Notifications