ಹೂ ಬೆಳೆ ನಷ್ಟ ಪರಿಹಾರಧನಕ್ಕಾಗಿ ರೈತರಿಂದ ಅರ್ಜಿ ಅಹ್ವಾನ
ಕಲಬುರಗಿ, ಮೇ. 20: ಕೊರೋನಾ ವೈರಸ್ (ಕೋವಿಡ್-19) ಲಾಕ್ಡೌನ್ ಅವಧಿಯಲ್ಲಿ ಸಂಕಷ್ಟಕ್ಕೊಳಗಾದ ಕಲಬುರಗಿ ಜಿಲ್ಲೆಯ ಹೂ ಬೆಳೆಯುವ ರೈತರಿಗೆ ಗರಿಷ್ಟ 1 ಹೆಕ್ಟೇರ್ ವರೆಗೆ 25,000 ರೂ.ಗಳಂತೆ ಪರಿಹಾರ ಧನ ನೀಡಲಾಗುತ್ತಿದ್ದು, ಇದಕ್ಕಾಗಿ ಜಿಲ್ಲೆಯ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ (ಜಿ.ಪಂ.) ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
ಒಂದು ಹೆಕ್ಟೇರ್ ಗಿಂತ ಕಡಿಮೆ ವಿಸ್ತೀರ್ಣದಲ್ಲಿನ ಹೂ ಬೆಳೆಗಾರರಿಗೆ ವಿಸ್ತೀರ್ಣಕ್ಕೆ ಅನುಗುಣವಾಗಿ ಪರಿಹಾರಧನ ನೀಡಲಾಗುತ್ತದೆ. 2019-20ನೇ ಸಾಲಿನ ಬೆಳೆ ಸಮೀಕ್ಷೆಯಲ್ಲಿನ ಹೂ ಬೆಳೆಗಾರರ (ಬಹುವಾರ್ಷಿಕ ಹೂ ಬೆಳೆಗಳ ಮುಂಗಾರು ಬೆಳೆ ಸಮೀಕ್ಷೆ ಹಾಗೂ ವಾರ್ಷಿಕ ಹೂ ಬೆಳೆಗಳ ಹಿಂಗಾರು ಬೆಳೆ ಸಮೀಕ್ಷೆ) ದೃಢೀಕರಿಸಿದ ಪಟ್ಟಿಯನ್ನು ತಾಲೂಕು ಮಟ್ಟದ ತೋಟಗಾರಿಕೆ ಕಚೇರಿಗಳಲ್ಲಿ, ಗ್ರಾಮ ಪಂಚಾಯಿತಿ ಹಾಗೂ ರೈತ ಸಂಪರ್ಕ ಕೇಂದ್ರಗಳ ನಾಮಫಲಕಗಳಲ್ಲಿ ಪ್ರದರ್ಶಿಸಲಾಗುವುದು.
ಈ ಸಮೀಕ್ಷೆ ಪಟ್ಟಿಯಲ್ಲಿ ಹೆಸರು ಇರುವ ರೈತರು ಅರ್ಜಿ ಹಾಗೂ ದಾಖಲಾತಿಗಳನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಬೆಳೆ ಸಮೀಕ್ಷೆ ಪಟ್ಟಿಯಲ್ಲಿ ಹೆಸರು ಇಲ್ಲದಿರುವ ಇತರೆ ರೈತರು ಪ್ರಾಮಾಣಿಕವಾಗಿ ಹೂ ಬೆಳೆದಿದ್ದಲ್ಲಿ ಸಂಬಂಧಪಟ್ಟ ಆಯಾ ತಾಲೂಕಿನ ತೋಟಗಾರಿಕೆ ಕಚೇರಿಯಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲೆಗಳಾದ ಪಹಣಿ ಆಧಾರ್ ಕಾರ್ಡ್, ರೈತರ ಬ್ಯಾಂಕ್ ಖಾತೆ ಪಾಸ್ಬುಕ್ ಪ್ರತಿ, ಬೆಳೆಯ ಸ್ವಯಂ ದೃಢೀಕರಣದೊಂದಿಗೆ 2020ರ ಮೇ 28 ರೊಳಗಾಗಿ ಆಯಾ ತಾಲೂಕುಗಳ ತೋಟಗಾರಿಕೆ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬೇಕು.

2020ರ ಮಾರ್ಚ್ 24 ರ ನಂತರ ನಾಟಿ ಮಾಡಿರುವ ಹೂ ಬೆಳೆಗಾರರಿಗೆ ಈ ಯೋಜನೆಯಡಿ ಪರಿಹಾರಕ್ಕೆ ಪರಿಗಣಿಸಲು ಅವಕಾಶವಿರುವುದಿಲ್ಲ. ಈ ರೈತರು ತಾಕುಗಳನ್ನು ನಿಯಮಾನುಸಾರ ಹೋಬಳಿ ಮಟ್ಟದ ಜಂಟಿ ಸಮೀಕ್ಷಾ ಸಮಿತಿಯೊಂದಿಗೆ ತಾಕು ಪರಿಶೀಲಿಸಿದ ನಂತರ ಪರಿಹಾರಧನ ವಿತರಿಸಲು ಕ್ರಮವಹಿಸಲಾಗುವುದು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ರೈತರು ಆಯಾ ತಾಲೂಕುಗಳಲ್ಲಿನ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಿದೆ.[ಮಾಹಿತಿ ಕೃಪೆ: ಕಲಬುರಗಿ ವಾರ್ತೆ]
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications