ಕಲಬುರಗಿಯಲ್ಲಿ ಸಿಡಿಲಿಗೆ ರೈತ ಬಲಿ, ಇನ್ನೋರ್ವ ರೈತ ಆತ್ಮಹತ್ಯೆ
ಕಲಬುರಗಿ, ಅಕ್ಟೋಬರ್ 16: ಇಬ್ಬರು ರೈತರ ಸಾವಿಗೆ ಕಲಬುರಗಿ ಜಿಲ್ಲೆ ಸಾಕ್ಷಿಯಾಗಿದೆ. ಒಬ್ಬರು ರೈತರು ಹೊಲದಲ್ಲೇ ಸಿಡಿಲು ಬಡಿದು ಸಾವನ್ನಪ್ಪಿದ್ದರೆ, ಇನ್ನೊಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಮುಕರಂಬಾ ಗ್ರಾಮದಲ್ಲಿ ರವಿವಾರ ಮಧ್ಯಾಹ್ನ 2ಗಂಟೆ ಸಮಯಕ್ಕೆ ಸಿಡಿಲು ಬಡಿದ ಪರಿಣಾಮ ಶಂಕರಪ್ಪ ಶರಣಪ್ಪ ಕಬ್ಬಲಿಗ (48) ಮೃತಪಟ್ಟಿದ್ದಾರೆ.

ತೊಗರಿ ಹೊಲದಲ್ಲಿ ಹುಲ್ಲು ತೆಗೆದು ಹಾಕಿ ಮನೆಗೆ ಬರುವಾಗ ಘಟನೆ ನಡೆದಿದೆ. ಈ ಕುರಿತು ರಟಕಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳೆ ಹಾನಿಯಾಗಿದ್ದಕ್ಕೆ ರೈತ ಆತ್ಮಹತ್ಯೆ
ಒಂದೆಡೆ ಮಳೆ ರೈತರ ಮೊಗದಲ್ಲಿ ಮಂದಹಾಸ ತಂದಿದ್ದರೆ ಬೆಳೆ ಕಳೆದುಕೊಂಡ ರೈತರು ಮಾತ್ರ ಅತಂತ್ರರಾಗಿದ್ದಾರೆ.
ಇದೇ ಕಾರಣಕ್ಕೆ ಕಲಬುಗರಿ ತಾಲೂಕಿನ ಪಾಣೆಗಾಂವ ಗ್ರಾಮದಲ್ಲಿ ರೈತ ರೇವಣಸಿದ್ದ (37) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರೇವಣಸಿದ್ದ ಬ್ಯಾಂಕಿನಲ್ಲಿ 6 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಈ ವರ್ಷವಾದರೂ ಬೆಳೆ ಬಂದು ಸಾಲ ತೀರಿಸುವ ಕನಸನ್ನು ರೇವಣಸಿದ್ದ ಕಂಡಿದ್ದರು. ಆದರೆ ಮಳೆಯಿಂದ ಬೆಳೆ ಕೊಚ್ಚಿಹೋಗಿತ್ತು.

ಇದರಿಂದ ನೊಂದು ಭಾನುವಾರ ವಿಷ ಸೇವಿಸಿ ರೇವಣಸಿದ್ಧ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷ ಸೇವಿಸಿದ ಸುದ್ದಿ ಗೊತ್ತಾದ ತಕ್ಷಣ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾಣದೇ ರೇವಣಸಿದ್ಧ ಸಾವನ್ನಪ್ಪಿದ್ದಾರೆ.
ಫರಹತಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಅನೈತಿಕ ಸಂಬಂಧಕ್ಕೆ ವ್ಯಕ್ತಿ ಬಲಿ
ಅನೈತಿಕ ಸಂಬಂಧ ಹಿನ್ನಲೆಯಲ್ಲಿ ವ್ಯಕ್ತಿಯೋರ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಗರದ ಹೊರವಲಯದ ಜಾಪೂರದಲ್ಲಿ ನಡೆದಿದೆ.
ಚಿತ್ತಾಪೂರ ಪಟ್ಟಣ್ಣದ ನಿವಾಸಿ ಬಸವರಾಜ ಕಾಸಿ (30) ಕೊಲೆಯಾದ ವ್ಯಕ್ತಿಯಾಗಿದ್ದಾರೆ.

ಬಸವರಾಜ ಕಾಸಿ ವಿವಾಹಿತ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದರು ಎಂಬ ಆರೋಪದ ಮೇಲೆ ಮಹಿಳೆಯ ಮೈದುನ ಹಾಗೂ ಮೈದುನನ ಸ್ನೇಹಿತರು ಬಡಿಗೆಗಳಿಂದ ಹೊಡೆದು ಕೊಲೆ ಮಾಡಿದ್ದಾರೆ. ಶನಿವಾರ ಸಂಜೆಯೇ ಕೊಲೆ ಮಾಡಿ ನಂತರ ಟವೇರಾ ವಾಹನದಲ್ಲಿ ಶವ ಹಾಕಿ, ವಾಹನವನ್ನು ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ.
ಈ ಪ್ರಕರಣವು ಎಂ.ಬಿ.ನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications