ನನ್ನ ರಕ್ತದ ಕಣಕಣದಲ್ಲೂ ಕನ್ನಡ ಇದೆ: ಸಚಿವ ನಾರಾಯಣಗೌಡ
ಬಾಗಲಕೋಟೆ, ಫೆಬ್ರವರಿ 28: ನನ್ನ ರಕ್ತದ ಕಣಕಣದಲ್ಲೂ ಕನ್ನಡ ಇದೆ. ನಾನೊಬ್ಬ ಅಪ್ಪಟ ಕನ್ನಡಿಗ. ನಾನೊಬ್ಬ ಬಡ ಕುಟುಂಬದಲ್ಲಿ ಜನ್ಮ ಪಡೆದು, ಹೊಟ್ಟೆ ಬಟ್ಟೆಗಾಗಿ ಮಹಾರಾಷ್ಟ್ರಕ್ಕೆ ಹೋದವನು. ಮಹಾರಾಷ್ಟ್ರ ನನಗೆ ಅನ್ನ ಕೊಟ್ಟಿದೆ, ಬೆಳೆದಿದ್ದೀವಿ. ನಾನೊಬ್ಬನೆ ಅಲ್ಲ, ಮುಂಬೈಯಲ್ಲಿ 27 ಲಕ್ಷ ಜನ ಕನ್ನಡಿಗರಿದ್ದೇವೆ ಎಂದು ತೋಟಗಾರಿಕೆ ಸಚಿವ ಕೆ.ಸಿ.ನಾರಾಯಣಗೌಡ ಸ್ಪಷ್ಟನೆ ನೀಡಿದರು.
ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವವನನ್ನು ಸಚಿವ ಡಾ. ಕೆ ಸಿ ನಾರಾಯಣಗೌಡ ಉದ್ಘಾಟಿಸಿ, ಬಳಿಕ ಸಚಿವರು ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ತೋಟಗಾರಿಕೆ ಬಿಎಸ್ಸಿಯಲ್ಲಿ ಸುಷ್ಮಾ ಕೆ.ಎಂ. 15 ಚಿನ್ನದ ಪದಕ ಪಡೆದಿದ್ದಾರೆ. ವಿವಿಧ ವಿಭಾಗದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸಚಿವರು ಪದಕ ಪ್ರದಾನ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಸಚಿವರು ಮಾತನಾಡಿದರು.

ವಿವಾದಾತ್ಮಕ "ಜೈ ಮಹಾರಾಷ್ಟ್ರ' ಎಂದು ಹೇಳಿದ್ದರ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಮಹಾರಾಷ್ಟ್ರದಲ್ಲಿ ಬೆಳಿಗ್ಗೆ ಸಾಯಂಕಾಲ ಕನ್ನಡದಲ್ಲೇ ಕಾರ್ಯಕ್ರಮ ಮಾಡುತ್ತೇವೆ. ಕನ್ನಡವನ್ನೇ ನಾವು ಹೊಗಳುತ್ತೇವೆ. ಮೊನ್ನೆ ಅದು 17 ರಾಜ್ಯಗಳ ಡೆಲಿಗೇಟ್ಸ್ ಬಂದಿದ್ದರು. ನಾನೂ ಅಲ್ಲಿ ಎಲ್ಲ ರಾಜ್ಯಗಳನ್ನು ಹೊಗಳಿ ಮಾತನಾಡಿದ್ದೇನೆ ಎಂದು ಸ್ಪಷ್ಟನೆ ನೀಡಿದರು.
ನಾನು ಕೇವಲ ಮಹಾರಾಷ್ಟ್ರ ಅಷ್ಟೇ ಹೊಗಳಿಲ್ಲ. ಯಾರೋ ಕಿಡಿಗೇಡಿಗಳು ಕೇವಲ ಆ ವಿಡಿಯೋ ತುಣುಕನ್ನಷ್ಟೇ ಕಟ್ ಮಾಡಿ ತೋರಿಸಿದ್ದಾರೆ. ನನ್ನ ರಕ್ತದಲ್ಲಿ ಕನ್ನಡ ಅನ್ನೋದು ಇದೆ. ನಾನೊಬ್ಬ ಕನ್ನಡಿಗ. ಕರುನಾಡೇ ನನ್ನ ಕರ್ಮಭೂಮಿ ಎಂದು ಸಚಿವರು ಹೇಳಿದ್ದಾರೆ.
ಇನ್ನು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ನೇಮಕ ವಿಚಾರದ ಬಗ್ಗೆ ಮಾತನಾಡಿದ ಸಚಿವರು, ಈಗಷ್ಟೇ ಇಲಾಖೆ ಜವಾಬ್ದಾರಿ ವಹಿಸಿಕೊಂಡಿದ್ದೇನೆ. ಈ ಬಗ್ಗೆ ಸಿಎಂ ಯಡಿಯೂರಪ್ಪ ಜೊತೆ ಮಾತನಾಡಿ ಶೀಘ್ರ ನೇಮಕ ಮಾಡಲಾಗುವುದು ಎಂದು ಸಚಿವರು ಹೇಳಿದರು.
-
Vijay Sethupathi: ರಿಷಬ್ ಶೆಟ್ಟಿ ಜೊತೆ ನಟಿಸುವ ದೊಡ್ಡ ಆಸೆ ನನಗಿದೆ: ಆಸೆ ಬಿಚ್ಚಿಟ್ಟ ನಟ ವಿಜಯ್ ಸೇತುಪತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications