ಬಳ್ಳಾರಿ : ಕಂಪ್ಲಿಯಲ್ಲಿ ಕಾರಹುಣ್ಣಿಮೆ ಹಬ್ಬದ ಸಂಭ್ರಮ
ಬಳ್ಳಾರಿ, ಜೂ.14 : ರೈತರ ಪಾಲಿನ ಮಹತ್ವದ ಹಬ್ಬವಾದ ಕಾರಹುಣ್ಣಿಮೆಯನ್ನು ಬಳ್ಳಾರಿಜಿಲ್ಲೆಯ ಕಂಪ್ಲಿ ಪಟ್ಟಣದ ವಿವಿಧ ಅಗಸಿಗಳಲ್ಲಿ ವಿಜೃಂಭಣೆಯಿಂದ ಆಚರಣೆಮಾಡಿದರು. ವರುಣದೇವ ಹಬ್ಬದ ಆಚರಣೆಗೆ ಸ್ಪಲ್ಪ ತೊಂದರೆ ಉಂಟುಮಾಡಿದರು, ಜನರು ಮಳೆಯನ್ನು ಲೆಕ್ಕಿಸಿದೆ ಹಬ್ಬದಲ್ಲಿ ಸಂಭ್ರಮಿಸಿದರು.
ಕಂಪ್ಲಿ ಪಟ್ಟಣದ ಮಾರೆಮ್ಮ ಗುಡಿಯ ಅಗಸಿ, ಬೆಳಗೋಡುಹಾಳು ಅಗಸಿ, ತಳವಾರು ಓಣಿ ಅಗಸಿ, ಮುದ್ದಾಪುರ ಅಗಸಿ ಮತ್ತು 4ನೇ ವಾರ್ಡಿನ ಅಗಸಿಯಲ್ಲಿ ರೈತರು ತಮ್ಮ ಕೃಷಿ ಚಟುವಟಿಕೆ ಸಂಗಾತಿಗಳಾದ ಎತ್ತುಗಳನ್ನು ಶುಭ್ರವಾಗಿ ತೊಳೆದು, ಅವುಗಳ ಕೋಡುಗಳನ್ನು ಕೆತ್ತಿಸಿ, ಅವುಗಳಿಗೆ ವೈವಿದ್ಯಮಯ ಬಣ್ಣಗಳನ್ನು ಹಚ್ಚಿಸಿ ಅವುಗಳಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.

ಹಬ್ಬದ ಅಂಗವಾಗಿ ಸಂಜೆ ಪಟ್ಟಣದ ಅಗಸಿಯಲ್ಲಿ ಎತ್ತುಗಳಿಗೆ ಗೆಜ್ಜೆ, ಕೋಡಣಸು, ಗಗ್ರಿಗಳನ್ನು ಹಾಕಿ, ವಿಶೇಷವಾಗಿ ತಯಾರಿಸಲಾದ ಜೂಲಗಳಿಂದ ಶೃಂಗರಿಸಿ ಓಟದ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಓಟದ ಸ್ಪರ್ಧೆ ಆರಂಭವಾದ ತಕ್ಷಣ ಮಳೆರಾಯ ತನ್ನ ಪ್ರತಾಪ ತೋರಿಸಲು ಆರಂಭಿಸಿದನು. ಬಿರುಬಿಸಿಲಿಗೆ ರೋಸಿಹೋಗಿದ್ದ ಜನತೆಗೆ ಮಳೆ ತಂಪೆರೆಯಿತು. [ಕಾರಹುಣ್ಣಿಮೆ: ಎತ್ತುಗಳಿಗೆ ಇದೇನು ಮಾಡ್ತಿದ್ದಾರೆ ನೋಡಿ!]
4ನೇ ವಾರ್ಡಿನಲ್ಲಿ ನಡೆದ ಓಟದ ಸ್ಪರ್ಧೆಯಲ್ಲಿ ನೂರ್ ಎನ್ನುವವರ ಎತ್ತುಗಳು ಪ್ರಥಮ ಸ್ಥಾನವನ್ನು ಹಾಗೂ ಬಲಕುಂದಿ ವೀರಭದ್ರಪ್ಪ ಎನ್ನುವವರ ಎತ್ತುಗಳು ದ್ವಿತೀಯ ಸ್ಥಾನವನ್ನು ಪಡೆದವು. ಎತ್ತುಗಳ ಮಾಲೀಕರಿಗೆ ಪುರಸಭೆಯ ಸದಸ್ಯ ಸಿ.ಆರ್.ಹನುಮಂತ ಅವರು ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕವನ್ನು ನೀಡಿದರು.

ಮಾರೆಮ್ಮನ ಗುಡಿ ಅಗಸಿಯಲ್ಲಿಯೂ ಹಬ್ಬದ ಸಂಭ್ರಮ ಜೋರಾಗಿತ್ತು. ಎತ್ತುಗಳನ್ನು ಹಲವು ವಿಧಗಳಲ್ಲಿ ಸಿಂಗರಿಸಿ ಮಾರೆಮ್ಮ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕಂಪ್ಲಿ ಪುರಸಭೆಯ ಮಾಜಿ ಸದಸ್ಯರಾದ ಎಂ.ಗೋಪಾಲ್, ಎಂ.ಸಿ. ಮಾಯಪ್ಪ, ಹಬೀಬ್ ರೆಹಮಾನ್ ಸೇರಿದಂತೆ ಅನೇಕರು ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications