ಕರಾವಳಿ ತೆಂಗು ಬೆಳೆಗಾರರನ್ನು ಕಂಗೆಡಿಸಿದ 'ಹಳದಿ ರೋಗ'
ಮಂಗಳೂರು, ಜನವರಿ. 14 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೆಂಗಿನ ಹುಳಬಾಧೆ ಮತ್ತೆ ಕಂಡುಬಂದಿದೆ. ಇದರಿಂದ ರೈತರ ಆತಂಕಕ್ಕೆ ಕಾರಣವಾಗಿದೆ. ಕೇರಳ ಜಿಲ್ಲೆ ಸೇರಿದಂತೆ ಕರಾವಳಿಯ ಹಲವೆಡೆಗಳಲ್ಲಿ ತೆಂಗುಗಳು ಹಳದಿ ಬಣ್ಣಕ್ಕೆ ತಿರುಗಿವೆ.
ಕೆಲ ವರ್ಷಗಳ ಹಿಂದೆ ಕಂಡು ಬಂದ ಬಳಿಕ ದೂರವಾಗಿದ್ದ ಹುಳಬಾಧೆ ಇದೀಗ ಬಿಸಿಲ ತಾಪಕ್ಕೆ ಮತ್ತೆ ಹೆಚ್ಚಾಗಿದೆ. ಆರಂಭದಲ್ಲೇ ಈ ಕೀಟಬಾಧೆಗೆ ಕಡಿವಾಣ ಹಾಕದಿದ್ದಲ್ಲಿ ಇದು ತೆಂಗಿಗೆ ಮಾರಕವಾಗಿ ಪರಿಣಮಿಸಲಿದೆ.
ಕಾಸರಗೋಡು ಸುತ್ತಮುತ್ತಲಿನ ನೀಲೇಶ್ವರ, ಕಾಪಾಡ್, ಪರಪ್ಪನಂಗಡಿ ಮೊದಲಾದ ಪ್ರದೇಶಗಳಲ್ಲಿ ಈ ಕೀಟಬಾಧೆ ಕಾಣಿಸಿಕೊಂಡಿದೆ. ಇದು ಮಂಗಳೂರಿನ ಸುತ್ತ- ಮುತ್ತಲೂ ಕಾಣಿಸಿಕೊಂಡಿದೆ. ಇದೀಗ ದ.ಕ. ಜಿಲ್ಲೆಯ ಉಳ್ಳಾಲದಲ್ಲೂ ಈ ಕೀಟಬಾಧೆ ಪತ್ತೆಯಾಗಿದೆ.

ರೋಗದ ಲಕ್ಷಣಗಳೇನು.? ವೇಗವಾಗಿ ಒಂದು ಮರದಿಂದ ಇನ್ನೊಂದು ಮರಕ್ಕೆ ಈ ಕೀಟಬಾಧೆ ಹರಡುತ್ತಿದೆ. ಈ ರೋಗ ಕಾಣಿಸಿಕೊಂಡಲ್ಲಿ ತೆಂಗಿನ ಗರಿಗಳು ಸಂಪೂರ್ಣವಾಗಿ ಹಳದಿ ಬಣ್ಣಕ್ಕೆ ತಿರುಗಿ ಫಸಲು ಸಂಪೂರ್ಣ ಕುಸಿಯುತ್ತದೆ.
ತೆಂಗಿನಗರಿಗಳ ಅಡಿಭಾಗದಲ್ಲಿ ಹುಳಗಳು ಉತ್ಪತ್ತಿಯಾಗುತ್ತಿದ್ದು, ಇದು ಕ್ಷಿಪ್ರವಾಗಿ ವೇಗವಾಗಿ ಹರಡುತ್ತಿದೆ. ಆದರೆ, ಈ ಕೀಟಬಾಧೆ ಎಲ್ಲೆಡೆ ಹರಡುತ್ತಿದ್ದರೂ ಕೃಷಿ ಇಲಾಖೆ ಇದರ ನಿಯಂತ್ರಣಕ್ಕೆ ಇನ್ನೂ ಕ್ರಮ ತೆಗೆದುಕೊಂಡಿಲ್ಲ ಎಂದು ಕೃಷಿಕರು ಆರೋಪಿಸುತ್ತಿದ್ದಾರೆ.
ಈ ಮಧ್ಯೆ ಕೇಂದ್ರ ತೋಟಗಾರಿಕಾ ಸಂಶೋಧನಾ ಕೇಂದ್ರವು ಈ ರೋಗದ ನಿಯಂತ್ರಣಕ್ಕೆ ಗಂಭೀರವಾಗಿ ಚಿಂತನೆ ನಡೆಸಿದೆ. ಇದಕ್ಕಾಗಿ ರೋಗ ನಿಯಂತ್ರಣ ಕುರಿತು ಈಗಾಗಲೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ಆದರೂ ಕೀಟಬಾಧೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications