ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಪ್ರತಿಭಟನೆ: ಕರ್ನಾಟಕ ರಕ್ಷಣಾ ವೇದಿಕೆ ರಣದೀರ ಪಡೆಯ ಕಾರ್ಯಕರ್ತರು ಪೊಲೀಸರ ವಶಕ್ಕೆ
ಬೆಂಗಳೂರು, ಸೆಪ್ಟೆಂಬರ್ 28: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೃಷಿ ಮತ್ತು ಎಪಿಎಂಸಿಗೆ ಸಂಬಂಧಿಸಿದ ತಿದ್ದುಪಡಿ ಮಸೂದೆಗಳನ್ನು ಖಂಡಿಸಿ ಇಂದು ವಿವಿಧ ರೈತ ಸಂಘಟನೆಗಳು ಕರೆ ನೀಡಿರುವ ಬಂದ್ಗೆ ಬೆಂಬಲಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರವು ರೈತ ವಿರೋಧಿ ಮಸೂದೆಯನ್ನು ಜಾರಿಗೆ ತಂದಿದೆ ಎಂದು ವಿರೋಧಿಸಿ ರೈಲ್ವೇ ನಿಲ್ದಾಣದ ಮುತ್ತಿಗೆಗೆ ಪ್ರಯತ್ನಿಸಿದರು. ಮೆಜೆಸ್ಟಿಕ್ನಲ್ಲಿ ಬಸ್ಗಳು ಮುಂದೆ ಹೋಗದಂತೆ ಮನವಿ ಮಾಡಿದರು. ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ರಣದೀರ ಪಡೆಯ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
Comments
English summary
As various organisation called for Karnataka bandh today , Karnataka rakshana vedike members were detained by police near Kranthiveera sangolli rayanna railway station