ಸೆ. 28ರ ಕರ್ನಾಟಕ ಬಂದ್; ಕೆಎಸ್ಆರ್ಟಿಸಿಯ ಪ್ರಕಟಣೆ
ಬೆಂಗಳೂರು, ಸೆಪ್ಟೆಂಬರ್ 27: ರೈತ, ದಲಿತ, ಕಾರ್ಮಿಕರ ಸಂಘಟನೆಗಳು ಒಟ್ಟಾಗಿ 'ಐಕ್ಯ ಹೋರಾಟ ಸಮಿತಿ' ಎಂಬ ಹೆಸರಿನಲ್ಲಿ ಕರ್ನಾಟಕ ಬಂದ್ಗೆ ಕರೆ ನೀಡಿವೆ. ಸೆಪ್ಟೆಂಬರ್ 28ರ ಸೋಮವಾರ ಬೆಳಗ್ಗೆ 6 ರಿಂದ ಸಂಜೆ 6ರ ತನಕ ಬಂದ್ ನಡೆಯಲಿದೆ.
ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಕೆಎಸ್ಆರ್ಟಿಸಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. 'ಬಂದ್ಗೆ ಸಂಬಂಧಪಟ್ಟಂತೆ, ಕೆಎಸ್ಆರ್ಟಿಸಿ ಬಸ್ಸುಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ, ಎಂದಿನಂತೆ ಕಾರ್ಯಾಚರಣೆ ಇರಲಿದೆ' ಎಂದು ಹೇಳಿದೆ.
ಸೋಮವಾರ ಕರ್ನಾಟಕ ಬಂದ್; ಏನಿರುತ್ತೆ, ಏನಿರಲ್ಲ?
'ಪ್ರಯಾಣಿಕರಲ್ಲಿ ಯಾವುದೇ ಗೊಂದಲ ಹಾಗೂ ಆತಂಕ ಬೇಡ. ಸಾರಿಗೆ ವ್ಯವಸ್ಥೆಯು ಅಗತ್ಯ ಸೇವೆಯಾಗಿರುವುದರಿಂದ, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾಗದಂತೆ, ಪ್ರಯಾಣಿಕರ ಬೇಡಿಕೆ ಹಾಗೂ ಅಗತ್ಯನುಸಾರ ಬಸ್ಸುಗಳ ಕಾರ್ಯಾಚರಣೆಯನ್ನು ಮಾಡಲಾಗುವುದು' ಎಂದು ಸ್ಪಷ್ಟಪಡಿಸಲಾಗಿದೆ.
ರೈತರ ಜೊತೆಗಿನ ಸಿಎಂ ಸಭೆ ವಿಫಲ; ಸೋಮವಾರ ಕರ್ನಾಟಕ ಬಂದ್
ಆದ್ಯ ಗಮನಕ್ಕೆ:
— KSRTC (@KSRTC_Journeys) September 27, 2020
ನಾಳೆಯ ಬಂದ್ ಗೆ ಸಂಬಂಧಪಟ್ಟಂತೆ, ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ, ಎಂದಿನಂತೆ ಕಾರ್ಯಾಚರಣೆ ಇರಲಿದೆ.
ಪ್ರಯಾಣಿಕರಲ್ಲಿ ಯಾವುದೇ ಗೊಂದಲ ಹಾಗೂ ಆತಂಕ ಬೇಡ.
(1/2)
ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ, ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಬಂದ್ಗೆ ಕರೆ ನೀಡಿರುವ ವಿವಿಧ ಸಂಘಟನೆಗಳ ನಿಯೋಗದ ಜೊತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನಡೆಸಿದ ಸಭೆ ವಿಫಲವಾಗಿದೆ.
ಶಿವಮೊಗ್ಗ: ಸೋಮವಾರದ ಕರ್ನಾಟಕ ಬಂದ್ ಗೆ ಸಹಕರಿಸಲು ರೈತ ಸಂಘ ಕರೆ
ರೈತರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದ ಹಿನ್ನಲೆಯಲ್ಲಿ ಸಭೆ ವಿಫಲವಾಯಿತು. ಸಭೆ ವಿಫಲವಾದ ಹಿನ್ನಲೆಯಲ್ಲಿ ಕರ್ನಾಟಕ ಬಂದ್ ನಡೆಸುವ ತೀರ್ಮಾನವನ್ನು ಕೈಗೊಳ್ಳಲಾಗಿದೆ.