ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಇಂದು ಸೆಪ್ಟೆಂಬರ್ 28ರ ಸೋಮವಾರ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು. ರೈತರು ಕರೆ ನೀಡಿರುವ ಬಂದ್ಗೆ ಕನ್ನಡಪರ ಸಂಘಟನೆಗಳು ಸೇರಿದಂತೆ ರಾಜ್ಯ ವಿವಿಧ ಸಂಘಟನೆಗಳು ಬೆಂಬಲ ಘೋಷಣೆ ಮಾಡಿವೆ.
ರೈತ, ದಲಿತ, ಕಾರ್ಮಿಕರ ಸಂಘಟನೆಗಳು ಒಟ್ಟಾಗಿ "ಐಕ್ಯ ಹೋರಾಟ ಸಮಿತಿ' ಎಂಬ ಹೆಸರಿನಲ್ಲಿ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಸೋಮವಾರ ಬೆಳಗ್ಗೆ 6 ರಿಂದ ಸಂಜೆ 6ರ ತನಕ ಬಂದ್ ನಡೆಯಲಿದೆ. ತುರ್ತು ಸೇವೆಗಳಿಗೆ ಬಂದ್ನಿಂದ ವಿನಾಯಿತಿ ನೀಡಲಾಗಿದೆ. ಶುಕ್ರವಾರ ಮುಖ್ಯಮಂತ್ರಿಗಳ ಜೊತೆಗಿನ ಸಭೆ ವಿಫಲವಾದ ಹಿನ್ನಲೆಯಲ್ಲಿ ಕರ್ನಾಟಕ ಬಂದ್ ನಡೆಸುವ ತೀರ್ಮಾನವನ್ನು ಕೈಗೊಳ್ಳಲಾಗಿದೆ.
ಈಗಾಗಲೇ ಮೈಸೂರಿನ ಬಂಡಿಪಾಳ್ಯದ ಎಪಿಎಂಸಿ ಮಾರುಕಟ್ಟೆ ಬಂದ್ ಮಾಡಿ, ವರ್ತಕರ ಸಂಘ, ಕಾರ್ಮಿಕರ ಸಂಘಟನೆ, ದಲಿತ ಸಂಘರ್ಷ ಸಮಿತಿಯಿಂದಲೂ ಬೆಂಬಲ ಸಿಕ್ಕಿದೆ.
ಮೈಸೂರು ಜಿಲ್ಲಾ ಕಾಂಗ್ರೆಸ್, ಜೆಡಿಎಸ್, ರೈತ, ಕಾರ್ಮಿಕ, ದಲಿತ ಸಂಘಟನೆಗಳಿಂದ ಕರ್ನಾಟಕ ಬಂದ್ ಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ. ಕೃಷಿ ಮಸೂದೆಗಳನ್ನು ವಿರೋಧಿಸಿ ಐಕ್ಯ ಹೋರಾಟಕ್ಕೆ ಹೋಟೆಲ್ ಮಾಲೀಕರ ಸಂಘ, ಕ್ಯಾಬ್, ಟ್ಯಾಕ್ಸಿ, ಲಾರಿ ಮಾಲೀಕರು ಸೇರಿ ಹಲವರಿಂದ ಬೆಂಬಲ ವ್ಯಕ್ತವಾಗಿದೆ.
Sep 28, 2020, 6:24 pm IST
ರೈತ ಹಾಗೂ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಖಂಡಿಸಿ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ದಾವಣಗೆರೆಯಲ್ಲಿ ರೈತ, ಕಾರ್ಮಿಕ ಮತ್ತು ಕನ್ನಡಪರ ಸಂಘಟನೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೀದಿಗಿಳಿದು ದಾವಣಗೆರೆ ಬಂದ್ ಗೆ ಮುಂದಾಗುವ ಜೊತೆಗೆ ವಿನೂತನ ಹೋರಾಟಗಳ ಮುಖೇನ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
Sep 28, 2020, 5:41 pm IST
ಚಾಮರಾಜನಗರ: ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ, ದಲಿತ, ಕಾರ್ಮಿಕ, ಐಕ್ಯ ಸಂಘಟನೆಗಳು ಇಂದು ಕೊಳ್ಳೇಗಾಲ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದವು. ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತರ ಪ್ರತಿಭಟನೆ ಇದೇ ವೇಳೆ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ, ಪಿಎಂ ಮೋದಿ ವೇಷ ಧರಿಸಿ ರೈತನ ಎದೆ ಮೇಲೆ ಕಲ್ಲು ಇಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಯಿತು.
Sep 28, 2020, 5:24 pm IST
ಶಿವಮೊಗ್ಗ: ಕೃಷಿ ಸಂಬಂಧಿ ಮಸೂದೆಗಳಿಗೆ ತಿದ್ದುಪಡಿ ಮಾಡುತ್ತಿರುವುದನ್ನು ವಿರೋಧಿಸಿ ರೈತ ಸಂಘಟನೆ ಮತ್ತು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದವು. ಇದಕ್ಕೆ ಮುಖ್ಯಮಂತ್ರಿ ತವರು ಜಿಲ್ಲೆ ಶಿವಮೊಗ್ಗದಲ್ಲಿ ಸಫಲವಾಗಲಿಲ್ಲ. ಕೇವಲ ಮೆರವಣಿಗೆ ವೇಳೆ ನಗರದಲ್ಲಿ ಅಂಗಡಿ-ಮುಂಗಟ್ಟುಗಳು ಮುಚ್ಚಿದ್ದವು. ಮೆರವಣಿಗೆ ನಂತರ ಎಂದಿನಂತೆ ಎಲ್ಲ ಚಟುವಟಿಕೆಗಳು ನಡೆದವು.
Sep 28, 2020, 4:50 pm IST
ಚಿಕ್ಕಮಗಳೂರು: ಕರ್ನಾಟಕ ಬಂದ್ ನ್ನು ಜನತೆ ತಿರಸ್ಕಾರ ಮಾಡಿದ್ದಾರೆ, ರೈತರು ನಮ್ಮ ಜೊತೆ ಇದ್ದಾರೆ ಎಂದು ಸಚಿವ ಸಿ.ಟಿ.ರವಿ ಹೇಳಿಕೆ. ಇಂದು ಕಾಂಗ್ರೆಸ್, ಜನತಾ ದಳ ದಲ್ಲಾಳಿಗಳ ಪರ ಹೋರಾಟ ಮಾಡಿದ್ದಾರೆ. ದಲ್ಲಾಳಿಗಳ ಪರ ಮಾತನಾಡುವವರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದ ಸಚಿವ. ಮೊದಲು ದಲ್ಲಾಳಿಗಳು ಬಲಿತುಕೊಂಡಿದ್ದರು, ಈಗ ರೈತ ಬಲಿತುಕೊಳ್ಳುತ್ತಾನೆ. ಶೇಕಡ 90ರಷ್ಟು ರೈತರು ಬಿಜೆಪಿ ಜೊತೆ ಇದ್ದಾರೆ. ಹಾಗಾಗಿ ಯಾರು ಕೂಡ ಇಂದು ಬೀದಿಗೆ ಇಳಿದಿಲ್ಲ. ಪ್ರತಿದಿನ ಬಿಜೆಪಿಯನ್ನು ವಿರೋಧಿಸುವ ಒಂದು ವರ್ಗದ ಜನ ಇಂದು ಬೀದಿಗಿಳಿದಿದ್ದಾರೆ ಎಂದು ಸಚಿವ ಸಿ.ಟಿ.ರವಿ ಹೇಳಿದರು.
Sep 28, 2020, 4:40 pm IST
ತುಮಕೂರು: ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತ ಸಂಘ ಹಾಗೂ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ತುಮಕೂರು ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಬೆಳಿಗ್ಗೆಯಿಂದಲೇ ಬಸ್, ಆಟೋ ಸಂಚಾರ ಯಥಾಸ್ಥಿತಿಯಲ್ಲಿತ್ತು. ಅಂಗಡಿ-ಮುಂಗಟ್ಟುಗಳು ಎಂದಿನಂತೆ ತೆರೆದು ವ್ಯಾಪಾರ ವಹಿವಾಟು ನಡೆಯುತ್ತಿವೆ.
Sep 28, 2020, 4:16 pm IST
ಭೂಸುಧಾರಣೆ ಮತ್ತು ಎಪಿಎಂಸಿ ಮಸೂದೆ ರೈತ ವಿರೋಧಿಯಾಗಿದೆ. ಸುಗ್ರೀವಾಜ್ಞೆ ತಂದು ತರಾತುರಿಯಲ್ಲಿ ಭೂ ಸುಧಾರಣೆ ಕಾಯ್ದೆ ಜಾರಿ ತರುವ ಅವಶ್ಯಕತೆ ಏನಿತ್ತು. ಈ ಮಸೂದೆ ಸಂಪೂರ್ಣ ರೈತ ವಿರೋಧಿಯಾಗಿದೆ. ಈ ಕೂಡಲೆ ಈ ಮಸೂದೆಯನ್ನು ಹಿಂದಕ್ಕೆ ತೆಗೆದುಕೊಳ್ಳದಿದ್ದರೆ, ರೈತರ ಆಕ್ರೋಶಕ್ಕೆ ಪತನವಾದ ಮಾಜಿ ಸಿಎಂ ಗುಂಡೂರಾವ್ ಸರ್ಕಾರದಂತೆ ಸ್ಥಿತಿ ಈ ಸರ್ಕಾರಕ್ಕೆ ಬರಲಿದೆ ಎಂದು ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
Sep 28, 2020, 3:56 pm IST
ರಾಮನಗರ: ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆ ಹಾಗೂ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ರೇಷ್ಮೆನಗರಿ ರಾಮನಗರ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ, ತಿದ್ದುಪಡಿ ವಾಪಸ್ಸು ಪಡೆಯುವವರೆಗೂ ನಿರಂತರ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ.
ಬಂದ್ ಗೆ ರಾಮನಗರ ಜಿಲ್ಲೆಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಬೆಳಗ್ಗೆಯಿಂದಲೆ ಸ್ವಯಂ ಘೋಷಿತವಾಗಿ ಅಂಗಡಿ-ಮುಗ್ಗಟ್ಟು ಮುಚ್ಚಿ ರೈತರ ಹೋರಾಟಕ್ಕೆ ವರ್ತಕರು ಬಂದ್ ಗೆ ಸಾಥ್ ನೀಡಿದರು. ಪ್ರತಿಭಟನೆಗೆ ರೈತ ಸಂಘ, ಕರವೇ, ಜಯಕರ್ನಾಟಕ, ಕರುನಾಡ ಸೇನೆ ಸೇರಿದಂತೆ 20ಕ್ಕೂ ಹೆಚ್ಚು ವಿವಿಧ ಕನ್ನಡಪರ ಸಂಘಟನೆಗಳು ಕೂಡ ಸಾಥ್ ನೀಡಿದ್ದವು.
Sep 28, 2020, 3:47 pm IST
ಯಾದಗಿರಿ: ದೇಶವ್ಯಾಪಿ ರೈತ ಸಂಘಟನೆ ಸೇರಿದಂತೆ ವಿವಿಧ ಕಾರ್ಮಿಕ, ಕನ್ನಡಪರ ಸಂಘಟನೆಗಳು ಕರೆದ ಕರ್ನಾಟಕ ಬಂದ್ ಯಾದಗಿರಿ ನಗರದಲ್ಲಿ ಬಹುತೇಕ ಯಶಸ್ವಿಯಾಗಿ ಕಂಡುಬಂದಿತು. ಬೆಳಿಗ್ಗೆಯಿಂದಲೆ ವಿವಿಧ ಸಂಘಟನೆಗಳು ಅಂಗಡಿ-ಮುಂಗಟ್ಟುಗಳನ್ನು ಮುಚ್ಚುವಂತೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ವ್ಯಾಪಾರಸ್ಥರು ತಮ್ಮ ಮಹಿವಾಟನ್ನು ಬಂದ್ ಮಾಡಿ ಸಹಕಾರ ನೀಡಿದರು.
Sep 28, 2020, 3:31 pm IST
ಕೇಂದ್ರ ಹಾಗೂ ರಾಜ್ಯ ಸರಕಾರದ ರೈತ ವಿರೋಧಿ ನೀತಿ ವಿರುದ್ಧ ರೈತ ಸಂಘಟನೆಗಳು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಬೆಂಗಳೂರಿನ ಕಾಂಗ್ರೆಸ್ ಭವನದ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಮತ್ತಿತರರು ಭಾಗವಹಿಸಿದ್ದರು.
Sep 28, 2020, 3:15 pm IST
ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ರೈತ ವಿರೋಧಿಯಾಗಿದೆ. ಇವುಗಳನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಬೆಂಗಳೂರಿನ ಮೆಜೆಸ್ಟಿಕ್ನಲ್ಲಿ ಕತ್ತೆಯ ಮೇಲೆ ಸವಾರಿ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.
Sep 28, 2020, 2:59 pm IST
ಬೆಂಗಳೂರು: ವಿವಿಧ ರೈತ ಹಾಗೂ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್ ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಪ್ರತಿಷ್ಠಿತ ಕೆ.ಆರ್ ಮಾರುಕಟ್ಟೆಯಲ್ಲಿ ಗ್ರಾಹಕರಿಲ್ಲದೆ ಭಣಗುಡುತ್ತಿತ್ತು. ಹೀಗಾಗಿ ಬೀದಿ ಬದಿಯ ವ್ಯಾಪಾರಿಗಳು ಗ್ರಾಹಕರಿಗಾಗಿ ಕಾದು ಸುಸ್ತಾಗಿ ತರಕಾರಿ ಇದ್ದ ಗೋಣಿಚೀಲದ ಮೇಲೆ ತಲೆಯಿಟ್ಟು ನಿದ್ದೆ ಮಾಡಿದರು.
Sep 28, 2020, 2:39 pm IST
ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಜಿಲ್ಲಾ ರಂಗಮಂದಿರದಿಂದ ಪ್ರತಿಭಟನಾ ಮೆರವಣಿಗೆ ಆರಂಭ. ಪ್ರತಿಭಟನೆಗೆ ಸಿಐಟಿಯು, ದಲಿತ ರಕ್ಷಣಾ ವೇದಿಕೆ, ವಾಟಾಳ್ ಪಕ್ಷ, ಯೂಥ್ ಕಾಂಗ್ರೆಸ್ ಬೆಂಬಲ. ವಿವಿಧ ಸಂಘಟನೆಗಳೊಂದಿಗೆ ಸರ್ಕಾರದ ವಿರುದ್ಧ ಪ್ರತಿಭಟನಾ ಜಾಥಾ, ಎಪಿಎಂಸಿ, ಭೂ ಸುಧಾರಣೆ ಕಾಯ್ದೆ ವಿರೋಧಿಸಿ ಘೋಷಣೆ. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಿರುವ ಪ್ರತಿಭಟನಾ ನಿರತರು.
Sep 28, 2020, 2:22 pm IST
ಕಾರವಾರದಲ್ಲಿ ಪ್ರತಿಭಟನಾಕಾರರಿಂದ ಹೆದ್ದಾರಿ ತಡೆ. ನಗರದ ರಾಷ್ಟ್ರೀಯ ಹೆದ್ದಾರಿ 66ರ ಲಂಡನ್ ಬ್ರಿಡ್ಜ್ ಬಳಿ ರಸ್ತೆ ತಡೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದಲ್ಲಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ. ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನಾಕಾರರಿಂದ ಘೋಷಣೆ. ಅರ್ಧ ತಾಸು ಹೆದ್ದಾರಿ ತಡೆದು ಪ್ರತಿಭಟನೆ. ಗೋವಾ ಮಂಗಳೂರು ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿ, ಅವಧಿ ಮುಗಿದ ಬಳಿಕ ಹೆದ್ದಾರಿ ಸಂಚಾರಕ್ಕೆ ಅವಕಾಶ ಮಾಡಿದ ಪೊಲೀಸರು.
Sep 28, 2020, 2:04 pm IST
ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ರೈತ ವಿರೋಧಿಯಾಗಿದೆ. ಇವುಗಳನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಬೆಂಗಳೂರಿನ ಮೆಜೆಸ್ಟಿಕ್ನಲ್ಲಿ ಕತ್ತೆಯ ಮೇಲೆ ಸವಾರಿ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.
Sep 28, 2020, 2:03 pm IST
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಪಟ್ಟಣದಲ್ಲಿ ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ ಅಣಕು ಶವ ಯಾತ್ರೆ ನಡೆಸಿದ ರೈತರು. ಅಣಕು ಶವ ಯಾತ್ರೆಯ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ ಅನ್ನದಾತರು. ಅಣಕು ಶವ ಯಾತ್ರೆಯಲ್ಲಿ ನೂರಾರು ರೈತರು ಭಾಗಿ.
Sep 28, 2020, 2:00 pm IST
ಭೂಸುಧಾರಣೆ ಹಾಗೂ ಎಪಿಎಂಸಿ ಕಾಯ್ದೆಗಳು ರೈತ ಪರವಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ. ನಾನು ರೈತ, ರೈತನಿಗೆ ಅನುಕೂಲವಾಗುವ ಕಾಯ್ದೆಯಾಗಿದೆ. ರೈತನ ಹೆಸರಿನಲ್ಲಿ ಈಗ ಪ್ರತಿಭಟನೆ ಮಾಡುತ್ತಿದ್ದಾರೆ. ಮೋದಿ ಹಾಗೂ ಯಡಿಯೂರಪ್ಪ ಸರ್ಕಾರ ರೈತ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಅಭಿಪ್ರಾಯ.
Sep 28, 2020, 1:54 pm IST
ಮೈಸೂರಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ರೈತರ ಬಂಧನ. ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಬಳಿ ರೈತರನ್ನು ವಶಕ್ಕೆ ಪಡೆದ ಪೊಲೀಸರು. ಟೌನ್ ಹಾಲ್ ನಿಂದ ಮೆರವಣಿಗೆಯಲ್ಲಿ ಬಂದಿದ್ದು, ಕೋಟೆ ಆಂಜನೇಯ ಸ್ವಾಮಿ ದೇವಾಲಯದಿಂದ ಕೆ.ಆರ್ ಸರ್ಕಲ್ ಕಡೆ ಮೆರವಣಿಗೆ ಹೋಗಲು ಯತ್ನ. ಪ್ರತಿಭಟನಾ ಮೆರವಣಿಗೆ ಮುಂದುವರೆಸಲು ಅನುಮತಿ ನಿರಾಕರಿಸಿದ ಪೊಲೀಸರು. ನೂರಾರು ರೈತರನ್ನು ಪೊಲೀಸ್ ವ್ಯಾನ್ ಗಳಲ್ಲಿ ತುಂಬಿ ಸಿಎಆರ್ ಮೈದಾನಕ್ಕೆ ಕರೆದೊಯ್ದರು.
Sep 28, 2020, 1:43 pm IST
ಕಲಬುರಗಿ: ಭೂ ಸುಧಾರಣೆ ಕಾಯ್ದೆ ವಿರೋಧಿಸಿ ಮಾಜಿ ಸಚಿವ ಬಿ. ಆರ್ ಪಾಟೀಲ್ ವಾಗ್ದಾಳಿ. ಕಲಬುರಗಿ ಬಂದ್ ಹಿನ್ನಲೆ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ರೈತರ ಪ್ರತಿಭಟನೆಯಲ್ಲಿ ಭಾಗಿ. ನೂರಾರು ರೈತರು ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ, ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆ.
Sep 28, 2020, 1:41 pm IST
ಕೃಷಿ ಕಾಯ್ದೆ ವಿರೋಧಿಸಿ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ. ಕೈ ಕಾರ್ಯಕರ್ತರು ಎತ್ತಿನ ಗಾಡಿಯಲ್ಲಿ ಆಗಮಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜ್ ಪೀರ್ ನೇತೃತ್ವದಲ್ಲಿ ಪ್ರತಿಭಟನೆ.
Sep 28, 2020, 1:37 pm IST
ಕಾರ್ಮಿಕ ಹಾಗೂ ರೈತ ವಿರೋಧಿ ಮಸೂದೆ ಖಂಡಿಸಿ ಕರ್ನಾಟಕ ಬಂದ್ ಹಿನ್ನೆಲೆ, ರಾಯಚೂರು ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆಗೆ ಮುಂದಾದ ರೈತರು. ಪೊಲೀಸರು ಹಾಗೂ ಪ್ರತಿಭಟನಾನಿರತರ ನಡುವೆ ಮಾತಿನ ಚಕಮಕಿ. ಬೆಂಕಿ ಹಚ್ಚಲು ಅವಕಾಶ ನೀಡದೇ ಟೈಯರ್ ತೆಗೆದುಕೊಂಡು ಹೋದ ಪೋಲೀಸರು.
Sep 28, 2020, 1:34 pm IST
ಮಡಿಕೇರಿಯಲ್ಲಿ ಪ್ರತಿಭಟನಾಕಾರರ ಬಂಧನ. ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಐಕ್ಯ ಹೋರಾಟ ಸಮಿತಿ ಮುಖಂಡರು. ಅಂಗಡಿ ಮುಂಗಟ್ಟು ಮುಚ್ಚಿಸಲು ಮುಂದಾಗಿದ್ದ ಐವತ್ತಕ್ಕೂ ಹೆಚ್ಚು ಪ್ರತಿಭಟನಾಕಾರರ ಬಂಧನ. ಬಂಧಿಸಿ ಪೊಲೀಸ್ ಮೈದಾನಕ್ಕೆ ಕರೆದೊಯ್ದ ಪೊಲೀಸರು.
Sep 28, 2020, 1:30 pm IST
ಭೂ ಸುಧಾರಣೆ ಕಾಯ್ದೆ ವಿರೋಧಿಸಿ ಯಾದಗಿರಿಯಲ್ಲಿ ಪ್ರತಿಭಟನೆ. ಸರ್ವ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ. ಯಾದಗಿರಿ ನಗರದ ಸುಭಾಷ್ ಮತ್ತು ಶಾಸ್ತ್ರೀ ವೃತ್ತದ ಬಳಿ ಘೋಷಣೆ ಕೂಗಿ ಆಕ್ರೋಶ. ಟೈರ್ ಗೆ ಬೆಂಕಿ ಹಚ್ಚಿ ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಕೂಗು. ಕನ್ನಡ ಪರ, ರೈತ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಿರುವ ಹೋರಾಟಗಾರರು.
Sep 28, 2020, 1:18 pm IST
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಯತ್ನ: ಬೆಳಗಾವಿಯಲ್ಲಿ ನೂರಾರು ರೈತರು ಪುಣೆ-ಬೆಂಗಳೂರು ಹೆದ್ದಾರಿ ತಡೆ ನಡೆಸಿದರು. ಬಳಿಕ ಸುವರ್ಣ ಸೌಧ ಮುತ್ತಿಗೆಗೆ ರೈತರು ಮುಂದಾದರು. ಈ ವೇಳೆ ಹಿರೇಬಾಗೇವಾಡಿ ಪೊಲೀಸರು ರೈತರನ್ನು ವಶಕ್ಕೆ ಪಡೆದರು. ಹೆದ್ದಾರಿ ತಡೆಯಿಂದ ಪ್ರಯಾಣಿಕರು ಪರದಾಡಿದರು.
Sep 28, 2020, 1:16 pm IST
ಶಿವಮೊಗ್ಗದಲ್ಲಿ ಮಿಶ್ರ ಪ್ರತಿಕ್ರಿಯೆ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೃಷಿ ಹಾಗೂ ಮಾರುಕಟ್ಟೆ ಸಂಬಂಧಿ ತಿದ್ದುಪಡಿ ಮಸೂದೆಗಳ ವಿರುದ್ಧ ಇಂದು ಕರೆಯಲಾದ ರಾಷ್ಟ್ರವ್ಯಾಪಿ ಬಂದ್ ಪ್ರದರ್ಶನಕ್ಕಷ್ಟೇ ಸೀಮಿತವಾಯ್ತು. ರೈತ ಸಂಘ ಎರಡು ದಿನಗಳ ಹಿಂದೆ ಪತ್ರಿಕಾಗೋಷ್ಟಿ, ಜೊತೆಗೆ ಜನರ ಬಳಿ ಹೋಗಿ ಮನವಿಯನ್ನೂ ಮಾಡಿತ್ತು. ಜನರು ಸ್ವಯಂ ಪ್ರೇರಿತವಾಗಿ ಕೆಲವೆಡೆ ಹನ್ನೊಂದು ಗಂಟೆವರೆಗೆ ಬಾಗಿಲು ಮುಚ್ಚಿದ್ದರು.
ನಂತರ ಯಥಾಸ್ಥಿತಿಯತ್ತ ನಗರ ಮರಳಿತು ಜನರಲ್ಲಿ ಬಂದ್ ಎನ್ನುವ ಯಾವುದೇ ಪರಿವೆಯೇ ಇರಲಿಲ್ಲ. ಆರಾಮಾಗಿ ಬೈಕ್ ಹಾಗೂ ಕಾರ್ಗಳಲ್ಲಿ ಓಡಾಡುತ್ತಿದ್ದರು. ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಭದ್ರತೆ ನೀಡಿದ್ದರು ಕೆಲವು ಮಾರ್ಗಗಳನ್ನು ಬಂದ್ ಮಾಡಲಾಗಿತ್ತು.
Sep 28, 2020, 1:13 pm IST
ಬೆಳಗಾವಿ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ರೈತ ಸಂಘಟನೆ ಮುಖಂಡರು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಬೆಳಗಾವಿ ಜಿಲ್ಲೆಯಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೆಳಗಾವಿ ನಗರದ ಚೆನ್ನಮ್ಮ ವೃತ್ತದಲ್ಲಿ ಜಮಾಯಿಸಿದ ರೈತ ಸಂಘಟನೆ ಹಾಗೂ ಕನ್ನಡ ಪರ ಸಂಘಟನೆಗಳು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಭೂಸ್ವಾಧೀನ ಕಾಯ್ದೆ ತಿದ್ದುಪಡಿ ಹಾಗೂ ಎಪಿಎಂಸಿ ಖಾಸಗೀಕರಣಕ್ಕೆ ಮುಂದಾಗಿರುವುದನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
Sep 28, 2020, 12:50 pm IST
ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಮೈಸೂರು ತಾಲೂಕು ಎಪಿಎಂಸಿ ಸದಸ್ಯರು ಎಪಿಎಂಸಿ ಕಚೇರಿ ಗೇಟ್ ಮುಂಭಾಗ ಪ್ರತಿಭಟನೆ ನಡೆಸಿದರು. ಎಪಿಎಂಸಿ ಅಧ್ಯಕ್ಷ ಬಸವರಾಜು ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಎಪಿಎಂಸಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿ ಮಾಡಿಸಿ ಪ್ರತಿಭಟನೆ ನಡೆಸಿದರು. ವ್ಯಾಪಾರ ವಹಿವಾಟು ಸಂಪೂರ್ಣ ಬಂದ್ ಆಗಿದ್ದು, ಸಂಜೆ ಆರು ಗಂಟೆಯವರೆಗೂ ಸಂಪೂರ್ಣ ಬಂದ್ ಇರಲಿದೆ.
Sep 28, 2020, 12:47 pm IST
ಬೆಂಗಳೂರಿನಲ್ಲಿ ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ, ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ನತ್ತ ಅನ್ನದಾತರ ಜಾಥಾ. ರೈತರಿಗೆ ಹಲವು ಸಂಘಟನೆಗಳು ಸಾಥ್ ನೀಡಿವೆ. ಭೂಸುಧಾರಣಾ ಹಾಗೂ ಎಪಿಎಂಸಿ ಸೇರಿದಂತೆ ಹಲವು ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ.
Sep 28, 2020, 12:33 pm IST
ಕಾಫಿನಾಡು ಚಿಕ್ಕಮಗಳೂರನಲ್ಲಿ ಕರವೇ ಕಾರ್ಯಕರ್ತರಿಂದ ಪ್ರತಿಭಟನೆ. ನಗರದ ಹನುಮಂತಪ್ಪ ವೃತ್ತದಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ. ಚಿಕ್ಕಮಗಳೂರು ನಗರದಲ್ಲಿ ಆಟೋ, ಅಂಗಡಿ-ಮುಂಗಟ್ಟು ಸಂಪೂರ್ಣ ಬಂದ್. ತೆರೆದಿರುವ ಅಂಗಡಿಗಳನ್ನು ಮುಚ್ಚಿಸುತ್ತಿರುವ ಕಾರ್ಯಕರ್ತರು. ರೈತ ಸಂಘಟನೆ, ಕರವೇ, ಸಿಬಿಐ ಮುಖಂಡರು ಭಾಗಿ. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ.
Sep 28, 2020, 12:29 pm IST
ಉಡುಪಿಯಲ್ಲಿ ಕೆಲವು ಸಿಟಿ ಬಸ್ಸುಗಳು ಎಂದಿನಂತೆ ಓಡಾಟ ಆರಂಭಿಸಿದಾಗ ಬಸ್ ಪ್ರತಿಭಟನಾ ನಿರತರು ರಸ್ತೆಯಲ್ಲಿ ಅಡ್ಡ ಕುಳಿತು ಪ್ರತಿಭಟಿಸಿದರು. ಈ ವೇಳೆ ಪೊಲೀಸರು ಆಗಮಿಸಿ ನೂರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿ ವ್ಯಾನ್ ನಲ್ಲಿ ಕರೆದೊಯ್ದರು.
ಇಂದಿನ ಪ್ರತಿಭಟನೆಗೆ ಹದಿನಾಲ್ಕು ಸಂಘಟನೆಗಳು ಬೆಂಬಲ ನೀಡಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಕೂಡ ಬೆಂಬಲ ವ್ಯಕ್ತಪಡಿಸಿವೆ. ಹೀಗಾಗಿ ಪ್ರತಿಭಟನಾ ನಿರತರಲ್ಲಿ ಸಿಪಿಐಎಂ, ಕಾರ್ಮಿಕ ಸಂಘಟನೆಗಳು ಮತ್ತು ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರೇ ಅಧಿಕ ಸಂಖ್ಯೆಯಲ್ಲಿದ್ದಾರೆ.
Sep 28, 2020, 12:22 pm IST
ರಾಜ್ಯ ಹಸಿರು ಸೇನೆ ಹಾಗೂ ರೈತ ಸೇನೆ ಸಂಘದ ಹುಚ್ಚವನಹಳ್ಳಿ ಮಂಜುನಾಥ್ ಬಣದಿಂದ ದಾವಣಗೆರೆ ನಗರದ ಗುಂಡಿ ಸರ್ಕಲ್ ಬಳಿ ರೈತರು ಬಾಯಿ ಬಾಯಿ ಬಡಿದುಕೊಂಡು ತಮ್ಮ ಅಳಲು ವ್ಯಕ್ತಪಡಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಮತ್ತೊಂದು ಕಡೆ ತರಕಾರಿ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಬಳಿ ಇರುವ ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಸ್ಥರ ಚೀಲಗಳನ್ನು ಕಸಿದುಕೊಂಡು ವ್ಯಾಪಾರ ಮಾಡದಂತೆ ಮನವಿ ಮಾಡಿದರು. ಈ ವೇಳೆ ಮಾರುಕಟ್ಟೆ ವ್ಯಾಪಾರಸ್ಥರು ಮತ್ತು ರೈತರ ಮಧ್ಯೆ ವಾಗ್ವಾದ ನಡೆಯಿತು.
READ MORE
10:09 AM, 28 Sep
ಕೋಲಾರ ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ಪ್ರತಿಭಟನೆ.
ಟೈರ್ ಗಳಿಗೆ ಬೆಂಕಿ ಹಚ್ಚುವ ವಿಚಾರದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ.
ಟೈರ್ ಗೆ ಬೆಂಕಿ ಹಾಕದಂತೆ ತಡೆ, ಪೊಲೀಸರ ಜೊತೆ ಮಾತುಕತೆ.ಟೈರ್ ಬದಲಿಗೆ ಬ್ಯಾನರ್ ಗೆ ಬೆಂಕಿ ಹಾಕಿ ಆಕ್ರೋಶ.
10:12 AM, 28 Sep
ಚಿಕ್ಕಬಳ್ಳಾಪುರ ಜಿಲ್ಲಾ ಬಂದ್ ಗೆ ಹಲವು ಸಂಘಟನೆಗಳ ಕರೆ. ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಾಂತ ಬಿಗಿ ಪೊಲೀಸ್ ಬಂದೋಬಸ್ತ್. ಚಿಕ್ಕಬಳ್ಳಾಪುರ ನಗರದ ಶಿಡ್ಲಘಟ್ಟ ವೃತ್ತದಲ್ಲಿ ರೈತ ಸಂಘಟನೆ ಹಾಗೂ ಕರವೇ ಕಾರ್ಯಕರ್ತರಿಂದ ಪ್ರತಿಭಟನೆ. ಪಂಜಿನ ಮೆರವಣಿಗೆ ನಡೆಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
10:16 AM, 28 Sep
ಕೋಲಾರದಲ್ಲಿ ರೈತ ಸಂಘದ ಹೋರಾಟಕ್ಕೆ ಪೊಲೀಸರಿಂದ ತಡೆ. ಎಪಿಎಂಸಿ, ಭೂ ಸುಧಾರಣೆ ಕಾಯ್ದೆ ವಿರೋಧಿಸಿ ಕರ್ನಾಟಕ ಬಂದ್ ವೇಳೆ, ಟೈಯರ್ ಗೆ ಬೆಂಕಿ ಹಚ್ಚಲು ಮುಂದಾದಾಗ ಪೊಲೀಸರಿಂದ ತಡೆ. ಪೊಲೀಸರು ಹಾಗೂ ಹೋರಾಟಗಾರರ ಮಧ್ಯೆ ಮಾತಿನ ಚಕಮಕಿ. ಕೋಲಾರ ಬಸ್ ನಿಲ್ದಾಣ ವೃತ್ತದಲ್ಲಿ ಡಿವೈಎಸ್ಪಿ, ಸರ್ಕಲ್ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ಬಂದೋಬಸ್ತ್. ಟೈಯರ್ ಗೆ ಬೆಂಕಿ ಹಚ್ಚಿದರೆ ಕೇಸ್ ಹಾಕುವ ಎಚ್ಚರಿಕೆ ನೀಡಿದ ಪೊಲೀಸರು.
10:21 AM, 28 Sep
ಚಾಮರಾಜನಗರ ಜಿಲ್ಲಾ ಕೇಂದ್ರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ. ಭುವನೇಶ್ವರಿ ವೃತ್ತದಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುಳಿತು ಧರಣಿ ನಡೆಸುತ್ತಿರುವ ಪ್ರತಿಭಟನಾಕಾರರು. ಎಂದಿನಂತೆ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಆರಂಭ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ದಿಕ್ಕಾರ ಘೋಷಣೆ ಕೂಗಿದ ಪ್ರತಿಭಟನಾಕಾರರು. ಪ್ರತಿಭಟನೆಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು, ಬಿವಿಎಸ್ ಕಾರ್ಯಕರ್ತರು, ಎಸ್ ಡಿಪಿಐ ಕಾರ್ಯಕರ್ತರು ಭಾಗಿ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋ ಬಸ್ತ್.
10:26 AM, 28 Sep
ಕೋಟೆನಾಡು ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಬೀದಿಗಿಳಿದ ಅನ್ನದಾತರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ರೈತರು. ರೈತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ.
ಚಿತ್ರದುರ್ಗ ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು. ವರ್ತಕರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಬಂದ್ ಗೆ ಬೆಂಬಲ ನೀಡಿದ್ದಾರೆ. ನಗರದಲ್ಲಿ ಎಂದಿನಂತೆ ಕಾರ್ಯನಿರ್ವಹಿಸುತ್ತಿರುವ ಸಂಚಾರ ವ್ಯವಸ್ಥೆ. ಬಂದ್ ಹಿನ್ನೆಲೆ ಪ್ರಮುಖ ವೃತ್ತ, ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ, ಕೇಂದ್ರ ಸರ್ಕಾರದ ಕಚೇರಿ ಮುಂಭಾಗ ಬಿಗಿ ಬಂದೋಬಸ್ತ್.
10:31 AM, 28 Sep
ರಾಮನಗರದಲ್ಲಿ ಮೆರವಣಿಗೆ ಜಾಥಾ ನಡೆಸುತ್ತಿರುವ ರೈತ ಮುಖಂಡರು, ಕನ್ನಡಪರ ಸಂಘಟನೆಗಳು. ನಗರದ ಎಪಿಎಂಸಿ ಮಾರುಕಟ್ಟೆಯಿಂದ ಜಾಥಾ ಆರಂಭ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರತಿಭಟನೆ. ಜಿಲ್ಲೆಯ ಎಲ್ಲ ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಭಾಗಿ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ. ಬಂದ್ ಹಿನ್ನೆಲೆ ಪ್ರಮುಖ ವೃತ್ತ, ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ, ಕೇಂದ್ರ ಸರ್ಕಾರದ ಕಚೇರಿ ಮುಂಭಾಗ ಬಿಗಿ ಬಂದೋಬಸ್ತ್.
10:36 AM, 28 Sep
ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಎಂದಿನಂತೆ ಇರುವ ವಾಹನ ಸಂಚಾರ. ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಯಥಾಸ್ಥಿತಿ. ತಮ್ಮ ತಮ್ಮ ಮಾರ್ಗದತ್ತ ಹೊರಟಿರುವ ಬಸ್ ಗಳು. ಚಿಕ್ಕೋಡಿಯ ವಿವಿಧ ರೈತ ಸಂಘಟನೆಗಳು, ಕರವೇ, ಜಯಕರ್ನಾಟಕ ಸಂಘಟನೆ, ದಲಿತ ಸಂಘಟನೆ ಸೇರಿದಂತೆ ಹಲವು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಬೆಂಬಲ. 11 ಗಂಟೆಗೆ ಪ್ರತಿಭಟನೆ ನಡೆಸಿ, ಚಿಕ್ಕೋಡಿ ಎಸಿ ಮುಖಾಂತರ ಮನವಿ ಸಲ್ಲಿಸಲಿರುವ ಸಂಘಟನೆಗಳು.
10:38 AM, 28 Sep
ಚಾಮರಾಜನಗರದಲ್ಲಿ ಹೂವಿನಂಗಡಿಯನ್ನು ಬಂದ್ ಮಾಡಿಸಿದ ಪ್ರತಿಭಟನಾಕಾರರು. ಕೈ ಮುಗಿದು ಹೂವಿನ ಅಂಗಡಿ ಮುಚ್ಚಿಸಿದ ರೈತ ಸಂಘಟನೆಗಳು. ಸಂಚಾರ ಆರಂಭಿಸಿದ್ದ ಆಟೋ ಚಾಲಕರಿಗೆ ಸಂಚಾರ ನಿಲ್ಲಿಸುವಂತೆ ಮನವಿ ಮಾಡಿದ ರೈತ ಪ್ರತಿಭಟನಾಕಾರರು. ಎಂದಿನಂತೆ ವ್ಯಾಪಾರ ವಹಿವಾಟಿಗೆ ಮುಂದಾಗಿದ್ದವರಿಗೆ ಬಂದ್ ಮಾಡುವಂತೆ ಮನವಿ ಮಾಡುತ್ತಿರುವ ಪ್ರತಿಭಟನಾಕಾರರು. ಚಾಮರಾಜನಗರದ ಬಜಾರ್ ಸ್ಟ್ರೀಟ್ ಬಿಕೋ ಎನ್ನುತ್ತಿದೆ.
10:42 AM, 28 Sep
ಕ್ಷಣ ಕ್ಷಣಕ್ಕೂ ಮೈಸೂರಿನಲ್ಲಿ ಬಂದ್ ಕಾವು ಮತ್ತಷ್ಟು ಹೆಚ್ಚಾಗುತ್ತಿದೆ. ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ರೈತರ ಪ್ರತಿಭಟನೆ. ತಲೆ ಮೇಲೆ ಚಪ್ಪಡಿ ಕಲ್ಲು, ಹೆಗಲಿಗೆ ಗುದ್ದಲಿ, ಪಿಕಾಸಿ ಹೊತ್ತುಕೊಂಡು ಪ್ರತಿಭಟನೆ ನಡೆಸುತ್ತಿರುವ ರೈತರು. ಬೆಂಗಳೂರಿಗೆ ತೆರಳುವ ಬಸ್ ಗಳನ್ನು ತಡೆದ ಪ್ರತಿಭಟನಾಕಾರರು. ರಾಜ್ಯ ರೈತ ಸಂಘ, ಹಸಿರು ಸೇನೆ, ಸಿಐಟಿಯು, ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಸಂಘಟನೆ ಸದಸ್ಯರಿಂದ ಪ್ರತಿಭಟನೆ.
10:47 AM, 28 Sep
ದಾವಣಗೆರೆಯಲ್ಲಿ ಎಪಿಎಂಸಿ, ಭೂಸುಧಾರಣೆ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ. ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಗೆ ಆಗ್ರಹ. ರಾಷ್ಟ್ರೀಯ ಹೆದ್ದಾರಿ 4ರ ಜಿಲ್ಲಾ ಪಂಚಾಯತಿ ಕಚೇರಿ ಎದುರು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ. ದಾವಣಗೆರೆಯ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವಗಂಗಾ ನೇತೃತ್ವದಲ್ಲಿ ಪ್ರತಿಭಟನೆ. ರಾಜ್ಯ ರೈತ ಸಂಘ, ಹಸಿರು ಸೇನೆ, ಸಿಐಟಿಯು, ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಸಂಘಟನೆ ಸದಸ್ಯರಿಂದ ಆಕ್ರೋಶ.
10:49 AM, 28 Sep
ರೈತ ಸಂಘಟನೆಗಳ ಕರ್ನಾಟಕ ಬಂದ್ಗೆ ಕರೆ ಹಿನ್ನೆಲೆ, ಮಂಡ್ಯದಲ್ಲಿ ಪ್ರತಿಭಟನೆಗೆ ಸಜ್ಜಾದ ಪ್ರಗತಿಪರ ಸಂಘಟನೆಗಳು. ಸಂಜಯ್ ವೃತ್ತದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್. ಎಂದಿನಂತೆ ಹೆದ್ದಾರಿಯಲ್ಲಿ ಓಡಾಡುತ್ತಿರುವ ವಾಹನಗಳು. ಪ್ರತಿಭಟನಾಕಾರರಿಗೆ ಹೆದ್ದಾರಿ ತಡೆ ಮಾಡದಂತೆ ಎಚ್ಚರಿಕೆ. 300 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳು ಸಂಜಯ್ ವೃತ್ತದಲ್ಲಿ ಬಂದೋಬಸ್ತ್
10:55 AM, 28 Sep
ರಾಯಚೂರು ಜಿಲ್ಲೆಯಾದ್ಯಂತ ರೈತ ಹಾಗೂ ಕಾರ್ಮಿಕರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಆರಂಭ. ರಾಯಚೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರರು. ರೈತ ಹಾಗೂ ಕಾರ್ಮಿಕರ ವಿರುದ್ಧದ ಕಾಯ್ದೆಗಳನ್ನು ಕೈಬಿಡಲು ಒತ್ತಾಯ.
11:05 AM, 28 Sep
ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಇಂದು ಕರ್ನಾಟಕ ಬಂದ್ ಮಾಡುವ ಮೂಲಕ ಪ್ರತಿಭಟನೆ. ಸಹಜವಾಗಿ ಶಿವಮೊಗ್ಗದ ಜನತೆಯ ಓಡಾಟ. ಯಾವುದೇ ಸಂಚಾರಗಳಲ್ಲಿ ಬದಲಾವಣೆ ಇಲ್ಲ. ಎಪಿಎಂಸಿ ಭೂ ಸುಧಾರಣೆ ಕಾಯ್ದೆಯನ್ನು ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ.
ನೂರಾರು ರೈತರು ಒಟ್ಟಿಗೆ ಸೇರಿ ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ. ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾದೊಂದಿಗೆ ಬೆಂಬಲ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಕನ್ನಡ ಸಂಘಟನೆಗಳ, ಮುಖಂಡರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆ.
11:07 AM, 28 Sep
ಕೇಂದ್ರ ಮತ್ತು ರಾಜ್ಯ ಸರಕಾರದ ರೈತ ವಿರೋಧಿ ನೀತಿ ಖಂಡಿಸಿ ಇಂದು ಕರ್ನಾಟಕ ಬಂದ್ ಹಿನ್ನಲೆ, ಕಲಬುರಗಿಯಲ್ಲಿ ಬಸ್ ಸಂಚಾರವಿಲ್ಲದೆ ಪ್ರಯಾಣಿಕರ ಪರದಾಟ. ಸರಕಾರ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದರೂ, ಕಲಬುರಗಿಯಲ್ಲಿ ಯಾವುದೇ ಬಸ್ ಸಂಚಾರವಿಲ್ಲ. ತಮ್ಮ ತಮ್ಮ ಊರಿಗೆ ಹೋಗಲು ಗಂಟೆಗಟ್ಟಲೇ ಬಸ್ ಗಾಗಿ ಕಾಯುತ್ತಿರುವ ಪ್ರಯಾಣಿಕರು. ಸರಕಾರದ ವಿರುದ್ಧ ಪ್ರಯಾಣಿಕರ ಆಕ್ರೋಶ.
11:12 AM, 28 Sep
ರೈತ ಸಂಘಟನೆಗಳ ಕರ್ನಾಟ ಬಂದ್ ಗೆ ಕರೆ ಹಿನ್ನೆಲೆ ಬಳ್ಳಾರಿ ಜಿಲ್ಲೆಯ ಹೊಸಪೇಟೆ ಬಂದ್. ಅಂಗಡಿ-ಮುಂಗಟ್ಟುಗಳು ಬಂದ್ ಆಗಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ರಿಂದ ಬಂದೋಬಸ್ತ್. ಕೇಂದ್ರ ಹಾಗೂ ರಾಜ್ಯ ಸಕಾರದ ವಿರುದ್ಧ ಪ್ರತಿಭಟನೆ ಆರಂಭ. ರೈತ, ಕಾರ್ಮಿಕ, ದಲಿತಪರ ಹಾಗೂ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ. ರೈತ ಹಾಗೂ ಕಾರ್ಮಿಕರ ವಿರುದ್ಧದ ಕಾಯ್ದೆಗಳನ್ನು ಕೈಬಿಡಲು ಒತ್ತಾಯ.
11:16 AM, 28 Sep
ಉಡುಪಿಯಲ್ಲಿ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಸಿಪಿಐಎಂ ನೇತೃತ್ವದಲ್ಲಿ ರಸ್ತೆ ತಡೆ ಮತ್ತು ಪ್ರತಿಭಟನೆ ನಡೆಯುತ್ತಿದೆ. ಇಂದು ಬೆಳಿಗ್ಗೆ ಖಾಸಗಿ ಬಸ್ ಸಂಚಾರಕ್ಕೆ ಪ್ರತಿಭಟನಾಕಾರರು ಅಡ್ಡಿಪಡಿಸಿದರು. ಈ ವೇಳೆ ಬಸ್ ಚಾಲಕರು, ಮಾಲಕರು ಮತ್ತು ಪ್ರತಿಭಟನಕಾರರ ನಡುವೆ ವಾಗ್ವಾದ, ಮಾತಿನ ಚಕಮಕಿ ನಡೆಯಿತು. ಖಾಸಗಿ ಬಸ್ ಸಂಚಾರಕ್ಕೆ ಪ್ರತಿಭಟನಾಕಾರರು ಅಡ್ಡಿಪಡಿಸಿದಾಗ ಪೊಲೀಸರು ಮಧ್ಯ ಪ್ರವೇಶ ಮಾಡಿದರು.
11:21 AM, 28 Sep
ಬಳ್ಳಾರಿಯಲ್ಲಿ ರೈತಪರ ಹೋರಾಟಕ್ಕೆ ಬೆಂಬಲಿಸಿ ಬಂದ, ಕಲ್ಯಾಣ ಸ್ವಾಮೀಜಿ ದ್ವಂದ್ವ ಹೇಳಿಕೆ. ಈ ಹಿಂದೆ ಕೊರೊನಾ ಅನ್ನೋದೇ ಸುಳ್ಳು, ನಾನು ಯಾವುದೇ ಮಾಸ್ಕ್ ಧರಿಸುವುದಿಲ್ಲ, ಸ್ಯಾನಿಟೈಸರ್ ಉಪಯೋಗಿಸಲ್ಲ, ಸೋಂಕಿತರನ್ನು ನಾನು ಮುಟ್ಟಿ ಬರ್ತೀನಿ ಅಂತ ವಿವಾದಾತ್ಮಕ ಹೇಳಿಕೆ ನೀಡಿದ್ದ ಸ್ವಾಮಿಜಿ. ಇಂದು ರಾಯಲ್ ವೃತ್ತದಲ್ಲಿ ಮಾಸ್ಕ್ ಸ್ಯಾನಿಟೈಸರ್ ಹಂಚುವ ಮೂಲಕ ವಿಭಿನ್ನ ಪ್ರತಿಭಟನೆ. ರೈತ ವಿರೋಧಿ ಮಸೂದೆ ಬಗ್ಗೆ ನಾನು ತಿಳಿದುಕೊಂಡಿಲ್ಲ, ಮೋದಿ ಸರ್ಕಾರ ರೈತರ ಖಾತೆಗೆ ಹಣ ಜಮೆ ಮಾಡುತ್ತಿದೆ. ರೈತ ವಿರೋಧಿ ಅಂತ ಹೇಳುವ ಕಾಯ್ದೆ ಬಗ್ಗೆ ನನಗೆ ಗೊತ್ತಿಲ್ಲ ಎಂದ ಕಲ್ಯಾಣ ಸ್ವಾಮೀಜಿ.
11:26 AM, 28 Sep
ರೈತರ ಪ್ರತಿಭಟನೆಗೆ ಬೆಂಗಳೂರು ಸ್ತಬ್ಧವಾಗಿದೆ. ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ದಲಿತ ಸಂಘಟನೆಗಳು ಹಾಗೂ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ. ಟೌನ್ ಹಾಲ್ ಎದುರಿಗೆ ಸಾವಿರಾರು ರೈತರಿಂದ ಬೃಹತ್ ಪ್ರತಿಭಟನೆ. ಬಸ್ ಸಂಚಾರಕ್ಕೆ ಅಡ್ಡಿ.
11:28 AM, 28 Sep
ಮುದ್ರಣ ಕಾಶಿ ಗದಗ ಜಿಲ್ಲೆಯಲ್ಲಿ ಆರಂಭವಾದ ಪ್ರತಿಭಟನೆ. ಗದಗ ನಗರದ ಮುಳಗುಂದ ನಾಕಾದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಹೋರಾಟಗಾರರು. ಬಾಯಿ ಬಾಯಿ ಬಡಿದುಕೊಂಡು ಪ್ರತಿಭಟನೆ. ಮುಳಗುಂದ ನಾಕಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಕರ್ನಾಟಕ ಬಂದ್ ಗೆ ಗದಗ ಜಿಲ್ಲೆಯಲ್ಲಿ 10ಕ್ಕೂ ಹೆಚ್ಚು ಸಂಘಟನೆಗಳಿಂದ ಬೆಂಬಲ.
11:31 AM, 28 Sep
ಕರ್ನಾಟಕ ಬಂದ್ ಹಿನ್ನೆಲೆ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ರೈತರ ಬೃಹತ್ ಪ್ರತಿಭಟನೆ. ರೈತ ಮುಖಂಡರಿಂದ ರಸ್ತೆ ತಡೆದು ಬಂದ್. ರಸ್ತೆ ಮೇಲೆ ಕುಳಿತು ಪ್ರತಿಭಟನೆ ನಡೆಸುತ್ತಿರುವ ರೈತರು. ಬಸ್ ಎದುರು ಮಲಗಿ ಬಸ್ ತಡೆಯಲು ಮುಂದಾದ ರೈತರು. ರೈತನನ್ನು ತಡೆದು ಬಸ್ ಸಂಚಾರಕ್ಕೆ ಅವಕಾಶ ಮಾಡಿದ ಪೊಲೀಸರು. ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ರೈತರ ಅಕ್ರೋಶ.
11:34 AM, 28 Sep
ರೈತಪರ ಸಂಘಟನೆಗಳಿಂದ ಹುಬ್ಬಳ್ಳಿಯ ಬಸ್ ನಿಲ್ದಾಣದಲ್ಲಿ ರೈತರಿಂದ ವಿಭಿನ್ನ ಪ್ರತಿಭಟನೆ. ಹೂ ನೀಡಿ ಅಂಗಡಿ ಮುಗ್ಗಟ್ಟು ಬಂದ್ ಮಾಡಲು ಪ್ರತಿಭಟನಾಕಾರರ ಮನವಿ. ಅಂಗಡಿ ಮಾಲಿಕರು, ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗೆ ಹೂ ನೀಡಿ ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸಲು ರೈತರ ಮನವಿ.
11:43 AM, 28 Sep
ಮಡಿಕೇರಿ: ವಿವಾದಿತ ಕೃಷಿ, ಕಾರ್ಮಿಕ ಮಸೂದೆಗಳನ್ನು ಹೊರಡಿಸಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕರೆ ನೀಡಿರುವ ಕರ್ನಾಟಕ ಬಂದ್ಗೆ ವಿವಿಧ ಪಕ್ಷಗಳು ಬೆಂಬಲ ಸೂಚಿಸಿವೆ. ಸೋಮವಾರ ಕೊಡಗಿನ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ
ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು, ರೈತರನ್ನು ಪೊಲೀಸರು ವಶಕ್ಕೆ ಪಡೆದರು.
11:53 AM, 28 Sep
ಬಳ್ಳಾರಿ: ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭೂಸುಧಾರಣಾ ತಿದ್ದುಪಡಿ ಕಾಯಿದೆ ಸೇರಿದಂತೆ ನಾನಾ ತಿದ್ದುಪಡಿ ಕಾಯಿದೆಗಳನ್ನು ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ. ಗಣಿನಾಡು ಬಳ್ಳಾರಿಯಲ್ಲಿಂದು ಎತ್ತಿನ ಬಂಡಿ ಜಾಥಾ ನಡೆಸುವ ಮೂಲಕ ವಿಶೇಷ ಗಮನ ಸೆಳೆಯಲಾಯಿತು.
ಹಿರಿಯ ರೈತ ಮುಖಂಡ ಪ್ರೊ.ನಂಜುಂಡಸ್ವಾಮಿ ಸ್ಥಾಪಿತ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ, ಚಾಗನೂರು-ಸಿರಿವಾರ ನೀರಾವರಿ ಭೂ ರಕ್ಷಣಾ ಹೋರಾಟ ಸಮಿತಿಯಿಂದ ಗೋಡೆಹಾಳ್ ಕ್ರಾಸ್ ನಿಂದ ಬಳ್ಳಾರಿವರೆಗೆ ಸೋಮವಾರ ಎತ್ತಿನ ಬಂಡಿ ಜಾಥಾ ನಡೆಸಲಾಯಿತು.
11:56 AM, 28 Sep
ಭೂ ಸುಧಾರಣಾ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿಯ ವಿರುದ್ಧ ಧಾರವಾಡ ಕಾಂಗ್ರೆಸ್ ಸಮಿತಿ ವತಿಯಿಂದ ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ.
12:08 PM, 28 Sep
ರೈತಪರ ಸಂಘಟನೆಗಳಿಂದ ಕರ್ನಾಟಕ ಬಂದ್ ಹಿನ್ನೆಲೆ. ಎಲಕ್ಕಿ ಕಂಪಿನ ನಗರಿ ಹಾವೇರಿಯಲ್ಲಿ ಎಂದಿನಂತೆ ಜನಜೀವನ ಆರಂಭ. ನಗರದ ಸಿದ್ದಪ್ಪ ಸರ್ಕಲ್ನಲ್ಲಿ ಪೋಲಿಸ್ ಬಿಗಿ ಬಂದೋಬಸ್ತ್. ಕಾಗಿನೆಲೆ ಬಸ್ ನಿಲ್ದಾಣದಿಂದ ಆರಂಭಗೊಳ್ಳಲಿರೋ ಪ್ರತಿಭಟನಾ ಜಾಥಾ. ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಿದ್ದಪ್ಪ ಸರ್ಕಲ್ನಲ್ಲಿ ಜಮಾವಣೆ. ಸಾವಿರಕ್ಕೂ ಅಧಿಕ ರೈತರು ಮೆರವಣಿಗೆಯಲ್ಲಿ ಭಾಗಿ.
12:22 PM, 28 Sep
ರಾಜ್ಯ ಹಸಿರು ಸೇನೆ ಹಾಗೂ ರೈತ ಸೇನೆ ಸಂಘದ ಹುಚ್ಚವನಹಳ್ಳಿ ಮಂಜುನಾಥ್ ಬಣದಿಂದ ದಾವಣಗೆರೆ ನಗರದ ಗುಂಡಿ ಸರ್ಕಲ್ ಬಳಿ ರೈತರು ಬಾಯಿ ಬಾಯಿ ಬಡಿದುಕೊಂಡು ತಮ್ಮ ಅಳಲು ವ್ಯಕ್ತಪಡಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಮತ್ತೊಂದು ಕಡೆ ತರಕಾರಿ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಬಳಿ ಇರುವ ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಸ್ಥರ ಚೀಲಗಳನ್ನು ಕಸಿದುಕೊಂಡು ವ್ಯಾಪಾರ ಮಾಡದಂತೆ ಮನವಿ ಮಾಡಿದರು. ಈ ವೇಳೆ ಮಾರುಕಟ್ಟೆ ವ್ಯಾಪಾರಸ್ಥರು ಮತ್ತು ರೈತರ ಮಧ್ಯೆ ವಾಗ್ವಾದ ನಡೆಯಿತು.
12:29 PM, 28 Sep
ಉಡುಪಿಯಲ್ಲಿ ಕೆಲವು ಸಿಟಿ ಬಸ್ಸುಗಳು ಎಂದಿನಂತೆ ಓಡಾಟ ಆರಂಭಿಸಿದಾಗ ಬಸ್ ಪ್ರತಿಭಟನಾ ನಿರತರು ರಸ್ತೆಯಲ್ಲಿ ಅಡ್ಡ ಕುಳಿತು ಪ್ರತಿಭಟಿಸಿದರು. ಈ ವೇಳೆ ಪೊಲೀಸರು ಆಗಮಿಸಿ ನೂರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿ ವ್ಯಾನ್ ನಲ್ಲಿ ಕರೆದೊಯ್ದರು.
ಇಂದಿನ ಪ್ರತಿಭಟನೆಗೆ ಹದಿನಾಲ್ಕು ಸಂಘಟನೆಗಳು ಬೆಂಬಲ ನೀಡಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಕೂಡ ಬೆಂಬಲ ವ್ಯಕ್ತಪಡಿಸಿವೆ. ಹೀಗಾಗಿ ಪ್ರತಿಭಟನಾ ನಿರತರಲ್ಲಿ ಸಿಪಿಐಎಂ, ಕಾರ್ಮಿಕ ಸಂಘಟನೆಗಳು ಮತ್ತು ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರೇ ಅಧಿಕ ಸಂಖ್ಯೆಯಲ್ಲಿದ್ದಾರೆ.
12:33 PM, 28 Sep
ಕಾಫಿನಾಡು ಚಿಕ್ಕಮಗಳೂರನಲ್ಲಿ ಕರವೇ ಕಾರ್ಯಕರ್ತರಿಂದ ಪ್ರತಿಭಟನೆ. ನಗರದ ಹನುಮಂತಪ್ಪ ವೃತ್ತದಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ. ಚಿಕ್ಕಮಗಳೂರು ನಗರದಲ್ಲಿ ಆಟೋ, ಅಂಗಡಿ-ಮುಂಗಟ್ಟು ಸಂಪೂರ್ಣ ಬಂದ್. ತೆರೆದಿರುವ ಅಂಗಡಿಗಳನ್ನು ಮುಚ್ಚಿಸುತ್ತಿರುವ ಕಾರ್ಯಕರ್ತರು. ರೈತ ಸಂಘಟನೆ, ಕರವೇ, ಸಿಬಿಐ ಮುಖಂಡರು ಭಾಗಿ. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ.
12:47 PM, 28 Sep
ಬೆಂಗಳೂರಿನಲ್ಲಿ ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ, ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ನತ್ತ ಅನ್ನದಾತರ ಜಾಥಾ. ರೈತರಿಗೆ ಹಲವು ಸಂಘಟನೆಗಳು ಸಾಥ್ ನೀಡಿವೆ. ಭೂಸುಧಾರಣಾ ಹಾಗೂ ಎಪಿಎಂಸಿ ಸೇರಿದಂತೆ ಹಲವು ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ.
12:50 PM, 28 Sep
ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಮೈಸೂರು ತಾಲೂಕು ಎಪಿಎಂಸಿ ಸದಸ್ಯರು ಎಪಿಎಂಸಿ ಕಚೇರಿ ಗೇಟ್ ಮುಂಭಾಗ ಪ್ರತಿಭಟನೆ ನಡೆಸಿದರು. ಎಪಿಎಂಸಿ ಅಧ್ಯಕ್ಷ ಬಸವರಾಜು ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಎಪಿಎಂಸಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿ ಮಾಡಿಸಿ ಪ್ರತಿಭಟನೆ ನಡೆಸಿದರು. ವ್ಯಾಪಾರ ವಹಿವಾಟು ಸಂಪೂರ್ಣ ಬಂದ್ ಆಗಿದ್ದು, ಸಂಜೆ ಆರು ಗಂಟೆಯವರೆಗೂ ಸಂಪೂರ್ಣ ಬಂದ್ ಇರಲಿದೆ.
Karnataka Bandh LIVE Updates : Many farmer outfits have called for Karnataka bandh today, check out the latest updates, breaking news, images and videos here.