ಬ್ರಿಟನ್ ಕೃಪೆ: ಬೆಂ-ಮುಂ ಮಾಯದಂಥ ಕಾರಿಡಾರ್

ಬೆಂಗಳೂರು ಮತ್ತು ಮುಂಬೈ ಮಧ್ಯೆ 950 ಕಿಮೀ ಉದ್ದಕ್ಕೂ ಸಾಗುವ ಕಾರಿಡಾರ್ ಯೋಜನೆಯ ಮಗ್ಗುಲಲ್ಲಿ ಹೊಸ ನಗರಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಭಾರತಕ್ಕೆ ಸಹಯೋಗ ನೀಡಲು ಬ್ರಟಿನ್ ಸಿದ್ದವಿರುವುದಾಗಿ ಅವರು ವಾಗ್ದಾನ ನೀಡಿದ್ದಾರೆ.
'ಇದು ದಿಢೀರನೆ ಪ್ರಕಟಿಸಿರುವ ಯೋಜನೆಯಲ್ಲ. ವಾಸ್ತವದಿಂದ ಕೂಡಿದೆ. ಬೆಂಗಳೂರು-ಮುಂಬೈ ಕಾರಿಡಾರ್ ಯೋಜನೆಯ ಸಾಧಕ-ಬಾಧಕಗಳ ಕುರಿತು ಉಭಯ ದೇಶಗಳ ವಾಣಿಜ್ಯ ಪ್ರತಿನಿಧಿಗಳು ಕಳೆದ ಒಂದು ವರ್ಷದಿಂದ ಕಾರ್ಯಮಗ್ನರಾಗಿದ್ದಾರೆ' ಎಂದು ಅವರು ಹೇಳಿದ್ದಾರೆ.
ಪ್ರಧಾನಿ ಡೇವಿಡ್ ಕೆಮರಾನ್ ಅವರು ಮೂರು ದಿನಗಳ ಭಾರತ ಪ್ರವಾಸದಲ್ಲಿದ್ದು, ವಾಣಿಜ್ಯೋದ್ಯಮಿಗಳ ಬೃಹತ್ ನಿಯೋಗದ ಜತೆಗೆ ಬಂದಿದ್ದಾರೆ.
ತಂತ್ರಜ್ಞಾನ ನಗರಿ ಬೆಂಗಳೂರು ಮತ್ತು ವಾಣಿಜ್ಯ ನಗರಿ ಮುಂಬೈ ನಡುವಿನ ಕಾರಿಡಾರ್ ಭಾರತದ ಆರ್ಥಿಕತೆ ಬೆಳವಣಿಗೆಗೆ ಪೂರಕವಾಗಲಿದೆ. ಲಕ್ಷಾಂತರ ಜನರಿಗೆ ಉದ್ಯೋಗ ಕೊಡುವ ಈ ಯೋಜನೆಯ ಜಾರಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಅವರು ತಿಳಿಸಿದ್ದಾರೆ.
ಯೋಜನೆಯ ಪ್ರಧಾನ ಅಂಶಗಳು:
* ಉದ್ದೇಶಿತ ಯೋಜನೆ ಸಾಕಾರಕ್ಕಾಗಿ ಬ್ರಿಟನ್ ವಾಸ್ತುಶಿಲ್ಪಿಗಳು, ಇಂಜಿನಿಯರುಗಳು ಹಾಗೂ ಹಣಕಾಸು ತಜ್ಞರು ಅಗತ್ಯ ನೆರವು.
* ಬೆಂಗಳೂರು-ಮುಂಬೈ ಮಧ್ಯೆ ಸುಮಾರು 1.35 ಲಕ್ಷ ಕೋಟಿ ರೂ. ವೆಚ್ಚದಲ್ಲಿ 9 ಜಿಲ್ಲೆ ಮತ್ತು ನಗರಗಳ ಅಭಿವೃದ್ಧಿ
* ಈ ಕಾರಿಡಾರ್ ಜಾಗದಲ್ಲಿ ಜನಸಂಖ್ಯೆ ಪ್ರಮಾಣ ಶೇ. 5.8ರಷ್ಟು ಹೆಚ್ಚಳವಾಗಲಿದೆ.
* 2020ರ ವೇಳೆಗೆ ದೇಶದ ಜಿಡಿಪಿಗೆ ಅದು ಶೇ. 11.8ರಷ್ಟು ಕೊಡುಗೆ ನೀಡಲಿದೆ.
* ಯೋಜನೆಯ ಮೊದಲ ಹಂತದಲ್ಲಿ ಸಾರಿಗೆ ಸಂಪರ್ಕ, ದೂರ ಸಂಪರ್ಕ, ವಿದ್ಯುತ್ ಯೋಜನೆಯಂಥ ಮೂಲಸೌಲಭ್ಯಗಳಲ್ಲಿ ಹೂಡಿಕೆ.
* ನಂತರ ಶಿಕ್ಷಣದಂಥ ಸಾಮಾಜಿಕ ಮೂಲಸೌಲಭ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಲಾಗುವುದು.
* ಯೋಜನೆಯಿಂದಾಗಿ 30 ರಿಂದ 40 ಲಕ್ಷ ಮಂದಿ ನವ ನಗರಗಳತ್ತ ವಲಸೆ ಬರಲಿದ್ದಾರೆ.
* ಪ್ರತಿ ನವ ನಗರಗಳಲ್ಲಿ 10 ಲಕ್ಷ ಮನೆಗಳು, 120 ಶಾಲೆಗಳು ಮತ್ತು 10 ಕಾಲೇಜುಗಳು ಹಾಗೂ ಆಸ್ಪತ್ರೆಗಳ ಅಗತ್ಯ ಬೀಳಲಿದೆ.
* ಇದರಿಂದ ಅವಕಾಶಗಳ ಹೆಬ್ಬಾಗಿಲು ತೆರೆಯಲಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications