ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತರ ಸಾಲಮನ್ನಾ : ಬಿಜೆಪಿಯಿಂದ ರಾಜ್ಯವ್ಯಾಪಿ ಹೋರಾಟ

|
Google Oneindia Kannada News

ಬೆಂಗಳೂರು, ಡಿಸೆಂಬರ್ 20 : ಕರ್ನಾಟಕ ಸರ್ಕಾರದ ವಿರುದ್ಧ ಹೋರಾಟ ನಡೆಸುವಂತೆ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರಿಗೆ ಸೂಚನೆ ನೀಡಿದೆ. ಸಾಲಮನ್ನಾ ಬೇಡಿಕೆ ಮುಂದಿಟ್ಟುಕೊಂಡು ಮೈತ್ರಿ ಸರ್ಕಾರದ ವಿರುದ್ಧ ಹೋರಾಟ ನಡೆಸಲಿದೆ.

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಕರ್ನಾಟಕದಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದೆ. ಆದರೆ, ಇದು ಸಂಪೂರ್ಣವಾಗಿ ಜಾರಿಗೆ ಬಂದಿಲ್ಲ ಎಂದು ಆರೋಪಿಸಿ ಬಿಜೆಪಿ ರಾಜ್ಯಾದ್ಯಂತ ಹೋರಾಟ ಮಾಡಲಿದೆ.

ವರ್ಷಾಂತ್ಯದ ವಿಶೇಷ : ಕರ್ನಾಟಕದ ಸರ್ಕಾರದ ಯೋಜನೆಗಳುವರ್ಷಾಂತ್ಯದ ವಿಶೇಷ : ಕರ್ನಾಟಕದ ಸರ್ಕಾರದ ಯೋಜನೆಗಳು

Karnataka BJP to protests against government for loan waiver

ರೈತರ ಸಾಲವನ್ನು ಕೇಂದ್ರ ಸರ್ಕಾರ ಮನ್ನಾ ಮಾಡಬೇಕು ಎಂದು ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಚ್ಚರಿಕೆ ನೀಡಿದೆ. ಆದ್ದರಿಂದ, ಮೈತ್ರಿ ಸರ್ಕಾರದ ವಿರುದ್ಧ ಹೋರಾಟ ಮಾಡಲು ಬಿಜೆಪಿ ಸೂಚನೆ ನೀಡಿದೆ.

ಶೇ 50ರಷ್ಟು ಕೃಷಿ ಸಾಲ ಮನ್ನಾ ಮಾಡಲು ಕೇಂದ್ರಕ್ಕೆ ಕರ್ನಾಟಕದ ಪತ್ರಶೇ 50ರಷ್ಟು ಕೃಷಿ ಸಾಲ ಮನ್ನಾ ಮಾಡಲು ಕೇಂದ್ರಕ್ಕೆ ಕರ್ನಾಟಕದ ಪತ್ರ

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರ್ಕಾರ ಇದುವರೆಗೂ 800 ಜನ ರೈತರ ಸಾಲಮನ್ನಾ ಮಾಡಲಾಗಿದೆ ಎಂದು ಹೇಳಿದೆ. ರಾಜ್ಯ ಬಿಜೆಪಿ ನಾಯಕರು ಈ ವಿಷಯವನ್ನು ಮುಂದಿಟ್ಟುಕೊಂಡು ಹೋರಾಟ ಮಾಡಲಿದೆ.

ನಿಮ್ಮ ಬೆಳೆಸಾಲ ಮನ್ನಾ ಆಗಲಿದೆಯೇ,ತಿಳಿಯುವುದು ಹೇಗೆ? ಇಲ್ಲಿದೆ ಮಾಹಿತಿನಿಮ್ಮ ಬೆಳೆಸಾಲ ಮನ್ನಾ ಆಗಲಿದೆಯೇ,ತಿಳಿಯುವುದು ಹೇಗೆ? ಇಲ್ಲಿದೆ ಮಾಹಿತಿ

ಸಾಲಮನ್ನಾ ಯೋಜನೆ ಘೋಷಣೆ ನಡುವೆಯೂ ಸರ್ಕಾರ ಅದನ್ನು ಸಮರ್ಪಕವಾಗಿ ಜಾರಿಗೆ ತರಲು ವಿಫಲವಾಗಿದೆ ಎಂದು ಬಿಜೆಪಿ ಆರೋಪಿಸಿದ್ದು, ಇದೇ ವಿಚಾರ ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲಿದೆ.

English summary
Karnataka BJP leaders to protest against government and demand for farmer loan waiver. Party high command directed to protest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X