ರಾಜ್ಯದ ಬರ ಜಿಲ್ಲೆಗಳಲ್ಲಿ ಮೋಡ ಬಿತ್ತನೆಗೆ ಸರ್ಕಾರ ಸಿದ್ಧತೆ
ಬೆಂಗಳೂರು, ಮೇ 14: ರಾಜ್ಯದ ಕೆಲವು ಭಾಗಗಳಲ್ಲಿ ಮಾತ್ರ ಮಳೆಯಾಗುತ್ತಿದೆ.ಆದರೆ ಇನ್ನೂ ಹಲವು ಜಿಲ್ಲೆಗಳಲ್ಲಿ ಬರ ತಾಂಡವವಾಡುತ್ತಿದೆ. ಹೀಗಾಗಿ ಮೋಡಬಿತ್ತನೆ ಕೈಗೊಳ್ಳಲು ಸರ್ಕಾರ ಮುಂದಾಗಿದೆ.
ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವ ಕೃಷ್ಣಬೈರೇಗೌಡ ಅವರು ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಈ ವಿಷಯ ತಿಳಿಸಿದ್ದಾರೆ. ಮಳೆ ಅಭಾವವಿರುವ ಜಿಲ್ಲೆಗಳಲ್ಲಿ ಮೋಡ ಬಿತ್ತನೆ ಕಾರ್ಯಕ್ಕೆ 30 ಕೋಟಿ ರೂಪಾಯಿ ಯೋಜನೆ ಸಿದ್ಧಪಡಿಸಲಾಗಿದೆ. ಇದಕ್ಕಾಗಿ ಲೋಕಸಭಾ ಚುನಾವಣೆ ಮುಂಚೆಯೇ ಟೆಂಡರ್ ಕರೆಯಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿದ್ದು ಸ್ಥಿತಿಗತಿಯ ಅವಲೋಕನ ನಡೆಸಲು ಮೇ 15ರಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ವಿಡಿಯೋ ಸಂವಾದ ನಡೆಸಲಿದ್ದಾರೆ.

ಆದರೆ ವಿಧಾನಸಭೆ ಉಪ ಚುನಾವಣೆ ನಡೆಯಲಿರುವ ಕ್ಷೇತ್ರಗಳಿರುವ ಕಲಬುರಗಿ ಮತ್ತು ಧಾರವಾಡ ಜಿಲ್ಲೆಗಳ ಅಧಿಕಾರಿಗಳನ್ನು ಹೊರತುಪಡಿಸಿ ಸಂವಾದ ನಡೆಯಲಿದೆ.












Click it and Unblock the Notifications