ಮಾವಿನಹಣ್ಣಿಗೆ 2000 ರೂ. ಬೆಂಬಲ ಬೆಲೆ: ಸರ್ಕಾರದ ಚಿಂತನೆ
ಬೆಂಗಳೂರು, ಜುಲೈ 9: ಬೆಲೆ ಕುಸಿತದಿಂದ ಕಂಗಾಲಾಗಿರುವ ಮಾವು ಬೆಳೆಗಾರರಿಗೆ ಪ್ರತಿ ಟನ್ಗೆ 2,000 ರೂಪಾಯಿ ಬೆಂಬಲ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಈ ಬಾರಿ ಮಾವು ಫಸಲು ಚೆನ್ನಾಗಿ ಆಗಿದೆ. ಆದರೆ, ಬೇಡಿಕೆ ತಗ್ಗಿದೆ. ಜನರು ಯಾಕೋ ಮಾವಿನ ಹಣ್ಣಿನ ಬಗ್ಗೆ ಒಲವು ತೋರಿಸುತ್ತಿಲ್ಲ. ಅಲ್ಲದೆ ಮಳೆ ಹೆಚ್ಚಾಗಿದ್ದರಿಂದ ಬಹುತೇಕ ಕಡೆ ಹಣ್ಣುಗಳು ಬೇಗನೆ ಕೊಳೆತು ಹೋಗುತ್ತಿವೆ.
ಮಳೆ ಹೆಚ್ಚಾದ ಬಳಿಕ ಮಾವಿನ ಹಣ್ಣಿನಲ್ಲಿ ಹುಳ ಆಗುವ ಸಾಧ್ಯತೆ ಹೆಚ್ಚಿರುವುದರಿಂದ ಜನರು ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ.
ಈ ಕಾರಣಗಳಿಂದ ಮಾವಿನ ಹಣ್ಣಿಗೆ ಬೇಡಿಕೆ ಕುಸಿದಿದೆ. ಮಾರಾಟವಾಗದೆ ವ್ಯರ್ಥವಾಗುತ್ತಿರುವ ಹಣ್ಣುಗಳನ್ನು ಜನರು ರಸ್ತೆ ಬದಿಯಲ್ಲಿ ಸುರಿಯುತ್ತಿದ್ದಾರೆ.

ಕೋಲಾರದ ವಿವಿಧೆಡೆ ರೈತರು ಮಾವಿನ ಹಣ್ಣಿನ ಬೆಲೆ ಕುಸಿತದಿಂದ ಆಕ್ರೋಶಗೊಂಡು ಮಾವಿನ ಹಣ್ಣುಗಳನ್ನು ಸುರಿದು ಅದಕ್ಕೆ ಹೂವಿನ ಹಾರ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ಮಾವಿನಹಣ್ಣಿನ ನಗರ ಎಂದೇ ಖ್ಯಾತವಾಗಿರುವ ಕೋಲಾರದ ಶ್ರೀನಿವಾಸಪುರದಲ್ಲಿ ಪ್ರತಿಭಟನೆ ಕಾವು ಹೆಚ್ಚಿದ್ದು, ಪಟ್ಟಣ ಪ್ರದೇಶದಲ್ಲಿ ಬಂದ್ ಆಚರಿಸಲಾಗುತ್ತಿದೆ. ನಗರದ ಪ್ರಮುಖ ಸರ್ಕಲ್ಗಳಲ್ಲಿ ಟೈರ್ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾವಿನ ಹಣ್ಣಿಗೆ ಬೆಂಬಲ ಬೆಲೆ ನೀಡುವ ಸಂಬಂಧ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅಧಿಕಾರಗಳ ಜತೆ ಚರ್ಚೆ ನಡೆಸಿದ್ದಾರೆ.
ನೆರೆಯ ಆಂಧ್ರಪ್ರದೇಶ, ಮಹಾರಾಷ್ಟ್ರಗಳಲ್ಲಿ ಕರ್ನಾಟಕ ಮಾವಿನ ಹಣ್ಣುಗಳ ಖರೀದಿಗೆ ನಿರ್ಬಂಧ ವಿಧಿಸಲಾಗಿದೆ. ಇದನ್ನು ತೆರವುಗೊಳಿಸಿ ಹಣ್ಣ ಖರೀದಿ ಮಾಡುವಂತೆ ಕುಮಾರಸ್ವಾಮಿ ಅವರು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದಾರೆ.
ಮಾವು ಬೆಳೆಗಾರರಿಗೆ ತಕ್ಷಣಕ್ಕೆ ನೆರವಾಗಲು ಪ್ರತಿ ಟನ್ಗೆ 2,000 ರೂಪಾಯಿ ಬೆಂಬಲ ಬೆಲೆ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications