ರೈತರ ಖಾತೆಗೆ ಹಣ ಹಾಕಲು ಅನುಮತಿ ಕೊಡಿ: ಆಯೋಗಕ್ಕೆ ರಾಜ್ಯ ಪತ್ರ
ಬೆಂಗಳೂರು, ಮಾರ್ಚ್ 27: ಸಾಲಮನ್ನಾ ಫಲಾನುಭವಿ ರೈತರುಗಳ ಖಾತೆಗೆ ಹಣ ಹಾಕಲು ಅವಕಾಶ ಮಾಡಿಕೊಡಿ ಎಂದು ರಾಜ್ಯ ಸರ್ಕಾರವು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಚುನಾವಣಾ ನೀತಿ ಸಂಹಿತೆ ಇರುವ ಕಾರಣ ರಾಜ್ಯ ಸರ್ಕಾರದ ಯೋಜನೆಯಾದ ಸಾಲ ಮನ್ನಾದ ಹಣವನ್ನು ರೈತರ ಖಾತೆಗೆ ಹಾಕದಂತೆ ಚುನಾವಣಾ ಆಯೋಗ ಸೂಚಿಸಿತ್ತು.
ರೈತ ಫಲಾನುಭವಿಗಳಿಗೆ ಸಾಲಮನ್ನಾ ಮೊತ್ತ ಬಿಡುಗಡೆ ಪ್ರಕ್ರಿಯೆ ಮುಂದುವರಿಸಲು ಅನುಮತಿ ಕೋರಿ ರಾಜ್ಯದ ಮುಖ್ಯ ಕಾರ್ಯದರ್ಶಿಗಳು ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.
— H D Kumaraswamy (@hd_kumaraswamy) March 27, 2019
ಚುನಾವಣಾ ಆಯೋಗವು ಕೇಂದ್ರ ಸರ್ಕಾರದ #pmksn ಯೋಜನೆ ಹಣಪಾವತಿಗೆ ಅನುಮತಿ ನೀಡಿರುವ ಮಾದರಿಯಲ್ಲೇ ರಾಜ್ಯದ ಮನವಿಗೂ ಸಕಾರಾತ್ಮಕ ಸ್ಪಂದನೆಯನ್ನು ನಿರೀಕ್ಷಿಸುತ್ತೇವೆ.
ಆದರೆ ಪ್ರಧಾನಿ ಅವರ 'ಕಿಸ್ಸಾನ್ ಸಮ್ಮಾನ್ ನಿಧಿ' ಯೋಜನೆಯ ಮೂಲಕ ರೈತರ ಖಾತೆಗೆ 2000 ರೂಪಾಯಿ ಹಣ ವರ್ಗಾವಣೆ ಆಗುತ್ತಿರುವುದು ನಿಂತಿಲ್ಲ ಹೀಗಾಗಿ, ನಮಗೂ ರೈತರ ಖಾತೆಗೆ ಹಣ ಹಾಕಲು ಅವಕಾಶ ಕೊಡಿ ಎಂದು ರಾಜ್ಯ ಸರ್ಕಾರವು ಪತ್ರ ಬರೆದಿದೆ.

ಸರ್ಕಾರದ ಪರವಾಗಿ ರಾಜ್ಯದ ಮುಖ್ಯ ಕಾರ್ಯದರ್ಶಿ ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ರೈತರ ಖಾತೆಗೆ ಹಣ ವರ್ಗಾಯಿಸಲು ಅವಕಾಶ ಕೊಡಿ ಎಂದು ಕೋರಿದ್ದಾರೆ.
ಇದೇ ವಿಷಯವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಹ ತೀವ್ರ ಅಸಮಾಧಾನವನ್ನು ಕೆಲವು ದಿನಗಳ ಹಿಂದೆ ವ್ಯಕ್ತಪಡಿಸಿದ್ದರು. ಕೇಂದ್ರದ ಯೋಜನೆಗೆ ನೀತಿ ಸಂಹಿತೆ ವಿಧಿಸಲಾಗಿಲ್ಲ, ಆದರೆ ನಮ್ಮ ಯೋಜನೆಗೆ ಮಾತ್ರ ನೀತಿ ಸಂಹಿತೆ ಹೇರಲಾಗಿದೆ ಎಂದು ಅವರು ಆಕ್ರೋಶ ಹೊರಹಾಕಿದ್ದರು.
-
ಸರ್ಪೇಸಿ ಕಾಯ್ದೆ ಸಂಕಷ್ಟ: ಕಾಫಿ ಬೆಳೆಗಾರರ ಪರ ಕುಮಾರಸ್ವಾಮಿ ಮನವಿ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ












Click it and Unblock the Notifications