ರೈತರ ಖಾತೆಗೆ ಹಣ ಹಾಕಲು ಅನುಮತಿ ಕೊಡಿ: ಆಯೋಗಕ್ಕೆ ರಾಜ್ಯ ಪತ್ರ

ಬೆಂಗಳೂರು, ಮಾರ್ಚ್ 27: ಸಾಲಮನ್ನಾ ಫಲಾನುಭವಿ ರೈತರುಗಳ ಖಾತೆಗೆ ಹಣ ಹಾಕಲು ಅವಕಾಶ ಮಾಡಿಕೊಡಿ ಎಂದು ರಾಜ್ಯ ಸರ್ಕಾರವು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಚುನಾವಣಾ ನೀತಿ ಸಂಹಿತೆ ಇರುವ ಕಾರಣ ರಾಜ್ಯ ಸರ್ಕಾರದ ಯೋಜನೆಯಾದ ಸಾಲ ಮನ್ನಾದ ಹಣವನ್ನು ರೈತರ ಖಾತೆಗೆ ಹಾಕದಂತೆ ಚುನಾವಣಾ ಆಯೋಗ ಸೂಚಿಸಿತ್ತು.

ಆದರೆ ಪ್ರಧಾನಿ ಅವರ 'ಕಿಸ್ಸಾನ್ ಸಮ್ಮಾನ್ ನಿಧಿ' ಯೋಜನೆಯ ಮೂಲಕ ರೈತರ ಖಾತೆಗೆ 2000 ರೂಪಾಯಿ ಹಣ ವರ್ಗಾವಣೆ ಆಗುತ್ತಿರುವುದು ನಿಂತಿಲ್ಲ ಹೀಗಾಗಿ, ನಮಗೂ ರೈತರ ಖಾತೆಗೆ ಹಣ ಹಾಕಲು ಅವಕಾಶ ಕೊಡಿ ಎಂದು ರಾಜ್ಯ ಸರ್ಕಾರವು ಪತ್ರ ಬರೆದಿದೆ.

Karnataka government wrote letter to ECI about farmer loan wavier release

ಸರ್ಕಾರದ ಪರವಾಗಿ ರಾಜ್ಯದ ಮುಖ್ಯ ಕಾರ್ಯದರ್ಶಿ ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ರೈತರ ಖಾತೆಗೆ ಹಣ ವರ್ಗಾಯಿಸಲು ಅವಕಾಶ ಕೊಡಿ ಎಂದು ಕೋರಿದ್ದಾರೆ.

ಇದೇ ವಿಷಯವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಹ ತೀವ್ರ ಅಸಮಾಧಾನವನ್ನು ಕೆಲವು ದಿನಗಳ ಹಿಂದೆ ವ್ಯಕ್ತಪಡಿಸಿದ್ದರು. ಕೇಂದ್ರದ ಯೋಜನೆಗೆ ನೀತಿ ಸಂಹಿತೆ ವಿಧಿಸಲಾಗಿಲ್ಲ, ಆದರೆ ನಮ್ಮ ಯೋಜನೆಗೆ ಮಾತ್ರ ನೀತಿ ಸಂಹಿತೆ ಹೇರಲಾಗಿದೆ ಎಂದು ಅವರು ಆಕ್ರೋಶ ಹೊರಹಾಕಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+