"ಹಾಲಿನ ದರ ಏರಿಸಿಯೂ ಮೋಸ ಮಾಡುತ್ತಿರುವ ಸರ್ಕಾರ"
ಜನವರಿ, ಜನವರಿ, 05: ರಾಜ್ಯ ಸರ್ಕಾರ ಹಾಲಿನ ದರ ಹೆಚ್ಚಳ ಮಾಡಿದ್ದರೂ ಅದರಿಂದ ರೈತರಿಗೆ ಯಾವ ಲಾಭವಾಗುತ್ತಿಲ್ಲ. ಆಡಳಿತ ವೆಚ್ಚ ಸರಿದೂಗಿಸಲು ಹೆಚ್ಚಳ ಮಾಡಿದೆಯೇ ವಿನಃ ರೈತರಿಗೆ ನೆರವು ನೀಡಲು ಅಲ್ಲ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆರೋಪಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಾಲಿಗೆ ವೈಜ್ಞಾನಿಕ ಬೆಲೆ ಕೊಡುವುದಾದರೆ ಲೀಟರ್ ಒಂದಕ್ಕೆ 101 ರೂಗಳನ್ನು ನೀಡಿ ಎಂದು ಆಗ್ರಹಿಸಿದ್ದಾರೆ.[ಹಾಲಿನ ದರ 4 ರೂ ಏರಿಕೆ, ಎಲ್ಲಿ ದರ ಎಷ್ಟಿದೆ?]

ಸರ್ಕಾರಿ ನೌಕರರಿಗೆ 6ನೇ ವೇತನ ಅಯೋಗ 7ನೇ ವೇತನ ಅಯೋಗ ಜಾರಿ ಗೊಳಿಸುವ ಸರ್ಕಾರಕ್ಕೆ ರೈತರ ಪರವಾಗಿ ನಿಜ ಕಾಳಜಿ ಇಲ್ಲ. ಹೆಚ್ಚುವರಿ ಸಂಗ್ರಹವಾಗುವ ಹಣವನ್ನು ಸಂಸ್ಥೆಯ ಆಡಳಿತ ವೆಚ್ಚಕ್ಕೆ ಬಳಕೆ ಮಾಡಿ ಉಳಿದರೆ ಅದನ್ನು ರೈತರಿಗೆ ನೇರವಾಗಿ ತಲುಪಿಸಬೇಕೆಂದು ಸರ್ಕಾರ ತೀರ್ಮಾನ ಅವೈಜ್ಞಾನಿಕ ಎಂದು ದೂರಿದ್ದಾರೆ.
ರೈತರ ಉತ್ಪಾದನಾ ವೆಚ್ಚ ಮತ್ತು ನಷ್ಟವನ್ನು ಸರಿದೂಗಿಸಲು ಸರ್ಕಾರ ಪ್ರಯತ್ನ ಮಾಡಲೇ ಇಲ್ಲ. ಪಂಜಾಬ್ ನಲ್ಲಿ ರೈತರಿಗೆ ಒಂದು ಲೀಟರಿಗೆ 50 ರೂ ನೀಡುತ್ತಿದ್ದಾರೆ. ಆಂಧ್ರ ಹಾಗೂ ತಮಿಳುನಾಡುಗಳಲ್ಲಿ 39-40 ರೂಗಳು ನೀಡುತ್ತಿದ್ದಾರೆ. ಸರ್ಕಾರ ಇಲ್ಲಿ ಗ್ರಾಹಕರ ಜೇಬಿಗೂ ಕತ್ತರಿ ಹಾಕಿ, ರೈತರಿಗೂ ಮೋಸ ಮಾಡಿ, ಆಡಳಿತ ವೆಚ್ಚ ಮಾಡಲು ಪ್ರತಿ ಸಾರಿ ಬೆಲೆ ಹೆಚ್ಚು ಮಾಡುತ್ತಿರುವುದು ತಪ್ಪು ಎಂದು ಚಂದ್ರಶೇಖರ್ ವಾದ ಮುಂದಿಟ್ಟಿದ್ದಾರೆ.[ಲೀಟರ್ ಹಾಲಿಗೆ 30 ರು. ಕೊಟ್ಟರೆ ಸಾಕು]
ರಾಜ್ಯದಲ್ಲಿ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಅತ್ಮಹತ್ಯೆಯ ದಾರಿ ಹಿಡಿಯುತ್ತಿರುವುದನ್ನು ತಪ್ಪಿಸಲು ರೈತರ ನೆರವಿಗೆ ಬರಬೇಕಾದ ಸರ್ಕಾರ ರೈತರನ್ನು ಮೋಸ ಮಾಡುತ್ತಿರುವುದು ದುರದೃಷ್ಟವೇ ಸರಿ. ಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ಬೆಲೆ ತುಂಬಾ ಕಡಿಮೆ ಇದ್ದರು, ಈಗ ಏರಿಸಿರುವ ಬೆಲೆಯನ್ನು ವಿರೋಧಿಸಿ ಮೊನ್ನೆ ಚಳವಳಿ ಮಾಡಿದವರಿಗೂ ರೈತರ ಬಗ್ಗೆ ಕಾಳಜಿ ಇಲ್ಲ ಎಂದು ಕಾಣುತ್ತಿದೆ ಎಂದು ಚಂದ್ರಶೇಖರ್ ಹೇಳಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications