ಹೊಸಕೋಟೆ-ಪೆರಂಬದೂರು ಪ್ರಯಾಣ ಎರಡೇ ಗಂಟೆ!

ಇದೆಲ್ಲಾ ಬರೀ ಬಜೆಟ್ ಪುಸ್ತಕದಲ್ಲಷ್ಟೇ ಉಳಿಯುತ್ತದಾ ಅಥವಾ ದೇಶದಲ್ಲಿ ನಿಜಕ್ಕೂ ಎಲ್ಲಾದರೂ ಈಗಾಗಲೇ ಇಂತಹ ಕಾರ್ಯಯೋಜನೆಗಳು ನಡೆದಿವೆಯಾ? ಅಂದರೆ ದೆಹಲಿ- ಮುಂಬೈ ಕೈಗಾರಿಕಾ ಕಾರಿಡಾರ್ ಧುತ್ತನೆ ಎದುರಾಗುತ್ತದೆ. ಆ ಕಾರಿಡಾರ್ ಯೋಜನೆಯ ನಿರ್ಮಾಣ ಕಾರ್ಯ ಕ್ಷಿಪ್ರವಾಗಿ ಸಾಗಿದೆ. ಈ ಯೋಜನೆಯಡಿ ಹೊಸದಾಗಿ ಸೇರ್ಪಡೆಯಾಗುವ ಏಳು ನಗರಗಳನ್ನು ನಿನ್ನೆ ಬಜೆಟಿನಲ್ಲಿ ಅಂತಿಮಗೊಳಿಸಲಾಗಿದೆ.
ನಿನ್ನೆ ಹಣಕಾಸು ಸಚಿವ ಪಿ ಚಿದಂಬರಂ ಮಂಡಿಸಿದ ಕೇಂದ್ರ ಬಜೆಟ್ನಲ್ಲಿ ದಕ್ಷಿಣ ಭಾರತದ ಪ್ರಮುಖ ನಗರಗಳನ್ನು ಸಂಪರ್ಕಿಸುವ ವಾಣಿಜ್ಯ ಕಾರಿಡಾರ್ ಯೋಜನೆಯನ್ನು ಘೋಷಿಸಿರುವ ಹಿನ್ನೆಲೆಯಲ್ಲಿ, ಆಂಧ್ರ ಪ್ರದೇಶ-ಚೆನ್ನೈ-ಬೆಂಗಳೂರು-ಮುಂಬೈ ವಾಣಿಜ್ಯ ಕಾರಿಡಾರ್ ಯೋಜನೆ ನನಸಾಗುವ ಹಂತದಲ್ಲಿದೆ. ಪೆನಿನ್ಸುಲರ್ ರೀಜನ್ ಇಂಡಸ್ಟ್ರಿಯಲ್ ಡೆವಲಪ್ಮಂಟ್ ಕಾರಿಡಾರ್ (PRIDe corridor) ಎಂಬುದಾಗಿಯೂ ಈ ಯೋಜನೆಯನ್ನು ಕರೆಯಲಾಗುತ್ತದೆ.
ಚೆನ್ನೈ-ಬೆಂಗಳೂರು ಕಾರಿಡಾರ್: ಬೆಂಗಳೂರು- ಚೆನ್ನೈ ಕೈಗಾರಿಕಾ ಕಾರಿಡಾರ್ ಬೆಂಗಳೂರು ಹೊರವಲಯದ ಹೊಸಕೋಟೆಯಿಂದ ಆರಂಭವಾಗಿ ಚೆನ್ನೈ ಹೊರವಲಯದ ಶ್ರೀಪೆರಂಬದೂರು ವರೆಗೆ ತಲುಪಲಿದೆ. ಈ ವ್ಯಾಪ್ತಿಯಲ್ಲಿ ಐದು ಕೈಗಾರಿಕಾ ಹಬ್ಗಳನ್ನು ಗುರುತಿಸಲಾಗಿದೆ.
260 ಕಿಮೀ ಎಕ್ಸ್ಪ್ರೆಸ್ ವೇನಲ್ಲಿ ವಾಹನಗಳು 150 ಕಿ.ಮೀ. ವೇಗದಲ್ಲಿ ಧಾವಿಸಬಹುದಾಗಿದೆ ಹಾಗೂ ಹೊಸಕೋಟೆಯಿಂದ ಶ್ರೀಪೆರಂಬುದೂರಿಗೆ ಎರಡು ಗಂಟೆಯಲ್ಲಿ ಹೋಗಬಹುದಾಗಿದೆ.
ಕರ್ನಾಟಕದ ಹೊಸಕೋಟೆ, ಬಂಗಾರ ಪೇಟೆ, ಆಂಧ್ರ ಪ್ರದೇಶದ ಪಲಮನೇರು, ಚಿತ್ತೂರು, ತಮಿಳುನಾಡಿನ ಶ್ರೀಪೆರಂಬದೂರನ್ನು ಕೈಗಾರಿಕಾ ಹಬ್ಗಳನ್ನು ಈ ಕಾರಿಡಾರ್ ಒಳಗೊಳ್ಳಲಿದೆ. ಇಲ್ಲಿ ಉಕ್ಕು, ಸಿಮೆಂಟ್, ಆಹಾರ ಸಂಸ್ಕರಣೆ, ಐಟಿ, ಬಿಟಿ, ಆಟೋ ಮೊಬೈಲ್, ರೆಡಿಮೆಡ್ ಗಾರ್ಮೆಂಟ್ಸ್ಗೆ ಪ್ರಾಶಸ್ತ್ಯ ನೀಡಲಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications